Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀರಾ ರಾಘವೇಂದ್ರ ವಿರುದ್ಧ ಕ್ರಮಕ್ಕೆ ಆಲ್...

ಮೀರಾ ರಾಘವೇಂದ್ರ ವಿರುದ್ಧ ಕ್ರಮಕ್ಕೆ ಆಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Feb 2021 10:41 PM IST
share

ಬೆಂಗಳೂರು, ಫೆ.8: ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ತಮ್ಮ ಕೇಸಿನ ವಿಚಾರಣೆಗೆ ಫೆ.4ರಂದು ಹಾಜರಾಗಿದ್ದ ಹಿರಿಯ ಸಾಹಿತಿ ಪ್ರೊ.ಕೆ.ಎಸ್ ಭಗವಾನ್‍ರವರ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಎನ್ನುವವರು ಮಸಿ ಬಳಿದು ಅವರನ್ನು ಅವಮಾನ ಮಾಡಿರುವುದು ನಿಜಕ್ಕೂ ಖಂಡನೀಯ ಎಂದು ಆಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ಅಧ್ಯಕ್ಷ ಅಡ್ವೊಕೇಟ್ ಪ್ರೊ.ಹರಿರಾಮ್ ಹೇಳಿದ್ದಾರೆ.

ಈ ಸಂಬಂಧ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಿಗೆ ಪತ್ರ ಬರದಿರುವ ಅವರು, ನಮ್ಮ ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ವಾಕ್ ಸ್ವಾತಂತ್ರ್ಯವನ್ನು ನೀಡಿದ್ದು, ತಮಗಿಷ್ಟವಿಲ್ಲದ್ದನ್ನು ಖಂಡಿಸುವುದು ಇಷ್ಟವಾದದನ್ನು ಸ್ವೀಕರಿಸುವುದು ಅವರ ಅಭಿಪ್ರಾಯಕ್ಕೆ ಬಿಟ್ಟ ವಿಷಯ. ಆದರೆ ಅವರು ನಾಸ್ತಿಕರು ಎನ್ನುವ ಕಾರಣಕ್ಕೆ ಅವರ ಮೇಲೆ ಈ ರೀತಿಯ ದೌರ್ಜನ್ಯ ನಡೆಸುವುದು ನಿಜಕ್ಕೂ ಖಂಡನೀಯ ಎಂದು ತಿಳಿಸಿದ್ದಾರೆ.

ವಕೀಲೆ ಮೀರಾ ರಾಘವೇಂದ್ರ, ಪ್ರೊ.ಭಗವಾನ್‍ರವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಅದೇ ಕೇಸಿನಲ್ಲಿ ಜಾಮೀನು ಪಡೆಯಲು ಭಗವಾನ್ ನ್ಯಾಯಾಲಯಕ್ಕೆ ಬಂದಂತಹ ಸಂದರ್ಭದಲ್ಲಿ ಏಕಾಏಕಿ ಅವರಿಗೆ ಮಸಿ ಬಳಿದು ಅವರನ್ನು ನಿಂದಿಸಿ ಅವಮಾನಿಸಿರುವ ಘಟನೆಯು ಅಮಾನವೀಯ ಹಾಗೂ ಕಾನೂನು ಬಾಹಿರ ಎಂದು ಅವರು ಹೇಳಿದ್ದಾರೆ.

ವಕೀಲೆ ಮೀರಾ ರಾಘವೇಂದ್ರರವರು ಭಗವಾನ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಆ ಪ್ರಕರಣದಲ್ಲಿ ದೂರುದಾರರಾಗಿದ್ದು, ಈ ಸಂದರ್ಭದಲ್ಲಿ ದೂರುದಾರರು ಅದರಲ್ಲೂ ವಕೀಲೆಯೆ ಆರೋಪಿಯ ಮೇಲೆ ದಾಳಿ ಮಾಡಿ ಉದ್ದೇಶಪೂರ್ವಕವಾಗಿ ಅವರನ್ನು ಅವಮಾನ ಮಾಡುವುದು ಸರಿಯೇ? ಇದು ವಕೀಲರ ಅಧಿನಿಯಮ 1961 ನಿಯಮಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಭಗವಾನ್‍ರವರ ಮಾತಿನಿಂದ ಅವರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಅವರು ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯವನ್ನು ಪಡೆದುಕೊಳ್ಳುವ ಹಕ್ಕು ಹೊಂದಿದ್ದಾರೆ. ಆದರೆ ಈ ರೀತಿಯ ದುಂಡಾವರ್ತನೆಯನ್ನು ಮಾಡುವುದು ಅಥವಾ ಅವರೇ ಶಿಕ್ಷಿಸುವ ಹಕ್ಕು ಯಾವ ಕಾನೂನು ಕೂಡ ಅವರಿಗೆ ನೀಡುವುದಿಲ್ಲ ಎಂದು ಹರಿರಾಮ್ ತಿಳಿಸಿದ್ದಾರೆ. 

ವಕೀಲೆಯ ಈ ಕೃತ್ಯ ಇಡೀ ವಕೀಲ ಸಮುದಾಯವನ್ನೆ ತಲೆತಗ್ಗಿಸುವಂತೆ ಮಾಡಿದ್ದು, ನ್ಯಾಯಾಲಯ ಮೇಲೆ ನಂಬಿಕೆ ಇಲ್ಲದೆ ತಾವೆ ನ್ಯಾಯವನ್ನು ಕೈಗೆ ತೆಗೆದುಕೊಳ್ಳುವವರು ವಕೀಲ ವೃತ್ತಿಯಲ್ಲಿ ಮುಂದುವರಿಯಲು ಅರ್ಹರಲ್ಲ. ಇವರ ಈ ಕೃತ್ಯ ವಕೀಲ ವೃತ್ತಿಗೆ ಮತ್ತು ಗೌರವಕ್ಕೆ ಕಳಂಕ ತರುವಂತಿದೆ. ಆದುದರಿಂದ ಈ ಕೂಡಲೇ ವಕೀಲರ ಪರಿಷತ್ ಈಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X