Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನುದಾನ ಕಡಿತದ ವಿರುದ್ಧ ಅಂಗನವಾಡಿ...

ಅನುದಾನ ಕಡಿತದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Feb 2021 10:46 PM IST
share
ಅನುದಾನ ಕಡಿತದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು, ಫೆ.3: ದೇಶದಲ್ಲಿ ಅಪೌಷ್ಠಿಕತೆ ಹೆಚ್ಚುತ್ತಿದ್ದರೂ ಸಮಗ್ರ ಶಿಶು ಅಭಿವದ್ಧಿ ಯೋಜನೆ (ಐಸಿಡಿಎಸ್)ಗೆ ಬಜೆಟ್‍ನಲ್ಲಿ ಅನುದಾನ ಕಡಿತಗೊಳಿಸಿರುವುದು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬುಧವಾರ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ನೌಕರರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಐಸಿಡಿಎಸ್ ಯೋಜನೆಯನ್ನು ಬಲಿಷ್ಠಗೊಳಿಸಬೇಕು. ದೇಶದಲ್ಲಿ ಅಪೌಷ್ಠಿಕತೆ ನಿವಾರಣೆಗೆ ಯೋಜನೆಗಳನ್ನು ಘೋಷಿಸಬೇಕು. ಕೊರೋನ ಸಂಕಷ್ಟದ ಕಾಲದಲ್ಲಿ ದುಡಿದವರಿಗೆ ವೇತನ ಹೆಚ್ಚಿಸಬೇಕು ಒಕ್ಕೊರಲಿನಿಂದ ಒತ್ತಾಯ ಮಾಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ, ಕೇಂದ್ರ ಸರಕಾರ, ಮಕ್ಕಳ ಸಮಗ್ರ ಅಭಿವದ್ಧಿಗಾಗಿ ಇರುವ ಯೋಜನೆಗಳನ್ನೂ ದುರ್ಬಲಗೊಳಿಸುತ್ತಿದೆ. ಒಂದು ವರ್ಷದಲ್ಲಿ ಯಾವ ಯೋಜನೆಯನ್ನು ಅನುಷ್ಠಾನಗೊಳಿಸಲು ಸಾಧ್ಯ? ವರ್ಷಕ್ಕೊಂದು ಹೊಸ ಯೋಜನೆಯನ್ನು ಘೋಷಿಸುವ ಸರಕಾರ ಅದನ್ನು ಕಾರ್ಯಗತಗೊಳಿಸಲು ಗಮನ ಹರಿಸುವುದಿಲ್ಲ. ಈಗಾಗಲೇ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯೂ ಹಿನ್ನೆಲೆಗೆ ಸರಿದಿದೆ. ಹೀಗಾದರೆ ದೇಶದ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಪ್ರಶ್ನಿಸಿದರು.

2020-21ರ ಬಜೆಟ್‍ನಲ್ಲಿ ಐಸಿಡಿಎಸ್‍ಗೆ 28,557.38 ಕೋಟಿಯನ್ನು ಮೀಸಲಿಟ್ಟ ಕೇಂದ್ರ ಸರಕಾರ, 2021-22ರಲ್ಲಿ ಅಂಗನವಾಡಿ ಸಾಕ್ಷಮ್ ಮತ್ತು ಪೋಷಣ್ 2.0 ಎಂದು ಬದಲಾಯಿಸಿದೆ. ಇದಕ್ಕಾಗಿ 20,105 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಸುಮಾರು 8452.38 ಕೋಟಿ ರೂ. ಕಡಿತಗೊಳಿಸಿದೆ. ಬಡತನ ಹಾಗೂ ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಬಜೆಟ್‍ನಲ್ಲಿ ಯಾವ ರೀತಿಯ ಕ್ರಮಕೈಗೊಳ್ಳಲಾಗಿದೆ? ಐಸಿಡಿಎಸ್ ಹಾಗೂ ಬಿಸಿಯೂಟ ಯೋಜನೆಯಡಿ 18 ಕೋಟಿಗೂ ಹೆಚ್ಚು ಮಕ್ಕಳಿದ್ದಾರೆ. ವಿವಿಧ ಯೋಜನೆಗಳಿಗೆ ಅನುದಾನ ಕಡಿತಗೊಳಿಸಿದರೆ ಮಕ್ಕಳಲ್ಲಿನ ಸಮಗ್ರ ಕಲ್ಯಾಣ ಹೇಗೆ ಸಾಧ್ಯ ಎಂದರು.

2014-19ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ದೇಶದಲ್ಲಿ ಅಪೌಷ್ಠಿಕತೆ ಹೆಚ್ಚಳವಾಗಿರುವ ಬಗ್ಗೆ ಗಮನ ಸೆಳೆದಿದೆ. ದೇಶದಲ್ಲಿ ಬಡತನ, ಹಸಿವು ಮತ್ತು ಅಪೌಷ್ಠಿಕತೆಯಿಂದ 5 ವರ್ಷದೊಳಗಿನ 3 ಲಕ್ಷ ಮಕ್ಕಳು ಸಾವನ್ನಪ್ಪುವ ಮುನ್ಸೂಚನೆಯನ್ನು ಯೂನಿಸೆಫ್ ಕೇಂದ್ರ ಸರಕಾರಕ್ಕೆ ನೀಡಿದೆ. ಭಾರತದ 8.8 ಕೋಟಿ ಮಕ್ಕಳು ಅಪೌಷ್ಠಿಕತೆಯಿಂದ ದುರ್ಬಲರಾಗುತ್ತಿದ್ದಾರೆ. ಆದರೆ, ಆತ್ಮನಿರ್ಭರ ಭಾರತ ಮತ್ತು ಟ್ರಿಲಿಯನ್ ಆರ್ಥಿಕತೆ ಬಗ್ಗೆ ಮಾತನಾಡುವ ಸರಕಾರ, 2020-21ರ ಬಜೆಟ್‍ನಲ್ಲಿ ಬಿಸಿಯೂಟ ಯೋಜನೆ ಅನುದಾನದಲ್ಲಿ 1400 ಕೋಟಿ ರೂ. ಕಡಿತಗೊಳಿಸಿ ಈ ಯೋಜನೆಯನ್ನೇ ಹಂತ ಹಂತವಾಗಿ ಬಲಹೀನಗೊಳಿಸಲು ಹೊರಟಿದೆ ಎಂದು ಅವರು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X