ಗೃಹಣಿ ಆತ್ಮಹತ್ಯೆ: ಪತಿ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂದ ಪೋಷಕರು

ಬೆಂಗಳೂರು, ಜ.31: ವರದಕ್ಷಿಣೆ ಕಿರುಕುಳದ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವರ್ತೂರಿನ ಉಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಪತಿಯ ಮನೆಯವರೇ ತಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
2015ರಲ್ಲಿ ಉಷಾ ಮತ್ತು ರಂಜಿತ್ ಮದುವೆಯಾಗಿದ್ದು, ಅಂದಿನಿಂದಲೂ ಗಂಡನ ಕುಟುಂಬದವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಯಾವುದೇ ಕೆಲಸಕ್ಕೆ ಹೋಗದ ರಂಜಿತ್, ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ರಂಜಿತ್ ಹಾಗೂ ಕುಟುಂಬದವರು ಸೇರಿ ತಮ್ಮ ಮಗಳನ್ನು ಕೊಲೆ ಮಾಡಿರುವುದಾಗಿ ಉಷಾ ಕುಟುಂಬಸ್ಥರು ದೂರಿದ್ದಾರೆ.
ಘಟನೆ ಸಂಬಂಧ ವರ್ತೂರು ಪೊಲೀಸರು ಪ್ರಕರಣ ದಾಖಲಿಸಿ ಪತಿಯನ್ನು ವಶಕ್ಕೆ ಪಡೆದ್ದಾರೆ.
Next Story





