Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಜನತೆಯ ದಾಹ ತಣಿಸುವ ಜಲಮಂಡಳಿ...

ಬೆಂಗಳೂರು: ಜನತೆಯ ದಾಹ ತಣಿಸುವ ಜಲಮಂಡಳಿ ಕಾರ್ಯಯೋಜನೆ ಯಶಸ್ಸಿನತ್ತ ದಾಪುಗಾಲು

ವಾರ್ತಾಭಾರತಿವಾರ್ತಾಭಾರತಿ1 Feb 2021 11:52 PM IST
share
ಬೆಂಗಳೂರು: ಜನತೆಯ ದಾಹ ತಣಿಸುವ ಜಲಮಂಡಳಿ ಕಾರ್ಯಯೋಜನೆ ಯಶಸ್ಸಿನತ್ತ ದಾಪುಗಾಲು

ಬೆಂಗಳೂರು, ಫೆ.1: ಬೆಂಗಳೂರಿನಲ್ಲಿ ಔದ್ಯೋಗಿಕ ಕ್ಷೇತ್ರ ವಿಸ್ತರಿಸುತ್ತಿದ್ದಂತೆ ಜನಸಂಖ್ಯೆಯ ಪ್ರಮಾಣ ಹೆಚ್ಚಾಗುತ್ತಿದೆ. ಸದ್ಯ ನಗರ ಜನಸಂಖ್ಯೆ ಒಂದು ಕೋಟಿಗೂ ಹೆಚ್ಚು ಇದ್ದು, ಎಲ್ಲರಿಗೂ ಮೂಲಭೂತ ಸೌಕರ್ಯಗಳು ಒದಗಿಸುವಲ್ಲಿ ಬೆಂಗಳೂರಿನ ಆಡಳಿತ ಸಂಸ್ಥೆಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯಯೋಜನೆಯನ್ನು ರೂಪಿಸಿಕೊಂಡಿವೆ. ಅದರಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡ್ಲ್ಯುಎಸ್ಸೆಸ್‍ಬಿ)ಯ ಕಾರ್ಯಯೋಜನೆಗಳನ್ನು ಅವಲೋಕಿಸಿದರೆ ನಗರದ ಜನತೆಯ ನೀರಿನ ದಾಹವನ್ನು ತಣಿಸುವಲ್ಲಿ ಯಶಸ್ವಿಯಾಗಿದೆ ಎಂಬುದನ್ನು ಮನಗಾಣಬಹುದಾಗಿದೆ.

ಬೆಂಗಳೂರು ನಗರಕ್ಕೆ 1896ರಿಂದ ನಗರದ ಸಮೀಪವೇಯಿದ್ದ ಹೆಸರುಘಟ್ಟದಿಂದ ಸೋಸಿದ ನೀರಿನ ಪೂರೈಕೆಯನ್ನು ಮಾಡಲಾಯಿತು. ನಿರಂತರವಾದ ನಗರದ ಬೆಳವಣಿಗೆಯಿಂದ ಜನಸಂಖ್ಯೆ ಹೆಚ್ಚಾಗುತ್ತಿದ್ದಂತೆ ಹೊಸ ಸಂಪನ್ಮೂಲಗಳ ಕಡೆಗೆ ಮುಖಮಾಡುವುದು ಅನಿವಾರ್ಯವಾಯಿತು. ಅದರ ಪ್ರತಿಫಲವಾಗಿ ನೀರಿನ ಪೂರೈಕೆಗೆ ಕಾವೇರಿ ನದಿಯನ್ನು ಗುರುತಿಸಲಾಯಿತು. 1974ರಿಂದ ಕಾವೇರಿ ಮೂಲದಿಂದ ಹಂತ, ಹಂತವಾಗಿ ನೀರು ಪೂರೈಕೆ ಯೋಜನೆಗಳನ್ನು ರೂಪಿಸಲಾಯಿತು.

ತಿಪ್ಪಗೊಂಡನಹಳ್ಳಿ ಜಲಾಶಯ: 1933ರಲ್ಲಿ ಬೆಂಗಳೂರಿನ ಪಶ್ಚಿಮಕ್ಕೆ 26ಕಿಮೀ ದೂರದಲ್ಲಿ ಹೆಸರುಘಟ್ಟ ಜಲಾಶಯದ ಕೆಳ ಹರಿವಿನಲ್ಲಿ ಅರ್ಕಾವತಿ ನದಿಗೆ ಅಡ್ಡಲಾಗಿ ತಿಪ್ಪಗೊಂಡನಹಳ್ಳಿ ಬಳಿ ಚಾಮರಾಜನಗರ ಜಲಾಶಯವನ್ನು ನಿರ್ಮಿಸಲಾಯಿತು. ಈ ಭಾಗದಿಂದ 1988ರವರೆಗೆ ನೀರು ಪೂರೈಕೆ ಆಗುತ್ತಿತ್ತು. ಆ ನಂತರ ಮುಂಗಾರು ಮಳೆ ನಿರಂತರವಾಗಿ ವಿಫಲವಾದ ಕಾರಣ ಜಲಾಶಯಕ್ಕೆ ನೀರಿನ ಹರಿವು ಇಲ್ಲವಾಗಿದೆ. ಹೀಗಾಗಿ ಅರ್ಕಾವತಿ ವಲಯದ ಜಲಾಗಾರಗಳಿಗೂ ಕಾವೇರಿ ನೀರನ್ನೇ ಪೂರೈಸಲಾಗುತ್ತಿದೆ.

