Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಟಿಆರ್‌ಪಿ ತಿರುಚುವಿಕೆಯ ಸರಳ...

“ಟಿಆರ್‌ಪಿ ತಿರುಚುವಿಕೆಯ ಸರಳ ಪ್ರಕರಣವಲ್ಲ,ಇವರಿಗೆ ಜಾಮೀನು ನೀಡಿದರೆ ಸಾಕ್ಷಿಗಳನ್ನೂ ತಿರುಚಬಹುದು”

ಬಾರ್ಕ್ ಮುಖ್ಯಸ್ಥ ಪಾರ್ಥೊ ದಾಸಗುಪ್ತಾ ಕುರಿತು ಮುಂಬೈ ನ್ಯಾಯಾಲಯ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ3 Feb 2021 9:34 PM IST
share
“ಟಿಆರ್‌ಪಿ ತಿರುಚುವಿಕೆಯ ಸರಳ ಪ್ರಕರಣವಲ್ಲ,ಇವರಿಗೆ ಜಾಮೀನು ನೀಡಿದರೆ ಸಾಕ್ಷಿಗಳನ್ನೂ ತಿರುಚಬಹುದು”

ಮುಂಬೈ,ಫೆ.3: ಬ್ರಾಡ್‌ಕಾಸ್ಟ್ ಆಡಿಯನ್ಸ್ ರೀಸರ್ಚ್ ಕೌನ್ಸಿಲ್ (ಬಾರ್ಕ್)ನ ಮಾಜಿ ಮುಖ್ಯಸ್ಥ ಪಾರ್ಥೊ ದಾಸಗುಪ್ತಾ ಅವರು ಟಿಆರ್‌ಪಿ ತಿರುಚುವಿಕೆ ಹಗರಣದ ರೂವಾರಿಯಾಗಿದ್ದಾರೆ ಎಂದು ಸ್ಥಳೀಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಅಭಿಪ್ರಾಯಿಸಿದೆ. ದಾಸಗುಪ್ತಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಾಲಯವು,ಈ ಹಂತದಲ್ಲಿ ಅವರನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿದರೆ ಅವರು ಸಾಕ್ಷಾಧಾರಗಳನ್ನು ತಿರುಚಬಹುದಾದ ಮತ್ತು ಪ್ರಾಸಿಕ್ಯೂಷನ್ ಪರ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದಾದ ಎಲ್ಲ ಸಾಧ್ಯತೆಗಳೂ ಇವೆ ಎಂದು ತನ್ನ ಆದೇಶದಲ್ಲಿ ಹೇಳಿದೆ.

ಮುಂಬೈ ಪೊಲೀಸರು ಕಳೆದ ವರ್ಷದ ಡಿ.24ರಂದು ದಾಸಗುಪ್ತಾರನ್ನು ಬಂಧಿಸಿದ್ದರು. ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯವರು ತನ್ನ ವಾಹಿನಿಯ ಟಿಆರ್‌ಪಿ ರೇಟಿಂಗ್ ಹೆಚ್ಚಿಸಿಕೊಳ್ಳಲು ದಾಸಗುಪ್ತಾಗೆ ಲಕ್ಷಾಂತರ ರೂ.ಗಳ ಲಂಚ ನೀಡಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ದಾಸಗುಪ್ತಾರ ಜಾಮೀನು ಅರ್ಜಿ ಜ.6 ಮತ್ತು ಜ.20ರಂದು ಹೀಗೆ ಎರಡು ಬಾರಿ ತಿರಸ್ಕತಗೊಂಡಿತ್ತು.

