Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಫಘಾತಗಳಲ್ಲಿ ಹೆಲ್ಮೆಟ್ ಧರಿಸದೆ ಸಾಯುವವರ...

ಅಫಘಾತಗಳಲ್ಲಿ ಹೆಲ್ಮೆಟ್ ಧರಿಸದೆ ಸಾಯುವವರ ಸಂಖ್ಯೆ ಅಧಿಕ: ಜಾಗೃತಿ ಅಭಿಯಾನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ

ವಾರ್ತಾಭಾರತಿವಾರ್ತಾಭಾರತಿ3 Feb 2021 8:23 PM IST
share
ಅಫಘಾತಗಳಲ್ಲಿ ಹೆಲ್ಮೆಟ್ ಧರಿಸದೆ ಸಾಯುವವರ ಸಂಖ್ಯೆ ಅಧಿಕ: ಜಾಗೃತಿ ಅಭಿಯಾನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ

ಉಡುಪಿ, ಫೆ.3: ಅಫಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಫಘಾತವೇ ಹೆಚ್ಚಾಗಿದ್ದು ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪುವವರ ಸಂಖ್ಯೆ ಅಧಿಕವಾಗಿದೆ. ಜೀವ ಮತ್ತು ಜೀವನ ಅಮೂಲ್ಯವಾಗಿದ್ದು, ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಹೇಳಿದ್ದಾರೆ.

ಉಡುಪಿ ಪೊಲೀಸ್ ಇಲಾಖೆಯ ವತಿಯಿಂದ ಇತರ ಸಂಘಟನೆಗಳ ಸಹಕಾರದೊಂದಿಗೆ ಬುಧವಾರ ಉಡುಪಿ ನಗರದಲ್ಲಿ ಆಯೋಜಿಸಲಾದ ಹೆಲ್ಮೆಟ್ ಧರಿಸುವಿಕೆ ಕಡ್ಡಾಯದ ಬಗ್ಗೆ ಜಾಗೃತಿ ಮೂಡಿಸುವ ಪೊಲೀಸರ ಬೈಕ್ ಜಾಥಾ ಅಭಿಯಾನ ಮತ್ತು ಒಂದೇ ದೇಶ ಒಂದೇ ಕರೆ ಸಂಖ್ಯೆ 112 ವಾಹನಗಳ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಅಫಘಾತಗಳು ಸಂಭವಿಸಿದಾಗ ಕೈ ಕಾಲುಗಳಿಗೆ ಗಂಭೀರ ಗಾಯವಾದರೂ ಪ್ರಾಣ ಉಳಿಯಬಹುದು. ಆದರೆ ತಲೆಗೆ ಏಟು ಬಿದ್ದರೆ ಉಳಿಯು ವುದು ಕಷ್ಟವಾಗಿದೆ. ಆದುದರಿಂದ ದ್ವಿಚಕ್ರ ವಾಹನ ಸವಾರರು ಜಾಗೃತರಾಗಿ ಹೆಲ್ಮೆಟ್ ಧರಿಸಿ, ಸಂಚಾರ ನಿುಮ ಪಾಲನೆ ಮಾಡಬೇಕು ಎಂದರು.

ಅಪಘಾತ ಸೇರಿದಂತೆ ವಿವಿಧ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು 112 ಸಂಖ್ಯೆಗೆ ಕರೆ ಮಾಡಬೇಕು. ಕೆಲವೇ ಕ್ಷಣದಲ್ಲಿ ತಾವಿದ್ದ ಸ್ಥಳಕ್ಕೆ 112 ವಾಹನ ಜೊತೆ ಸಿಬ್ಬಂದಿ ತಮ್ಮನ್ನು ರಕ್ಷಣೆಗೆ ಬರಲಿದ್ದಾರೆ. ಆದುದರಿಂದ ಸಾರ್ವಜನಿಕರು ತುರ್ತು ಪರಿಸ್ಥಿತಿಯಲ್ಲಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಜಾಥಾವು ಉಡಪಿ ಬಸ್ ನಿಲ್ದಾಣ, ಕಲ್ಸಂಕ, ಇಂದ್ರಾಳಿ ಜಂಕ್ಷನ್ ಮೂಲಕ ಸಂತೆಕಟ್ಟೆಯಲ್ಲಿ ಸಮಾಪನ ಗೊಂಡಿತು. ಜಾಥಾದಲ್ಲಿ ಪೋಲಿಸ್, ರೋಟರಿ ಉಡುಪಿ ಸದಸ್ಯರು ಮತ್ತು ಬೈಕರ್ಸ್‌ ಕ್ಲಬ್ಗಳ ಸದಸ್ಯರು ತಮ್ಮ ದ್ವಿಚಕ್ರ ವಾಹನಗಳಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ಈ ಸಂಧರ್ಭದಲ್ಲಿ ಡಿವೈಎಸ್ಪಿಸದಾನಂದ ನಾಯಕ್, ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕ ಅಬ್ದುಲ್ ಖಾದರ್, ಉಡುಪಿ ನಗರ ಠಾಣಾಧಿಕಾರಿ ಶಕ್ತಿವೇಲು, ರೋಟರಿ ಉಡುಪಿ ಅಧ್ಯಕ್ಷ್ಯೆ ರಾಧಿಕಾ ಲಕ್ಷ್ಮೀನಾರಾ ಯಣ, ಕಾರ್ಯದರ್ಶಿ ದೀಪಾ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X