Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರು ದೇಶದ ಅಭಿವೃದ್ಧಿಯ ಮತ್ತು ಪ್ರಗತಿಯ...

ರೈತರು ದೇಶದ ಅಭಿವೃದ್ಧಿಯ ಮತ್ತು ಪ್ರಗತಿಯ ಚಾಲನಾ ಶಕ್ತಿ: ಪ್ರಧಾನಿ ಮೋದಿ

ಚೌರಿ ಚೌರಾ ಶತಮಾನೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 Feb 2021 10:18 PM IST
share
ರೈತರು ದೇಶದ ಅಭಿವೃದ್ಧಿಯ ಮತ್ತು ಪ್ರಗತಿಯ ಚಾಲನಾ ಶಕ್ತಿ: ಪ್ರಧಾನಿ ಮೋದಿ

ಹೊಸದಿಲ್ಲಿ, ಫೆ.4: ರೈತರು ದೇಶದ ಬೆನ್ನೆಲುಬಾಗಿದ್ದಾರೆ ಮತ್ತು ದೇಶದ ಸ್ವಾತಂತ್ರ ಸಂಗ್ರಾಮದ ಭಾಗವಾದ ಚೌರಿ ಚೌರಾ ಘಟನೆಯಲ್ಲೂ ರೈತರು ಪ್ರಮುಖ ಪಾತ್ರ ವಹಿಸಿದ್ದಾರೆ. ರೈತರು ದೇಶದ ಅಭಿವೃದ್ಧಿ, ಪ್ರಗತಿಯ ಚಾಲನಾ ಶಕ್ತಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರಪ್ರದೇಶದ ಚೌರಿ ಚೌರಾದಲ್ಲಿ ನಡೆದ ಘಟನೆಯ ಶತಮಾನೋತ್ಸವ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಚೌರಿ ಚೌರಾ ಘಟನೆಯ ಬಗ್ಗೆ ಸೂಕ್ತ ಚರ್ಚೆಯಾಗಿಲ್ಲ ಮತ್ತು ಘಟನೆಯಲ್ಲಿ ಹುತಾತ್ಮರಾದವರ ಬಗ್ಗೆ ಇತಿಹಾಸದ ಪುಟಗಳಲ್ಲಿ ನಿರ್ಲಕ್ಷ ವಹಿಸಿರುವುದು ವಿಷಾದನೀಯ. ಈ ಹುತಾತ್ಮರ ರಕ್ತ ನಮ್ಮ ದೇಶದ ಮಣ್ಣಿನಲ್ಲಿದೆ ಮತ್ತು ನಮಗೆ ಪ್ರೇರಣಾ ಶಕ್ತಿಯಾಗಿರುತ್ತದೆ . ಚೌರಿ ಚೌರಾದ ಘಟನೆ ಕೇವಲ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಕ್ಕೆ ಮಾತ್ರ ಸೀಮಿತವಾಗಿಲ್ಲ. ಈ ಘಟನೆಯ ಸಂದೇಶ ದೊಡ್ಡದಿದೆ. ಹಲವು ಕಾರಣಗಳಿಂದಾಗಿ ಇದನ್ನು ಸಣ್ಣ ಘಟನೆ ಎಂದು ಪರಿಗಣಿಸಲಾಗಿದ್ದರೂ ನಾವು ಇದನ್ನು ಸಂದರ್ಭದ ಹಿನ್ನೆಲೆಯಲ್ಲಿ ಗಮನಿಸಬೇಕಾಗಿದೆ. ಬೆಂಕಿ ಠಾಣೆಯಲ್ಲಿ ಮಾತ್ರವಲ್ಲ, ಜನರ ಹೃದಯದಲ್ಲೂ ಇತ್ತು ಎಂದರು.

