Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲದಲ್ಲಿ ಒಂದೇ ತಿಂಗಳಲ್ಲಿ 51 ಕರ್ಕಶ...

ಮಣಿಪಾಲದಲ್ಲಿ ಒಂದೇ ತಿಂಗಳಲ್ಲಿ 51 ಕರ್ಕಶ ಸೈಲೆನ್ಸರ್ ವಶ

25,500ರೂ. ದಂಡ ವಸೂಲಿ, ರೋಡ್‌ರೋಲರ್‌ನಿಂದ ನಿರುಪಯುಕ್ತ

ವಾರ್ತಾಭಾರತಿವಾರ್ತಾಭಾರತಿ3 Feb 2021 9:45 PM IST
share
ಮಣಿಪಾಲದಲ್ಲಿ ಒಂದೇ ತಿಂಗಳಲ್ಲಿ 51 ಕರ್ಕಶ ಸೈಲೆನ್ಸರ್ ವಶ

ಉಡುಪಿ, ಫೆ. 3: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಕಾನೂನು ಉಲ್ಲಂಘಿಸಿ ಮಾರ್ಪಡಿಸಲಾದ ಬೈಕ್ ಹಾಗೂ ಕಾರುಗಳ ಕರ್ಕಶ ಶಬ್ದ ಮಾಡುವ 51 ಸೈಲೆನ್ಸರ್‌ಗಳನ್ನು ಪೊಲೀಸರು ವಶಪಡಿಸಿಕೊಂಡು 25,500ರೂ. ದಂಡ ವಸೂಲಿ ಮಾಡಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಇಂದು ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್, ‘ಸಡಕ್ ಸುರಕ್ಷಾ- ಜೀವನ್ ರಕ್ಷ’ ಎಂಬ ಧ್ಯೇಯದೊಂದಿಗೆ ರಸ್ತೆ ಸುರಕ್ಷತಾ ಮಾಸವನ್ನು ಮಣಿಪಾಲ ಪೊಲೀಸರು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಈ ಬಾರಿ ಶಬ್ದ ಮಾಲಿನ್ಯ ಮಾಡುವ ದ್ವಿಚಕ್ರ ಮತ್ತು ಕಾರುಗಳ ವಿರುದ್ಧ ಪ್ರಕರಣ ಗಳನ್ನು ದಾಖಲಿಸಿದ್ದಾರೆ ಎಂದರು.

ಜ.1ರಿಂದ 31ರವರೆಗೆ ಮಣಿಪಾಲ ಪೊಲೀಸರು 50 ದ್ವಿಚಕ್ರ ವಾಹನದ ಸವಾರರು ಹಾಗೂ ಒಬ್ಬ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ 51 ಸೈಲೆನ್ಸರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸೈಲೆನ್ಸರ್‌ಗಳನ್ನು ವಾಹನ, ಸವಾರರಿಗೆ ವಾಪಾಸ್ಸು ನೀಡಿದರೆ ಅವರು ಮರುಬಳಕೆ ಮಾಡುವ ಸಾಧ್ಯತೆ ಇರುತ್ತದೆ. ಅದಕ್ಕಾಗಿ ಪ್ರಾಯೋಗಿಕವಾಗಿ ಈ ಸೈಲೆನ್ಸರ್‌ಗಳನ್ನು ರೋಡ್ ರೋಲರ್ ಮೂಲಕ ಅನುಪಯುಕ್ತ ಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

2000 ರೂ.ವರೆಗೆ ದಂಡ: ಮೋಟಾರ್ ವಾಹನಗಳ ನಿಯಮಗಳ ಪ್ರಕಾರ ಸೈಲೆನ್ಸರ್‌ನಿಂದ ಹೊರ ಸೂಸುವ ಶಬ್ದವು ಇಂತಿಷ್ಟೆ ಪರಿಮಾಣದಲ್ಲಿ ಇರಬೇಕು ಎಂದು ರಾಷ್ಟ್ರೀಯ ಮಾನದಂಡಗಳನ್ನು ನಿಗದಿ ಮಾಡಲಾಗಿದೆ. ಸಾಮಾನ್ಯವಾಗಿ 80 ಡಿಸಿಬೆಲ್ ಗಿಂತ ಹೆಚ್ಚಿನ ಶಬ್ದವನ್ನು ಸೈಲೆನ್ಸರ್ ‌ಗಳು ಹೊರಸೂಸಿದರೆ ಅದು ಶಬ್ದ ಮಾಲಿನ್ಯ ವಾಗುತ್ತದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದರು.

ದ್ವಿಚಕ್ರ ವಾಹನ ಸವಾರರು ವಾಹನ ತಯಾರಿಕೆ ಕಂಪೆನಿಯಿಂದ ಬರುವ ಸೈಲೆನ್ಸರ್‌ಗಳನ್ನು ಸ್ಥಳೀಯವಾಗಿ ಬದಲಾಯಿಸಿ ಮಾರ್ಪಡುಗೊಳಿಸಿದ ಸೈಲೆನ್ಸರ್‌ಗಳನ್ನು ಆಳವಡಿಸಿ ಶಬ್ದ ಮಾಲಿನ್ಯ ಮಾಡುತ್ತಿದ್ದಾರೆ. ಈ ರೀತಿ ಮಾರ್ಪಡುಗಳಿಗೆ 500ರೂ.ನಿಂದ 2000ರೂ.ವರೆಗೆ ದಂಡ ವಸೂಲಿ ಮಾಡಲು ಮತ್ತು ಮಾರ್ಪಡುಗೊಂಡ ಸೈಲೆನ್ಸರ್‌ಗಳನ್ನು ವಶಪಡಿಸಿಕೊಳ್ಳಲು ಅವಕಾಶ ಇದೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಡಿವೈಎಸ್ಪಿ ಸದಾನಂದ ನಾಯಕ್, ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ., ಪೊಲೀಸ್ ಉಪನಿರೀಕ್ಷಕರಾದ ರಾಜಶೇಖರ ವಂದಲಿ, ಸುಧಾಕರ ತೋನ್ಸೆ, ಪ್ರೊಬೆಶನರಿ ಎಸ್ಸೈಗಳಾದ ನಿರಂಜನ್ ಗೌಡ, ದೇವರಾಜ ಬಿರಾದಾರ ಮೊದಲಾದವರು ಹಾಜರಿದ್ದರು.

ಟ್ರೇಡ್ ಲೈಸೆನ್ಸ್ ರದ್ದು: ಎಸ್ಪಿ 

ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಾದ್ಯಂತ ಈ ರೀತಿಯಾಗಿ ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿ ಯೆಯನ್ನು ಎಲ್ಲ ಠಾಣೆಗಳಲ್ಲಿಯೂ ಮಾಡಲಾಗುವುದು. ಅಲ್ಲದೆ ಈ ರೀತಿ ಸೈಲೆನ್ಸರ್‌ಗಳನ್ನು ಅಳವಡಿಸುವವರು ಮತ್ತು ಮಾರಾಟ ಮಾಡುವವರ ಟ್ರೇಡ್ ಲೈಸೆನ್ಸ್ ರದ್ದು ಗೊಳಿಸುವಂತೆ ನಗರಸಭೆಗೆ ಪತ್ರ ಬರೆಯಲಾಗುವುದು. ಅಲ್ಲದೆ ಶೋರೂಮ್ ಗಳಿಗೂ ಈ ಕುರಿತು ನೋಟೀಸ್ ಜಾರಿ ಮಾಡಲಾಗುವುದು ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X