ಸಾಹಿತಿಗಳು, ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು: ಸಿದ್ದರಾಮಯ್ಯ

ಬೆಂಗಳೂರು, ಫೆ,4: ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ ಎಂದು ಉಲ್ಲೇಖಿಸಿದ್ದಾರೆ.
‘’ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು. ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ?’’ ಎಂದು ಅವರು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ.
— Siddaramaiah (@siddaramaiah) February 4, 2021
ಈ ಮಣ್ಣಿನ ಎಲ್ಲ ಸಾಹಿತಿಗಳು,
ಕಲಾವಿದರು
ವಿಶೇಷವಾಗಿ
ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.
ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ?#FarmersProtest







