Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಗಂಗಾನದಿ'ಯಂತೆ ಕಾವೇರಿ ಮಲಿನ ಆಗದಿರಲಿ:...

‘ಗಂಗಾನದಿ'ಯಂತೆ ಕಾವೇರಿ ಮಲಿನ ಆಗದಿರಲಿ: ಬಿಜೆಪಿ ಶಾಸಕ ಅಪ್ಪಚ್ಚು ರಂಜನ್

ವಾರ್ತಾಭಾರತಿವಾರ್ತಾಭಾರತಿ4 Feb 2021 10:10 PM IST
share
‘ಗಂಗಾನದಿಯಂತೆ ಕಾವೇರಿ ಮಲಿನ ಆಗದಿರಲಿ: ಬಿಜೆಪಿ ಶಾಸಕ ಅಪ್ಪಚ್ಚು ರಂಜನ್

ಬೆಂಗಳೂರು, ಫೆ. 4: ‘ಗಂಗಾನದಿಯ ದುಸ್ಥಿತಿ ರಾಜ್ಯದಲ್ಲಿ ಹರಿಯುವ ಕಾವೇರಿ ನದಿಗೆ ಬರದಿರಲಿ. ಕಾವೇರಿ ಮಲಿನ ಆಗುವುದನ್ನು ತಪ್ಪಿಸಲು ನದಿ ಪಾತ್ರದಲ್ಲಿನ ನಗರಗಳ ಮಲಿನ ನೀರನ್ನು ಸ್ವಚ್ಛಗೊಳಿಸಿ ನದಿಗೆ ಬಿಡಲು ಸರಕಾರ ಕ್ರಮ ಕೈಗೊಳ್ಳಬೇಕು' ಎಂದು ಬಿಜೆಪಿ ಸದಸ್ಯ ಅಪ್ಪಚ್ಚು ರಂಜನ್ ಇಂದಿಲ್ಲಿ ಆಗ್ರಹಿಸಿದ್ದಾರೆ.

ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕಾವೇರಿ ನದಿ ಪಾತ್ರದಲ್ಲಿನ ನಗರಗಳ ಕೊಳಚೆ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಇದರಿಂದ ನೀರು ಮಲಿನವಾಗುತ್ತಿದ್ದು, ಜನ-ಜಾನುವಾರುಗಳಿಗೆ ಭವಿಷ್ಯದಲ್ಲಿ ತೊಂದರೆಯಾಗಲಿದೆ ಎಂದು ಗಮನ ಸೆಳೆದರು.

ಇದಕ್ಕೆ ಉತ್ತರ ನೀಡಿದ ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್, ‘ಕಾವೇರಿ ನದಿಯಿಂದ ಕುಡಿಯುವ ನೀರು ಪೂರೈಕೆ ಮಾಡುವ ಸಂದರ್ಭದಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಕಾವೇರಿ ನದಿ ನೀರನ್ನು ಕರ್ನಾಟಕ ನಗರ ನೀರು, ಸರಬರಾಜು ಮತ್ತು ಒಳಚರಂಡಿ ಮೂಲಕ ಪೂರೈಕೆ ಮಾಡಲಾಗುತ್ತದೆ.

ಕಾವೇರಿ ನದಿ ಪಾತ್ರದಲ್ಲಿ ಶ್ರೀರಂಗಪಟ್ಟಣ, ಟಿ.ನರಸೀಪುರ, ಹನೂರು, ಬನ್ನೂರು ನಗರಗಳಲ್ಲಿ ನೀರು ಸಂಸ್ಕರಣೆಯಾಗದೆ ಪೂರೈಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಎರಡು ನಗರದಲ್ಲಿ ಎಸ್ಟಿಪಿ ಘಟಕಗಳನ್ನು ಅಳವಡಿಸಿದ್ದು, ಉಳಿದೆರಡು ನಗರಗಳಲ್ಲಿ ಎಸ್ಟಿಪಿ ಆಳವಡಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದರು.

ಶ್ರೀರಂಗಪಟ್ಟಣ, ಬನ್ನೂರು ಸೇರಿದಂತೆ ಮತ್ತಿತರ ನಗರಗಳಿಗೆ ಮಲಿನ ನೀರು ಸಂಸ್ಕರಣೆಯಾಗದೆ ನೇರವಾಗಿ ನದಿಗೆ ಸೇರದಂತೆ ತಡೆಯಲು ಯೋಜನೆಯನ್ನು ರೂಪಿಸುವ ಪ್ರಸ್ತಾವನೆ ಸರಕಾರಕ್ಕೆ ಬಂದಿದೆ. ಇದಕ್ಕಾಗಿ 208 ಕೋಟಿ ರೂ.ಹಣವನ್ನು ಮೀಸಲಿಡಲಾಗಿದೆ. ಶುದ್ದೀಕರಣ ಘಟಕಗಳನ್ನು ತೆರೆಯಲು ಸರಕಾರ ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರತಿ ತಿಂಗಳು ನೀರಿನ ಪರೀಕ್ಷೆ: ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕಾವೇರಿ ನದಿನೀರು ಪೂರೈಕೆ ಮಾಡಲಾಗುತ್ತದೆ. ಮಾಲಿನ್ಯ ನಿಯಂತ್ರಣ ಮಂಡಳಿಯು ನದಿ ನೀರು ಮಾಪನ ಕಾರ್ಯಕ್ರಮದಡಿ ಕಾವೇರಿ ನದಿ ನೀರನ್ನು 22 ಕೇಂದ್ರಗಳಲ್ಲಿ ಸಂಗ್ರಹಿಸಿ, ವಿಶ್ಲೇಷಿಸಿ ನಂತರ ಅದರ ವರದಿಯನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಲಾಗುತ್ತದೆ. ಕಲುಷಿತ ನೀರು ತಡೆಯಲು ಸರಕಾರ ಕ್ರಮವಹಿಸಿದೆ ಎಂದು ತಿಳಿಸಿದರು.

ಅರಣ್ಯ ಸಚಿವರು ಹೌದೋ ಇಲ್ಲವೋ..:

‘ಸಿ.ಪಿ.ಯೋಗೇಶ್ವರ್ ಅವರು ಅರಣ್ಯ ಸಚಿವರು ಹೌದೋ ಇಲ್ಲವೋ ಮೊದಲು ಸ್ಪಷ್ಟಪಡಿಸಬೇಕು. ನನಗೆ ಅವರು ನೀಡಿರುವ ಉತ್ತರದ ಪ್ರತಿಯಲ್ಲಿ ಅವರ ಸಹಿಯೇ ಇಲ್ಲ. ಹೀಗಾಗಿ ಅವರ ಖಾತೆ ಏನಾದರೂ ಬದಲಾವಣೆ ಮಾಡಲಾಗಿದೆಯೋ ಹೇಗೇ?'

-ಅಪ್ಪಚ್ಚು ರಂಜನ್, ಬಿಜೆಪಿ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X