Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಕಣಿ ಕವಿ ಮಾವ್ರಿಸ್ ಕವಿತಾ...

ಕೊಂಕಣಿ ಕವಿ ಮಾವ್ರಿಸ್ ಕವಿತಾ ಪುರಸ್ಕಾರಕ್ಕೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ6 Feb 2021 11:05 PM IST
share
ಕೊಂಕಣಿ ಕವಿ ಮಾವ್ರಿಸ್ ಕವಿತಾ ಪುರಸ್ಕಾರಕ್ಕೆ ಆಯ್ಕೆ

ಮಂಗಳೂರು, ಫೆ.6: ಕವಿತಾ ಟ್ರಸ್ಟ್ ನೀಡುವ 2020ನೇ ಸಾಲಿನ ಮಥಾಯಸ್ ಕುಟುಂಬ ಪ್ರಾಯೋಜಿತ ಕವಿತಾ ಪುರಸ್ಕಾರವು ಕವಿ ಮಾವ್ರಿಸ್ ಶಾಂತಿಪುರ ಅವರಿಗೆ ಲಭಿಸಿದೆ.

ಪುರಸ್ಕಾರವು 25 ಸಾವಿರ ರೂ. ನಗದು, ಸ್ಮರಣಿಕೆ ಮತ್ತು ಪ್ರಮಾಣಪತ್ರ ಒಳಗೊಂಡಿದೆ. ಫೆ.20ರಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯುವ ಕವಿತಾ ಫೆಸ್ಟ್ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಗುವುದು. ಕವಿ, ಸಂಘಟಕ ಟೈಟಸ್ ನೊರೊನ್ಹಾ ಅಧ್ಯಕ್ಷರಾಗಿ ಮತ್ತು ಹಿರಿಯ ಕೊಂಕಣಿ ಮುಂದಾಳು ಬಸ್ತಿ ವಾಮನ್ ಶೆಣೈ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

‘ಕಿರಾ ಬೋಂಚ್’ ಮತ್ತು ‘ಭಿಂಗಾರಿ’ ಕವನ ಸಂಕಲನಗಳನ್ನು ಪ್ರಕಟಿಸಿದ ಮಾವ್ರಿಸ್ ಮುನ್ನೂರಕ್ಕೂ ಮಿಕ್ಕಿ ಕವಿತೆಗಳನ್ನು ರಚಿಸಿದ್ದಾರೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಗಾಗಿ ‘ಆಬೊಲಿಂ’ ಕವಿತಾ ಸಂಗ್ರಹವನ್ನು ಸಂಪಾದಿಸಿದ್ದಾರೆ. ಕೊಂಕಣಿ ಪತ್ರಿಕೆಗಳಾದ ‘ಆಮ್ಚಿ ಯುವಕ್’, ‘ಉಮಾಳೊ’ ಮತ್ತು ‘ಕಾಣಿಕ್’ ಪತ್ರಿಕೆಗಳ ಸಂಪಾದಕರಾಗಿ ಹಾಗೂ ‘ರಾಕ್ಣೊ’ ಸಹ ಸಂಪಾದಕರಾಗಿ ದುಡಿದ ಅವರು, ಹಲವು ಯುವ ಕವಿಗಳಿಗೆ ಪ್ರೇರಣೆಯಾಗಿದ್ದಾರೆ. ಕವಿತೆ ಬರೆಯುವ ಬಗ್ಗೆ ಕಾರ್ಯಾಗಾರಗಳನ್ನು, ಕವಿಗೋಷ್ಠಿಗಳನ್ನು ಆಯೋಜಿಸಿದ್ದಾರೆ. ಕವಿಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದಾರೆ. ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಕೊಂಕಣಿ ಕವಿತೆಯನ್ನು ಪ್ರತಿನಿಧಿಸಿದ್ದಾರೆ.

ಕೊಂಕಣಿ ಲೇಖಕರ ಒಕ್ಕೂಟದ ಅಧ್ಯಕ್ಷರಾಗಿ, ಸಾಹಿತ್ಯ ಅಕಾಡಮಿ ಡೆಲ್ಲಿ, ಕೊಂಕಣಿ ಭಾಷಾ ಮಂಡಳ ಮತ್ತು ಕೊಂಕಣಿ ಸಾಹಿತ್ಯ ಪರಿಷದ್ ಸಮಿತಿಗಳಲ್ಲಿ ಸದಸ್ಯರಾಗಿ ದುಡಿದಿದ್ದಾರೆ. ಅಂತರ್ಜಾಲದಲ್ಲಿ ಕೊಂಕಣಿ ಸುಗಂಧ ಪಸರಿಸಲು ಕಾಣಿಕ್ ಆನ್‌ಲೈನ್ ಡಾಟ್ ಕಾಮ್ ಮತ್ತು ಗ್ಲೋಬಲ್ ರೇಡಿಯೊ ಆರಂಭಿಸಿದ್ದರು.

ಅವರ ‘ಕಿರಾ ಬೋಂಚ್’ ಕೃತಿಗೆ ದಿ. ಲುವಿಸ್ ಮಸ್ಕರೇನ್ಹಸ್ ಜನ್ಮ ಶತಾಬ್ದಿ ಪುರಸ್ಕಾರ ಮತ್ತು ಕೊಂಕಣಿ ಭಾಷಾ ಮಂಡಳ, ಗೋವಾದ ಪುರಸ್ಕಾರಗಳು ಲಭಿಸಿವೆ. ಸಾಹಿತಿಗಳಿಗೆ ಲಭಿಸುವ ಕೊಂಕಣಿ ಕುಟಮ್, ಬಾಹ್ರೇನ್ ಪುರಸ್ಕಾರವು ಪ್ರಥಮವಾಗಿ ಅವರಿಗೆ ಲಭಿಸಿತ್ತು.

ಮಥಾಯಸ್ ಕುಟುಂಬ ಪುರಸ್ಕಾರ: ದುಬೈನ ಮೆರಿಟ್ ಫ್ರೈಟ್ ಸಿಸ್ಟಮ್ಸ್‌ನ ಆಡಳಿತ ನಿರ್ದೇಶಕ ಜೋಸೆಫ್ ಮಥಾಯಸ್ ತಮ್ಮ ಕುಟುಂಬದ ಹೆಸರಲ್ಲಿ ಕೊಡಮಾಡುವ ಈ ಪುರಸ್ಕಾರವು ಇದುವರೆಗೆ 12 ಕವಿಗಳಿಗೆ ಲಭಿಸಿದೆ. ಇದೇ ಸಂದರ್ಭದಲ್ಲಿ ವಿಮರ್ಶಕ ಎಚ್ಚೆಮ್ ಪೆರ್ನಾಲ್ ಅವರ ‘ಕೊಂಕ್ಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ’ ಪುಸ್ತಕ ಲೊಕಾರ್ಪಣೆಗೊಳ್ಳಲಿದೆ. ನೆಲ್ಸನ್ ಮತ್ತು ಲವೀನಾ ರೊಡ್ರಿಕ್ಸ್- ಚಾಫ್ರಾ ಡಿಕೊಸ್ತಾ ಸ್ಮಾರಕ ಕೊಂಕಣಿ ಕವಿತಾ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X