ಕಾವೇರಿ ನೀರು ಪೂರೈಕೆ ಯೋಜನೆಗಳು: 1960ರ ನಂತರದ ದಿನಗಳಲ್ಲಿ ಸುಮಾರು 16 ಲಕ್ಷದಷ್ಟಿದ್ದ ಜನಸಂಖ್ಯೆಗೆ ಬೇಕಾದ ನೀರಿನ ಬೇಡಿಕೆಯನ್ನು ಅರ್ಕಾವತಿಯಿಂದ ಲಭ್ಯವಾಗುತ್ತಿದ್ದ 186 ದಶಲಕ್ಷ ಲೀಟರ್ ನೀರು ಪೂರೈಸುವುದು ಕಷ್ಟವಾಯಿತು. ಈ ಹಿನ್ನೆಲೆಯಲ್ಲಿ ಬೆಂಗಳೂರು ನರಗದ ದಕ್ಷಿಣಕ್ಕೆ 86 ಕಿಮೀ ದೂರದಲ್ಲಿರುವ ಕಾವೇರಿ ನದಿಯಿಂದ ಜಲಮಂಡಳಿಗೆ ಕುಡಿಯುವ ನೀರನ್ನು ನಿಗದಿಗೊಳಿಸಿತು.

ಕಾವೇರಿ ಮೂಲದಿಂದ 1974ರಿಂದ ಅನೇಕ ಹಂತಗಳಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕಾವೇರಿ ನೀರು ಪೂರೈಕೆ ಯೋಜನೆ ಹಂತ-1ನ್ನು 1974ರಲ್ಲಿ ಅನುಷ್ಠಾನಗೊಳಿಸಿದ್ದು, ಅದರಿಂದ 135 ದಶಲಕ್ಷ ಲೀಟರ್ ನೀರನ್ನು ನಗರಕ್ಕೆ ಪೂರೈಸಲಾಗಿದೆ. ಆ ನಂತರ 2ನೇ ಹಂತದ ಯೋಜನೆಯನ್ನು 1982ರಲ್ಲಿ ಅನುಷ್ಠಾನಗೊಳಿಸಿದ್ದು, ಇದರಲ್ಲಿ 135 ದಶಲಕ್ಷ ಲೀಟರ್ ನೀರನ್ನು ನಗರಕ್ಕೆ ಪೂರೈಸುತ್ತಿದೆ.

1994-95ರಲ್ಲಿ 3ನೇ ಹಂತಹ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಈ ಯೋಜನೆಯ ಸಾಮರ್ಥ್ಯ 270ದಶಲಕ್ಷ ಲೀಟರ್ ಆಗಿದೆ. 2006ರಲ್ಲಿ ಕಾವೇರಿ 4ನೇ ಹಂತ 1ನೇ ಘಟ್ಟದ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಇದರ ಸಾಮರ್ಥ್ಯ 270 ದಶಲಕ್ಷ ಲೀಟರ್ ಆಗಿದೆ. ತದನಂತರ 2012ರಲ್ಲಿ ಕಾವೇರಿ 4ನೇ ಹಂತ 2ನೇ ಘಟ್ಟದ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಅದರ ಸಾಮರ್ಥ್ಯ 500 ದಶಲಕ್ಷ ಲೀಟರ್ ಆಗಿರುತ್ತದೆ. ಈಗ ಕಾವೇರಿ 5ನೇ ಹಂತದ ನೀರು ಪೂರೈಕೆ ಕಾಮಗಾರಿ ಪ್ರಗತಿಯ ಹಂತದಲ್ಲಿದೆ.

ಜಲಮಂಡಳಿಯ ಧ್ಯೇಯೋದ್ದೇಶ: ಬೆಂಗಳೂರು ಜನತೆಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸಾಕಷ್ಟು ಪ್ರಮಾಣದಲ್ಲಿ ಪೂರೈಸುವುದು ಮತ್ತು ತ್ಯಾಜ್ಯ ನೀರನ್ನು ಅಪೇಕ್ಷಿತ ಗುಣಮಟ್ಟಕ್ಕೆ ಸಂಸ್ಕರಿಸಿ ಮರು ಬಳಕೆಗೆ ಯೋಗ್ಯವೆನಿಸುವಂತೆ ಮಾಡುವುದು  ಜಲಮಂಡಳಿಯ ಉದ್ದೇಶವಾಗಿದೆ.

ಜಲಮಂಡಳಿಯ ಗುರಿ: ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸಾಧ್ಯವಾದಷ್ಟು ಕಡಿಮೆ ವೆಚ್ಚದಲ್ಲಿ ಗ್ರಾಹಕರಿಗೆ ಮೌಲ್ಯಯುತವಾದ ಹಾಗೂ ತೃಪ್ತಿಕರ ಸೇವೆಯನ್ನು ನೀಡಿ ಅವರ ಅಗತ್ಯಗಳಿಗೆ ಸ್ಪಂದಿಸಿ, ನಿರಂತರ ಸಂಪರ್ಕ ಹೊಂದಿ ಗ್ರಾಹಕರ ಸೇವೆಯೇ ಪ್ರಮುಖ ಆದ್ಯತೆಯಾಗಿಸಿ, ಕಾರ್ಯಪ್ರವೃತ್ತವಾಗುವ ದಿಸೆಯಲ್ಲಿ ಜಲಮಂಡಳಿ ಕಾರ್ಯನಿರ್ವಹಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X