Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಕೆಲವರು...

ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ವಾರ್ತಾಭಾರತಿವಾರ್ತಾಭಾರತಿ6 Feb 2021 11:38 PM IST
share

ಲಕ್ನೋ, ಫೆ.6: ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆ ಕಾರ್ಯವಿಧಾನದ ಕುರಿತು ಕೆಲವರು ರೈತರಲ್ಲಿ ಗೊಂದಲವನ್ನು ಹರಡುತ್ತಿದ್ದಾರೆಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಆಪಾದಿಸಿದ್ದಾರೆ. ಮೋದಿ ಸರಕಾರದ ಆಡಳಿತದಲ್ಲಿ ಬೆಳೆಗಳ ನಿಗದಿತ ದರದಲ್ಲಿ ಒಂದೂವರೆ ಪಟ್ಟು ಏರಿಕೆಯಾಗಿರುವುದು ವಾಸ್ತವ ಸಂಗತಿ ಎಂದವರು ಹೇಳಿದ್ದಾರೆ.

ಲಕ್ನೋದಲ್ಲಿ ಬಿಜೆಪಿಯ ಉತ್ತರಪ್ರದೇಶ ಘಟಕದ ಮುಖ್ಯ ಕಾರ್ಯಾಲಯದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ‘‘ ಕೃಷಿ ಕಾಯ್ದೆಗಳನ್ನು ಕರಾಳ ಶಾಸನಗಳೆಂದು ಬಣ್ಣಿಸುವ ಜನರು ಹಾಗೂ ಕೃಷಿಯ ಬಗ್ಗೆ ತಿಳುವಳಿಕೆ ಇರುವವರು ಮುಂದೆ ಬಂದು, ಕೃಷಿ ಕಾನೂನಿನಲ್ಲಿ ಕರಾಳವಾದುದು ಏನಿದೆ ಎಂಬುದನ್ನು ತಿಳಿಸಬೇಕು’’ ಎಂದರು. ಜನರಿಂದ ತಿರಸ್ಕಾರಕ್ಕೊಳಗಾದವರು ಅಥವಾ ಭವಿಷ್ಯದಲ್ಲಿ ತಾವು ನಿಷ್ಪ್ರಯೋಜಕರಾಗಿ ಹೋಗಬಹುದೆಂಬ ಭೀತಿಯಿರುವವರು ಇದನ್ನು ದೊಡ್ಡ ವಿವಾದವಾಗಿ ಮಾಡುತ್ತಿದ್ದಾರೆ ಮತ್ತು ಈ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮಾಡಿದಂತೆ ಇಲ್ಲಿಯೂ ಗೊಂದಲವನ್ನು ಹರಡುತ್ತಿದ್ದಾರೆ’’ ಎಂದು ಆಪಾದಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ರೈತರ ಕಲ್ಯಾಣಕ್ಕೆ ಹಾಗೂ ಅವರ ಆದಾಯವನ್ನು ದ್ವಿಗುಣಗೊಳಿಸುವುದಕ್ಕೆ ಬದ್ಧವಾಗಿದೆ ಎಂದರು.

2021-22ರ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಪ್ರಸ್ತಾವಿಸಿದ ಶೇಖಾವತ್ ‘‘ದೇಶವನ್ನು ಸ್ವಾವಲಂಬಿಯಾಗಿ ಮಾಡುವ ಉದ್ದೇಶದೊಂದಿಗೆ ಬಜೆಟನ್ನು ಮಂಡಿಸಲಾಗಿದೆ. ಯಾವತ್ತಾದರೂ ‘ಆತ್ಮನಿರ್ಭರ ಭಾರತದ ಇತಿಹಾಸ’ವನ್ನು ಬರೆದಾಗ ಈ ಬಜೆಟ್ ಒಂದು ಮೈಲುಗಲ್ಲೆಂಬುದು ಸಾಬೀತಾಗಲಿದೆ. ಪ್ರತಿಕೂಲತೆಯನ್ನು ಅವಕಾಶವನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಈ ಬಜೆಟನ್ನು ಮಂಡಿಸಲಾಗಿದೆ ಎಂದರು.

ನೂತನ ಬಜೆಟ್‌ನಲ್ಲಿ ಕೇಂದ್ರ ಸರಕಾರವು ನಗರಪ್ರದೇಶಗಳಲ್ಲಿ ಜಲ ಜೀವನ ಮಿಶನ್‌ಗೆ ಚಾಲನೆ ನೀಡಿದ್ದು ಉತ್ತರಪ್ರದೇಶವು ಅದರ ಅಧಿಕ ಪ್ರಯೋಜನವನ್ನು ಪಡೆಯಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X