ರೈತರಿಂದ ಲಂಚ ಸ್ವೀಕರಿಸುತ್ತಿದ್ದ ತಾಲೂಕು ಕಚೇರಿ ಗುಮಾಸ್ತ ಎಸಿಬಿ ಬಲೆಗೆ
ಮಂಡ್ಯ, ಫೆ.5: ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಶ್ರೀರಂಗಪಟ್ಟಣ ತಾಲೂಕು ಕಚೇರಿಯ ಆರ್ಆರ್ಟಿ ಶಾಖೆಯ ಗುಮಾಸ್ತ ಪಿ.ಮಂಜು ಶುಕ್ರವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಶ್ರೀರಂಗಪಟ್ಟಣ ತಾಲೂಕು ಚಂದಗಿರಿ ಕೊಪ್ಪಲು ಗ್ರಾಮದ ಧರಣೇಂದ್ರ ಕುಮಾರ್ ಎಂಬವರಿಂದ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಜು ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದರು.
ಮಂಡ್ಯದ ಎಸಿಬಿ ಕಚೇರಿಯ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಸತೀಶ್, ರವಿಶಂಕರ್ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಆರೋಪಿಯನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ.
Next Story