Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಲಸಿಕೆ ಪಡೆದವರು ಮೃತಪಟ್ಟ ಪ್ರಕರಣ:...

ಕೊರೋನ ಲಸಿಕೆ ಪಡೆದವರು ಮೃತಪಟ್ಟ ಪ್ರಕರಣ: ಸಾವಿನ ಕಾರಣಗಳ ಮರು ಪರೀಕ್ಷೆಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ30 Jan 2021 11:29 PM IST
share
ಕೊರೋನ ಲಸಿಕೆ ಪಡೆದವರು ಮೃತಪಟ್ಟ ಪ್ರಕರಣ: ಸಾವಿನ ಕಾರಣಗಳ ಮರು ಪರೀಕ್ಷೆಗೆ ನಿರ್ಧಾರ

ಹೊಸದಿಲ್ಲಿ, ಜ.30: ಕೊರೋನ ಲಸಿಕೆ ಪಡೆದ ಕೂಡಲೇ ಮೃತಪಟ್ಟ ವ್ಯಕ್ತಿಗಳ ಸಾವಿಗೆ ಕಾರಣಗಳ ಬಗ್ಗೆ ಮರು ಪರೀಕ್ಷೆ ನಡೆಸಲು ರಾಷ್ಟ್ರೀಯ ಎಇಎಫ್‌ಐ ಸಮಿತಿ ನಿರ್ಧರಿಸಿದೆ. ಈ ರೀತಿಯ ಮರಣ ಪ್ರಕರಣಗಳ ಕುರಿತು ಸರಿಯಾದ ರೀತಿಯಲ್ಲಿ ಪರೀಕ್ಷೆ ನಡೆಯುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಮಿತಿ ತಿಳಿಸಿದೆ.

ಬಹುತೇಕ ಪ್ರಕರಣಗಳಲ್ಲಿ ಸಾವಿನ ನಿಖರ ಕಾರಣ ಕಂಡುಕೊಳ್ಳಲು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ‘ಲಸಿಕೆ ಪಡೆದ ನಂತರದ ಪ್ರತಿಕೂಲ ಪರೀಕ್ಷೆ ’(ಎಇಎಫ್‌ಐ) ಸಮಿತಿಯ ಸಲಹೆಗಾರ ಎನ್‌.ಕೆ. ಅರೋರಾ ಹೇಳಿರುವುದಾಗಿ ವರದಿಯಾಗಿದೆ. ಲಸಿಕೆ ಪಡೆದ ಬಳಿಕ ವರದಿಯಾಗುವ ಪ್ರತಿಕೂಲ ಘಟನೆಗಳ ಬಗ್ಗೆ ನಿಗಾ ವಹಿಸಲು ಕೇಂದ್ರ ಸರಕಾರ ಎಇಎಫ್‌ಐ ಸಮಿತಿ ರಚಿಸಿದೆ. ಯಾವುದೇ ಸಾವು ಕೊರೋನ ಲಸಿಕೆಗೆ ಸಂಬಂಧಿಸಿದ್ದಲ್ಲ ಎಂದು ಪ್ರಾಥಮಿಕ ಮಾಹಿತಿಯಿಂದ ಕಂಡುಬಂದಿದೆ.

ಈಗ ಮತ್ತೊಮ್ಮೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು ಮಾಡಿರುವ ಕ್ರಮದಂತೆ ವೈಜ್ಞಾನಿಕ ಮತ್ತು ಪಾರದರ್ಶಕ ರೀತಿಯಲ್ಲಿ ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತದೆ. ರಾಷ್ಟ್ರೀಯ ಎಇಎಫ್‌ಐ ಸಮಿತಿಯ ಸಾಂದರ್ಭಿಕ ಪರಿಶೀಲನೆಯ ವರದಿಯನ್ನು ಸಾರ್ವಜನಿಕರ ಮಾಹಿತಿಗೆ ಒದಗಿಸಲಾಗುವುದು ಎಂದು ಅರೋರಾ ಹೇಳಿದ್ದಾರೆ. ಕೊರೋನ ಲಸಿಕೆ ಅಭಿಯಾನದಲ್ಲಿ ದೇಶದಲ್ಲಿ ಇದುವರೆಗೆ 28 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದ್ದು ಲಸಿಕೆ ಪಡೆದ 1ರಿಂದ 5 ದಿನದೊಳಗೆ 10 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಆರೋಗ್ಯ ಕಾರ್ಯಕರ್ತರು 25ರಿಂದ 56 ವರ್ಷದ ಪ್ರಾಯದವರಾಗಿದ್ದಾರೆ. ಕರ್ನಾಟಕ, ಉ.ಪ್ರದೇಶ, ರಾಜಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಹರ್ಯಾಣ ಮತ್ತು ಒಡಿಶಾದಲ್ಲಿ ಸಾವಿನ ಪ್ರಕರಣ ವರದಿಯಾಗಿದೆ. ಆದರೆ ಈ ಎಲ್ಲಾ ಪ್ರಕರಣಗಳಲ್ಲೂ ಲಸಿಕೆ ಪಡೆದಿರುವುದು ಸಾವಿಗೆ ಕಾರಣವಲ್ಲ ಎಂದು ಜಿಲ್ಲಾ ಎಇಎಫ್‌ಐ ಸಮಿತಿ ವರದಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X