ಚಿಕ್ಕಮಗಳೂರು : ಬಾಲಕಿಯ ಅತ್ಯಾಚಾರ ಪ್ರಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಚಿಕ್ಕಮಗಳೂರು : ಶೃಂಗೇರಿಯಲ್ಲಿ ಬಾಲಕಿಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಈ ಸಂದರ್ಭ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಠಾಣೆ ಎದುರು ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಹಾಗು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಮಾಜಿ ಸಚಿವ ಜೀವರಾಜ್, ಸಿ ಟಿ ರವಿ, ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Next Story