ದಿಲ್ಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಉಲ್ಲೇಖಿಸಿದ ಪ್ರಧಾನಿ, ದೇಶದ ಪ್ರಗತಿಯ ಹಿಂದೆ ರೈತರಿದ್ದಾರೆ. ಚೌರಿ ಚೌರಾ ಸಂಗ್ರಾಮದಲ್ಲೂ ಅವರು ಮಹತ್ತರ ಪಾತ್ರ ವಹಿಸಿದ್ದರು. ದೇಶದ ಸ್ವಾತಂತ್ರ ಹೋರಾಟದಲ್ಲೂ ರೈತರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ರೈತರ ಹಿತಾಸಕ್ತಿಯ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ರೈತರನ್ನು ಸ್ವಾವಲಂಬಿಗಳನ್ನಾಗಿಸಲು ಕಳೆದ 6 ವರ್ಷಗಳಿಂದ ಕೈಗೊಂಡಿರುವ ಕ್ರಮಗಳಿಂದಾಗಿ ಕೊರೋನ ಸೋಂಕಿನ ಸಂದರ್ಭದಲ್ಲೂ ಕೃಷಿ ಕ್ಷೇತ್ರ ಅಭಿವೃದ್ಧಿಗೊಂಡಿದೆ. ಮಂಡಿ( ಮಾರುಕಟ್ಟೆ)ಗಳನ್ನು ರೈತರಿಗೆ ಲಾಭದಾಯವನ್ನಾಗಿಸಲು 1000 ಹೆಚ್ಚುವರಿ ಮಂಡಿಗಳನ್ನು ಇ-ನಾಮ್‌ಗೆ ಜೋಡಿಸಲಾಗುವುದು ಎಂದು ಪ್ರಧಾನಿ ಹೇಳಿದರು.

ದೇಶದ ಏಕತೆ ನಮ್ಮ ಆದ್ಯತೆಯಾಗಿರಬೇಕು ಮತ್ತು ದೇಶದ ಗೌರವ ಎಲ್ಲಕ್ಕಿಂತ ಮಿಗಿಲಾದುದು. ಈ ಸಂಕಲ್ಪದೊಂದಿಗೆ ದೇಶದ ಪ್ರತಿಯೊಬ್ಬ ಪ್ರಜೆಯನ್ನೂ ಜೊತೆಯಾಗಿಸಿಕೊಂಡು ಮುನ್ನಡೆಯಬೇಕು ಎಂದವರು ಹೇಳಿದರು.

1922ರಲ್ಲಿ ಉತ್ತರಪ್ರದೇಶದಲ್ಲಿ ಸ್ವಾತಂತ್ರ ಹೋರಾಟಗಾರರ ತಂಡವೊಂದು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಗೋಲೀಬಾರ್ ನಡೆಸಿದ್ದರು. ಇದರಿಂದ ಉದ್ರಿಕ್ತ ಗುಂಪು ಚೌರಿಚೌರಾದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಠಾಣೆಯಲ್ಲಿದ್ದ 23 ಪೊಲೀಸ್ ಸಿಬಂದಿ ಹಾಗೂ ಅಧಿಕಾರಿಗಳು ಮೃತಪಟ್ಟಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ 228 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದು ವಿಚಾರಣೆಯ ಸಂದರ್ಭ 6 ಮಂದಿ ಮೃತಪಟ್ಟಿದ್ದರು. 172 ಮಂದಿಗೆ ಮರಣದಂಡನೆ, ಉಳಿದವರಿಗೆ ದೀರ್ಘಾವಧಿಯ ಶಿಕ್ಷೆ ವಿಧಿಸಲಾಗಿತ್ತು. ಚೌರಿಚಾರಾ ಹಿಂಸಾಚಾರದಿಂದ ನೊಂದ ಮಹಾತ್ಮಾ ಗಾಂಧೀಜಿ ಅಸಹಾಕಾರ ಚಳವಳಿಗೆ ಕರೆ ನೀಡಿದ್ದು ಇದು ಭಾರತದ ಸ್ವಾತಂತ್ರ ಸಂಗ್ರಾಮದ ಒಂದು ಪ್ರಮುಖ ಹೆಗ್ಗುರುತಾಗಿ  ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X