Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಹಾನ್ನಾ ಮುಸ್ಲಿಮಳೇ?: ರೈತರ ಪ್ರತಿಭಟನೆ...

ರಿಹಾನ್ನಾ ಮುಸ್ಲಿಮಳೇ?: ರೈತರ ಪ್ರತಿಭಟನೆ ಕುರಿತು ಟ್ವೀಟ್ ಮಾಡಿದ ಬಳಿಕ ಹೆಚ್ಚುತ್ತಿರುವ ಗೂಗಲ್ ಸರ್ಚ್

ವಾರ್ತಾಭಾರತಿವಾರ್ತಾಭಾರತಿ3 Feb 2021 3:50 PM IST
share
ರಿಹಾನ್ನಾ ಮುಸ್ಲಿಮಳೇ?: ರೈತರ ಪ್ರತಿಭಟನೆ ಕುರಿತು ಟ್ವೀಟ್ ಮಾಡಿದ ಬಳಿಕ ಹೆಚ್ಚುತ್ತಿರುವ ಗೂಗಲ್ ಸರ್ಚ್

ಹೊಸದಿಲ್ಲಿ: ಟ್ವಿಟ್ಟರ್ ನಲ್ಲಿ 100 ಮಿಲಿಯನ್‍ಗೂ ಅಧಿಕ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನ ಅವರು ಭಾರತದಲ್ಲಿನ ರೈತ ಪ್ರತಿಭಟನೆ ಕುರಿತು ಸಿಎನ್‍ಎನ್ ಪ್ರಕಟಿಸಿದ್ದ ವರದಿಯೊಂದಿಗೆ "ಈ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ? #ಫಾರ್ಮರ್ಸ್‍ ಪ್ರೊಟೆಸ್ಟ್  ಎಂಬ ಟ್ವೀಟ್ ಮಾಡಿರುವುದು ದೇಶವಿದೇಶಗಳಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ ಹಲವರು ಈ ಟ್ವೀಟನ್ನು ಹಲವು ರೀತಿಯಲ್ಲಿ ವ್ಯಾಖ್ಯಾನಿಸಲಾರಂಭಿಸಿದ್ದಾರೆ. 

ಜತೆಗೆ ಆಕೆಯ ಬಗ್ಗೆ  ಹಲವಾರು ಮಂದಿ ಗೂಗಲ್ ಸರ್ಚ್ ಮಾಡಿ ಮಾಹಿತಿಯನ್ನೂ ಪಡೆಯಲು ಯತ್ನಿಸುತ್ತಿದ್ದು ಹೀಗೆ ರಿಹಾನ್ನ ಕುರಿತು ಗೂಗಲ್ ಸರ್ಚ್ ಮಾಡಿದವರು ಆಕೆಯ ಧರ್ಮ ಯಾವುದೆಂಬ ಕುತೂಹಲದಿಂದ "ಈಸ್ ರಿಹಾನ್ನ ಮುಸ್ಲಿಂ?''ಎಂದು ಬರೆದು ಸರ್ಚ್ ಮಾಡಿರುವುದೂ ಬೆಳಕಿಗೆ ಬಂದಿದೆ. 'ರಿಹಾನ್ನ ರಿಲಿಜನ್' ಎಂಬ ಕೀವರ್ಡ್‌ ಅನ್ನೂ ಅತೀಹೆಚ್ಚು ಮಂದಿ ಬಳಸಿದ್ದಾರೆ ಎಂದು ತಿಳಿದು ಬಂದಿದೆ.

ಬಾರ್ಬಡೋಸ್‍ನಲ್ಲಿ ಧರ್ಮದ ಮೇಲೆ ಅಪಾರ ನಂಬಿಕೆಯುಳ್ಳ ಕುಟುಂಬದಲ್ಲಿ ಬೆಳೆದಿರುವ ರಿಹಾನ್ನ ಅವರು ಚಿಕ್ಕಂದಿನಿಂದಲೇ ಕ್ರೈಸ್ತ ಧರ್ಮದ ಅನುಯಾಯಿಯಾಗಿದ್ದು ಆಕೆ ತಮ್ಮ ಧರ್ಮದ ಕುರಿತು  2019ರಲ್ಲಿಯೇ ಇಂಟರ್‍ವೀವ್ ಮ್ಯಾಗಜೀನ್ ಜತೆ ಸಾಕಷ್ಟು ಹೇಳಿಕೊಂಡಿದ್ದರು.

ಇನ್ನೊಂದೆಡೆ ರೈತರ ಪ್ರತಿಭಟನೆ ಕುರಿತು ರಿಹಾನ್ನ ಟ್ವೀಟ್ ಅನ್ನು ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ. ಭಾರತದ ರೈತ ಪ್ರತಿಭಟನೆ ರಿಹಾನ್ನ ಟ್ವೀಟ್‍ನಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡಲಿದೆ ಎಂದು ಕೆಲವರು ಅಭಿಪ್ರಾಯ ಪಟ್ಟರೆ ಇನ್ನು ಕೆಲವರು ಇದೊಂದು `ಪೇಯ್ಡ್' ಟ್ವೀಟ್ ಎಂದೂ ತಿಳಿದಿದ್ದಾರೆ ಹಾಗೂ ಆಕೆಗೆ ತಿಳಿಯದೇ ಇರುವ ವಿಚಾರಗಳ ಕುರಿತು ಆಕೆ ಮಾತನಾಡಬಾರದು ಎಂದು ಸಲಹೆ ನೀಡಿದವರೂ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X