ನ್ಯಾಯಾಲಯದ ಜ.20ರ ಆದೇಶ ಮಂಗಳವಾರ ಮಾಧ್ಯಮಗಳಿಗೆ ಲಭ್ಯವಾಗಿದ್ದು,ದಾಸಗುಪ್ತಾರ ಫೋನ್‌ನಿಂದ ಲಭ್ಯವಾಗಿರುವ ವಾಟ್ಸ್‌ಆ್ಯಪ್ ಚಾಟ್‌ಗಳ ಬಗ್ಗೆ ವಿವರವಾದ ತನಿಖೆ ನಡೆಯವ ಅಗತ್ಯವಿದೆ. ಇದು ಟಿಆರ್‌ಪಿಯ ಸರಳ ತಿರುಚುವಿಕೆಯ ಪ್ರಕರಣವಲ್ಲ ಎಂದು ನ್ಯಾ.ಎಂ.ಎ.ಭೋಸಲೆ ಅವರು ಅದರಲ್ಲಿ ಹೇಳಿದ್ದಾರೆ.

  ಟಿಆರ್‌ಪಿ ರೇಟಿಂಗ್ ಬಗ್ಗೆ ಕೆಲ ಚರ್ಚೆಗಳು ನಡೆದಿವೆ ಮತ್ತು ಬಾರ್ಕ್‌ನ ಮುಖ್ಯಸ್ಥರಾಗಿದ್ದ ಆರೋಪಿಯು ತನಿಖಾಧಿಕಾರಿಗಳಿಗೆ ವಾಟ್ಸ್‌ಆ್ಯಪ್ ಸಂಭಾಷಣೆಗಳ ಬಗ್ಗೆ ಸರಿಯಾಗಿ ವಿವರಿಸಲು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ನ್ಯಾಯಾಲಯವು ಪ್ರಕರಣದ ವಾಸ್ತವಾಂಶಗಳು ಮತ್ತು ಸಂದರ್ಭಗಳನ್ನು ಹಾಗೂ ಗೋಸ್ವಾಮಿ ಮತ್ತು ದಾಸಗುಪ್ತಾ ನಡುವಿನ ವಾಟ್ಸ್‌ಆ್ಯಪ್ ಚಾಟ್‌ಗಳ ಆಧಾರದಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

 ವಿಚಾರಣೆ ಸಂದರ್ಭದಲ್ಲಿ ದಾಸಗುಪ್ತಾ ಪರ ವಕೀಲ ಶಾರ್ದೂಲ ಸಿಂಗ್ ಅವರು,ಪ್ರಕರಣದಲ್ಲಿಯ ಇತರ ಆರೋಪಿಗಳನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ,ಹೀಗಾಗಿ ತನ್ನ ಕಕ್ಷಿದಾರನನ್ನೂ ಬಿಡುಗಡೆಗೊಳಿಸಬೇಕು ಎಂದು ವಾದಿಸಿದ್ದರು. ದಾಸಗುಪ್ತಾ ಅವರ ಆರೋಗ್ಯವು ಶಿಥಿಲಗೊಂಡಿದೆ ಮತ್ತು ಜೈಲಿನಲ್ಲಿಯೇ ಇದ್ದರೆ ಅದು ಇನ್ನಷ್ಟು ಹದಗೆಟ್ಟರೆ ಅವರು ಮಧುಮೇಹ ಕೋಮಾಕ್ಕೆ ಜಾರಬಹುದು ಎಂದೂ ಸಿಂಗ್ ನಿವೇದಿಸಿಕೊಂಡಿದ್ದರು.

ಸಿಂಗ್ ವಾದವನ್ನು ತಳ್ಳಿಹಾಕಿದ್ದ ನ್ಯಾ.ಭೋಸಲೆ,14 ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆಗೊಂಡಿರುವುದು ನಿಜ. ಆದರ ಹಾಲಿ ಅಪರಾಧ ಪ್ರಕರಣದ ದಾಖಲೆಗಳು ದಾಸಗುಪ್ತಾ ಅವರು ಇಡೀ ಅಪರಾಧದ ರೂವಾರಿಯಾಗಿದ್ದರು ಎನ್ನುವುದನ್ನು ತೋರಿಸುತ್ತಿವೆ ಎಂದು ಹೇಳಿದ್ದರು.

ನವಿ ಮುಂಬೈನ ತಲೋಜಾ ಜೈಲಿನಲ್ಲಿರುವ ದಾಸಗುಪ್ತಾ ಈಗ ಜಾಮೀನು ಕೋರಿ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X