Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತರಿಗೆ...

ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತರಿಗೆ ಪರಿಹಾರ ವಿಳಂಬವಾಗದಿರಲಿ: ಡಿಸಿ ಡಾ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ4 Feb 2021 10:47 PM IST
share
ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತರಿಗೆ ಪರಿಹಾರ ವಿಳಂಬವಾಗದಿರಲಿ: ಡಿಸಿ ಡಾ. ರಾಜೇಂದ್ರ

ಮಂಗಳೂರು, ಫೆ.4: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರದ ಹಣವನ್ನು ವಿಳಂಬವಿಲ್ಲದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ 1989) ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಜನವರಿಯಿಂದ ಈ ವೆರೆಗೆ 51 ದೌರ್ಜನ್ಯ ಪ್ರಕರಣಗಳಾಗಿದ್ದು, 33 ಪ್ರಕರಣಗಳಲ್ಲಿ 27.53 ಲಕ್ಷದಷ್ಟು ಪರಿಹಾರದ ಹಣವನ್ನು ನೀಡಲಾಗಿದೆ. ಬಾಕಿ ಉಳಿದ 14 ಪ್ರಕರಣಗಳನ್ನು ಶೀಘ್ರವಾಗಿ ಪರಿಹಾರವನ್ನು ನೀಡುವುದರ ಜೊತೆಗೆ ತನಿಖೆಗಳನ್ನು ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪನ ಪತ್ರಗಳನ್ನು ಸಲ್ಲಿಸಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ಡಿಸಿ ಮನ್ನಾ ಜಮೀನುಗಳ ಬಗ್ಗೆ ನಿಖರವಾದ ಮಾಹಿತಿಗಳನ್ನು ಕ್ರೋಡೀಕರಿಸಬೇಕು. ಅವುಗಳಲ್ಲಿ ಲಭ್ಯವಿರುವುದು, ಅತಿಕ್ರಮಣ ವಾಗಿರುವುದು ಮಾಡಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಉಳ್ಳವರು ಇದ್ದಲ್ಲಿ ಅವರನ್ನು ತೆರವುಗೊಳಿಸಬೇಕು. ಲಭ್ಯವಿರುವ ಜಮೀನಿನಲ್ಲಿ ನಿವೇಶನಗಳಾಗಿ ಪರಿವರ್ತಿಸಿ ಶೋಷಿತರು ಹಾಗೂ ನೊಂದವರಿಗೆ ಆದ್ಯತೆ ಮೇಲೆ ನಿವೇಶನ ನೀಡಬೇಕೆಂದು ತಿಳಿಸಿದರು.

ಜಾತಿ ಪ್ರಮಾಣಪತ್ರವನ್ನು ಕೆಲವು ಪ್ರಕರಣಗಳಲ್ಲಿ ನೀಡುತ್ತಿಲ್ಲ ಎಂಬ ಬಗ್ಗೆ ಕೇಳಿಬರುತ್ತಿದೆ. ನಿಖರವಾದ ದಾಖಲೆಗಳು ಇಲ್ಲದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ, ಮಹಜರು ಹಾಗೂ ಅವರ ಆಚಾರ-ವಿಚಾರಗಳು ಮತ್ತು ಸಂಪ್ರದಾಯಗಳ ಬಗ್ಗೆ ಪರಿಶೀಲಿಸಿ ಅರ್ಹರಿದ್ದಲ್ಲಿ ಪ್ರಮಾಣ ಪತ್ರವನ್ನು ನೀಡಬೇಕೆಂದು ಸೂಚನೆ ನೀಡಿದರು.

ಡಿಸಿ ಮನ್ನಾ ಜಾಗದಲ್ಲಿ ಅಕ್ರಮ ಅತಿಕ್ರಮಣ ಮಾಡಿ ಯಾವುದೇ ಕಟ್ಟಡ ನಿರ್ಮಾಣ ಮಾಡಲು ಮುಂದಾದಲ್ಲಿ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಪ್ರಾಧಿಕಾರದವರು ಲೈಸೆನ್ಸ್ ನೀಡಬಾರದು. ಅದನ್ನು ಉಲ್ಲಂಘಿಸಿ ನಿರ್ಮಾಣ ಮಾಡಿದ್ದಲ್ಲಿ ಅಂತಹ ಕಟ್ಟಡಕ್ಕೆ ವಿದ್ಯುಚ್ಛಕ್ತಿ ಸೌಲಭ್ಯ, ನೀರಿನ ಸೌಲಭ್ಯ ಹಾಗೂ ಟ್ರೇಡ್ ಲೈಸೆನ್ಸ್‌ನ್ನು ನೀಡಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶೋಷಣೆ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಆಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಯುವ ಜನರು ಮಾದಕ ವಸ್ತುಗಳ ವ್ಯಸನಿಗಳಾಗುವುದನ್ನು ತಪ್ಪಿಸಲು ಸಹ ಜಾಗೃತಿ ಮೂಡಿಸಬೇಕು ಎಂದರು.

ಪೂರ್ವಜರಿಗೆ ಸರಕಾರದಿಂದ ಸುಮಾರು ವರ್ಷಗಳ ಹಿಂದೆ ಮಂಜೂರಾಗಿ ಅವರ ಮರಣ ನಂತರ ಅವರ ಖಾತೆಯಲ್ಲಿ ಜಮೀನುಗಳಿದ್ದು, ಅವರ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆಗಳನ್ನು ಅಗತ್ಯ ದಾಖಲೆಗಳನ್ನು ಪಡೆದು ಮಾಡಿಕೊಡಬೇಕೆಂದು ತಿಳಿಸಿದರು.

ಪೌರ ಕಾರ್ಮಿಕರು ತಮ್ಮ ಕಾರ್ಯಗಳನ್ನು ಕೈಗೊಳ್ಳುವಾಗ ಸುರಕ್ಷತಾ ಸಾಧನಗಳನ್ನು ತಪ್ಪದೇ ಬಳಸಬೇಕು. ಮ್ಯಾನುವಲ್ ಸ್ಕಾವೆಂಜರ್ ‌ಗಳನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಅವುಗಳ ಸ್ವಚ್ಛತಾ ಕಾರ್ಯಗಳನ್ನು ಯಂತ್ರಗಳ ಬಳಕೆಯಿಂದ ಮಾತ್ರ ಮಾಡಬೇಕು. ಉಲ್ಲಂಘಿಸುವುದು ಕಂಡುಬಂದಲ್ಲಿ ಅಧಿಕಾರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಡಿಸಿಪಿ ಹರಿರಾಮ್ ಶಂಕರ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅನುಷ್ಠಾನಾಧಿ ಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X