Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ನಾಳೆಯಿಂದ ಐದು ದಿನಗಳ ಕಾಲ...

ಬೆಂಗಳೂರು: ನಾಳೆಯಿಂದ ಐದು ದಿನಗಳ ಕಾಲ ರಾಷ್ಟ್ರೀಯ ತೋಟಗಾರಿಕೆ ಮೇಳ

ವಾರ್ತಾಭಾರತಿವಾರ್ತಾಭಾರತಿ7 Feb 2021 9:18 PM IST
share

ಬೆಂಗಳೂರು, ಫೆ.7: ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹೆಸರುಘಟ್ಟದಲ್ಲಿ ಆಯೋಜಿಸಿರುವ ರಾಷ್ಟ್ರೀಯ ತೋಟಗಾರಿಕೆ ಮೇಳ ನಾಳೆಯಿಂದ(ಫೆ.8) ಐದು ದಿನಗಳ ಕಾಲ ನಡೆಯಲಿದ್ದು, ಕೇಂದ್ರ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ಆನ್‍ಲೈನ್ ಮೂಲಕ ಚಾಲನೆ ನೀಡಲಿದ್ದಾರೆ.

ಸೋಮವಾರ ಬೆಳಗ್ಗೆ 11ಗಂಟೆಗೆ ಮೇಳಕ್ಕೆ ಚಾಲನೆ ದೊರೆಯಲಿದ್ದು, ಪ್ರಮುಖ ಅತಿಥಿಗಳಾಗಿ ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿಶಂಕರ್ ಗುರೂಜಿ ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ, ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಎಂ.ಆರ್.ದಿನೇಶ್, ಮೇಳದ ಸಂಘಟನಾ ಕಾರ್ಯದರ್ಶಿ ಮತ್ತು ಐಐಎಚ್‍ಆರ್ ನ ಪ್ರಧಾನ ವಿಜ್ಞಾನಿ ಡಾ.ಧನಂಜಯ್ ಮತ್ತು ಸಂಸ್ಥೆಯ ವಿಜ್ಞಾನಿಗಳು ಭಾಗವಹಿಸಲಿದ್ದಾರೆ.

ಸಮಗ್ರ ತೋಟಗಾರಿಕೆ ಪದ್ಧತಿ, ಮಣ್ಣು ರಹಿತ ಕೃಷಿ ವಿಧಾನ, ಟೆರೇಸ್ ಗಾರ್ಡನಿಂಗ್, ಹೊಸ ತಂತ್ರಜ್ಞಾನಗಳ ಪರಿಚಯ, ರೈತರ ಮನೆ ಬಾಗಿಲಿಗೆ ಉತ್ಕೃಷ್ಟ ಬೀಜ ಪೂರೈಸುವ `ಸೀಡ್ ಪೋರ್ಟಲ್' ಸೇರಿದಂತೆ ಹತ್ತು ಹಲವು ತೋಟಗಾರಿಕೆ ಬೆಳೆಗೆ ಸಂಬಂಧಿಸಿದಂತೆ ರೈತರಿಗೆ ಸಾಕಷ್ಟು ಮಾಹಿತಿ ಮೇಳದಲ್ಲಿ ಸಿಗಲಿದೆ.

ನಗರ ಕೃಷಿಕರಿಗಾಗಿ ಹೈಡ್ರೊಪಾನಿಕ್ಸ್ ವಿಧಾನದಲ್ಲಿ ತರಕಾರಿ, ಹೂವು ಬೆಳೆಯುವ ಬಗ್ಗೆ ತರಬೇತಿ ನೀಡಲಾಗುವುದು. ಜತೆಗೆ ಅಧಿಕ ಇಳುವರಿ ಕೊಡುವ ನಾನಾ ತರಕಾರಿ, ಹೂವು ಮತ್ತು ಹಣ್ಣಿನ ಬೆಳೆಗಳ ಬಗ್ಗೆ ತಾಕುಗಳಲ್ಲಿ ಐಐಎಚ್‍ಆರ್ ನ ವಿಜ್ಞಾನಿಗಳೇ ಪ್ರಾತ್ಯಕ್ಷಿಕೆಗಳನ್ನು ನಡೆಸಿಕೊಡುವರು.

ಇಂದು ನೋಂದಾಯಿತ ಸುಮಾರು 6 ಸಾವಿರ ಮಂದಿಗೆ ಭೌತಿಕವಾಗಿ ಭಾಗವಹಿಸಲು ಅವಕಾಶ ನೀಡಲಾಗುವುದು. ಉಳಿದಂತೆ ಆನ್‍ಲೈನ್‍ನಲ್ಲಿ ರೈತರು ಹಾಗೂ ಇತರ ಆಸಕ್ತರು ಭಾಗವಹಿಸಬಹುದು. ಮೇಳಕ್ಕೆ ಬರುವವರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆಯ್ದ ಸ್ಥಳಗಳಲ್ಲಿ 10 ಮೊಬೈಲ್ ಶೌಚಾಲಯಗಳನ್ನು ತೆರೆಯಲಾಗಿದೆ.

ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಆದರೆ ಊಟದ ವ್ಯವಸ್ಥೆ ಸಂಸ್ಥೆಯಿಂದ ಉಚಿತವಾಗಿ ಇರುವುದಿಲ್ಲ. ಫುಡ್‍ಕೋರ್ಟ್‍ನಲ್ಲಿ ಹಣ ಕೊಟ್ಟು ರಿಯಾಯಿತಿ ದರದಲ್ಲಿ ಖರೀದಿಸಬೇಕು. ಮೇಳದಲ್ಲಿ ಸುಮಾರು 140 ಪ್ರದರ್ಶನ ಮಳಿಗೆಗಳಿರುತ್ತವೆ. ಬೀಜ, ಸಸಿಗಳು, ಯಂತ್ರೋಪಕರಣಗಳನ್ನು ಖರೀದಿಸಲು ಅವಕಾಶವೂ ಇರುತ್ತದೆ ಎಂದು ಆಯೋಜನಾ ಕಾರ್ಯದರ್ಶಿ ಹಾಗೂ ಪ್ರಧಾನ ವಿಜ್ಞಾನಿ ಡಾ. ಎಂ.ವಿ. ಧನಂಜಯ ತಿಳಿಸಿದರು.

ಆನ್‍ಲೈನ್ ನೋಂದಣಿ: ಕೋವಿಡ್ -19 ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಭೌತಿಕ ಹಾಗೂ ಆನ್‍ಲೈನ್ ಮೂಲಕ ಮೇಳ ನಡೆಯಲಿದೆ. ಮೇಳದಲ್ಲಿ ಪಾಲ್ಗೊಳ್ಳಲು ರೈತರಿಗೆ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ವ್ಯವಸ್ಥೆ ಕಲ್ಪಿಸಲಾಗಿದೆ. ಆಸಕ್ತ ರೈತರು ಎನ್‍ಎಚ್‍ಎನ್ ವೆಬ್‍ಸೈಟ್ https://nhf2021.iihr.res.in ನಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X