Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಂಘು : ರೈತರಿಗೆ ನೀರು, ಶೌಚಾಲಯಕ್ಕೂ...

ಸಿಂಘು : ರೈತರಿಗೆ ನೀರು, ಶೌಚಾಲಯಕ್ಕೂ ತಡೆ !

ವಾರ್ತಾಭಾರತಿವಾರ್ತಾಭಾರತಿ3 Feb 2021 10:17 AM IST
share
ಸಿಂಘು : ರೈತರಿಗೆ ನೀರು, ಶೌಚಾಲಯಕ್ಕೂ ತಡೆ !

ಹೊಸದಿಲ್ಲಿ: ದೆಹಲಿ- ಚಂಡೀಗಢ ಹೆದ್ದಾರಿಗೆ ನಾಲ್ಕರಿಂದ ಐದು ಅಡಿ ಎತ್ತರದ ಕಾಂಕ್ರೀಟ್ ಗೋಡೆಯನ್ನು ದೆಹಲಿ ಪೊಲೀಸರು ಕಟ್ಟಿರುವ ಕಾರಣದಿಂದ ಪ್ರತಿಭಟನಾ ನಿರತ ಸಂಯುಕ್ತ ಕಿಸಾನ್ ಮೋರ್ಚಾ ಕಾರ್ಯಕರ್ತರು ಅಕ್ಷರಶಃ ರಾಜಧಾನಿ ಜತೆ ಸಂಪರ್ಕ ಕಡಿದುಕೊಂಡಿದ್ದಾರೆ. ಇದರಿಂದ ಪ್ರತಿಭಟನಾ ಸ್ಥಳದಲ್ಲಿ ನೀರು, ಶೌಚಾಲಯದಂಥ ಕನಿಷ್ಠ ಸೌಲಭ್ಯಗಳಿಗೂ ತತ್ವಾರ ಆಗಿದೆ.

ಈ ಗೋಡೆಯ ಹಿಂದೆ ಐದು ಪದರದ ಬ್ಯಾರಿಕೇಡ್‌ಗಳನ್ನು 1.5 ಕಿಲೋಮೀಟರ್ ವಿಸ್ತೀರ್ಣಯದಲ್ಲಿ ಅಳವಡಿಸಲಾಗಿದೆ. ಇದರಿಂದಾಗಿ ದೆಹಲಿ ಜಲಮಂಡಳಿ ಪ್ರತಿಭಟನಾನಿರತ ರೈತರ ನೆರವಿಗಾಗಿ ಕಳುಹಿಸಿಕೊಟ್ಟಿರುವ ನೀರಿನ ಟ್ಯಾಂಕರ್‌ಗಳು ಮತ್ತು ಸಂಚಾರಿ ಶೌಚಾಲಯಗಳು ಕೂಡಾ ರೈತರನ್ನು ತಲುಪುತ್ತಿಲ್ಲ.

ರೈತರಿಗೆ ಇದರಿಂದ ಭಾರೀ ನಿರಾಸೆಯಾಗಿದೆ; ಆದರೆ ರೈತರು ಹತಾಶರಾಗಿಲ್ಲ. "ನಾವು ರೈತರು. ಅಗತ್ಯ ಬಿದ್ದರೆ ನಾವು ಕೊಳವೆಬಾವಿ ಕೊರೆಯುತ್ತೇವೆ. ಈ ಮೂಲಕ ನಮ್ಮ ಮೇಲೆ ಸವಾರಿ ಮಾಡಬಹುದು ಎಂದು ಸರ್ಕಾರ ಯೋಚಿಸಬೇಕಿಲ್ಲ. ನಮ್ಮ ಮಕ್ಕಳಿಗೆ ಸುಭದ್ರ ಭವಿಷ್ಯವನ್ನು ಕಲ್ಪಸದೇ ನಾವು ನಮ್ಮ ಗ್ರಾಮಗಳಿಗೆ ತೆರಳುವುದಿಲ್ಲ" ಎಂದು ಪಾಟಿಯಾಲದ ರೈತ ಕುಲಜೀತ್ ಸಿಂಗ್ ಹೇಳಿದ್ದಾರೆ.

ಪೊಲೀಸರ ಕ್ರಮದಿಂದಾಗಿ ಗಡಿಯ ಇನ್ನೊಂದು ಭಾಗದಲ್ಲಿರುವ ಶೌಚಾಲಯಗಳು ಬಳಕೆಗೆ ಲಭ್ಯವಾಗದೇ ಇರುವ ಕಾರಣದಿಂದ ಕಿಸಾನ್ ಟೌನ್‌ಶಿಪ್‌ನಲ್ಲಿ ಗಂಭೀರ ನೈರ್ಮಲ್ಯ ಸಮಸ್ಯೆ ತಲೆದೋರಿದೆ. ಇದರ ಪರಿಣಾಮವಾಗಿ ಹಲವರು ಬಯಲು ಶೌಚಾಲಯ ಅವಲಂಬಿಸುವುದು ಅನಿವಾರ್ಯವಾಗಿದೆ. ಇದರಿಂದಾಗಿ ರೈತ ಮಹಿಳೆಯರಿಗೆ ಭಾರೀ ತೊಂದರೆ ಉಂಟಾಗಿದೆ. ಹರ್ಯಾಣ ಬದಿಯಲ್ಲಿ ತ್ಯಾಜ್ಯದ ರಾಶಿ ನಿರ್ಮಾಣವಾಗುತ್ತಿದ್ದು, ಸಾಧ್ಯವಾದಷ್ಟು ತ್ಯಾಜ್ಯಗಳನ್ನು ರೈತರು ಖಾಲಿ ನಿವೇಶನಗಳಲ್ಲಿ ಸುಡುತ್ತಿದ್ದಾರೆ.

ಪೊಲೀಸರು ಗೋಡೆ ನಿರ್ಮಾಣ ಮಾಡಿರುವುದು ನಾವು ದೆಹಲಿಯತ್ತ ಮುನ್ನುಗ್ಗದಂತೆ ಅಲ್ಲ; ಬದಲಾಗಿ ದೆಹಲಿಯಿಂದ ನಮಗೆ ಹರಿದು ಬರುತ್ತಿರುವ ನೆರವನ್ನು ತಡೆಯುವ ಸಲುವಾಗಿ ಎಂದು ಬಿಕೆಯು ಕಾರ್ಯಕರ್ತ ಮಂಜೀತ್ ಧಿಲ್ಲಾನ್ ಆಪಾದಿಸಿದ್ದಾರೆ.

ಈ ಮೊದಲು ದೆಹಲಿಯಿಂದ ಸಾಕಷ್ಟು ನೀರಿನ ಟ್ಯಾಂಕರ್‌ಗಳು ಬರುತ್ತಿದ್ದವು. ಆದರೆ ಇದೀಗ ಹರ್ಯಾಣದ ಟ್ಯಾಂಕರ್‌ಗಳನ್ನೇ ಅವಲಂಬಿಸಬೇಕು. ಹಲವರು ನೀರಿನ ಬಾಟಲಿಗಳನ್ನು ಖರೀದಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X