Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂಗ್ಲಿಷ್ ಇರಲಿ, ಕನ್ನಡದ ನಿರ್ಲಕ್ಷ್ಯ...

ಇಂಗ್ಲಿಷ್ ಇರಲಿ, ಕನ್ನಡದ ನಿರ್ಲಕ್ಷ್ಯ ಬೇಡ; ಪೊಳಲಿ ನಿತ್ಯಾನಂದ ಕಾರಂತ

ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ9 Feb 2021 10:09 PM IST
share
ಇಂಗ್ಲಿಷ್ ಇರಲಿ, ಕನ್ನಡದ ನಿರ್ಲಕ್ಷ್ಯ ಬೇಡ; ಪೊಳಲಿ ನಿತ್ಯಾನಂದ ಕಾರಂತ

ಮಂಗಳೂರು, ಫೆ.9: ದಿನದಿಂದ ದಿನಕ್ಕೆ ಇಂಗ್ಲಿಷ್ ಬಗ್ಗೆ ವ್ಯಾಮೋಹ ಹೆಚ್ಚುತ್ತಿದೆ. ಇಂಗ್ಲಿಷ್ ಬೇಕು. ಆದರೆ ಕನ್ನಡವನ್ನು ನಿರ್ಲಕ್ಷಿಸಬಾರದು. ಕನ್ನಡ ಬರುವುದಿಲ್ಲ ಎಂಬುದು ಗೌರವದ ಸಂಕೇತ. ಮತ್ತು ಇಂಗ್ಲಿಷ್ ಬರುವುದಿಲ್ಲ ಎಂಬುದು ಅವಮಾನ ಎಂಬಂತಾಗಿದೆ ನಮ್ಮ ವ್ಯವಸ್ಥೆ ಎಂದು ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪೊಳಲಿ ನಿತ್ಯಾನಂದ ಕಾರಂತ ಹೇಳಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಣಂಬೂರಿನ ಶ್ರೀ ನಂದನೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಡೆದ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡದ ಉದ್ದಾರ ಕನ್ನಡದವರಿಂದ ಆಗದೆ ಮೆಕ್ಸಿಕೋ, ನ್ಯೂಜಿಲ್ಯಾಂಡಿನವರಿಂದಾಗುವುದೇ? ಇತರ ಭಾಷಿಕರಲ್ಲಿ ಸಹಜವಾಗಿ ಕ್ರಿಯಾಶೀಲ ವಾಗಿರುವ ಸ್ವಭಾಷಾಭಿಮಾನ ಕನ್ನಡಿಗರಲ್ಲಿ ಇರಬೇಕಾದಷ್ಟು ಪ್ರಮಾಣದಲ್ಲಿಲ್ಲ. ತೆಲುಗು, ಮಲಯಾಳಂ, ತಮಿಳು ಭಾಷಿಕರು ಇಂಗ್ಲಿಷ್ ಕಲಿಯುತ್ತಾರೆ. ಆದರೆ ಅವರವರ ಮಾತೃಭಾಷೆಗೆ ವಿಶೇಷ ಒಲವು ಹರಿಸುತ್ತಾರೆ. ಆದರೆ ಕನ್ನಡಿಗರಾದ ನಾವು ಅದಕ್ಕೆ ತದ್ವಿರುದ್ಧವಾಗಿದೆ. ಇಂದು ಅನೇಕ ಕನ್ನಡ ಶಾಲೆಯನ್ನು ಮುಚ್ಚಲಾಗಿದೆ. ಕನ್ನಡ ಶಾಲೆಯು ಇಂಗ್ಲಿಷ್ ಶಾಲೆಯಾಗಿ ಪರಿವರ್ತನೆಗೊಂಡಿದೆ ಎಂದರು.

ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಎಂಆರ್‌ಪಿಎಲ್ ಸಂಸ್ಥೆಯ ಸಿಎಸ್‌ಆರ್ ಉಪಮಹಾಪ್ರಬಂಧಕ ವೀಣಾ ಶೆಟ್ಟಿ ಮಾತನಾಡಿ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಬೇಕು. ಅದಕ್ಕಾಗಿ ಹೆತ್ತವರು ಮತ್ತು ಶಿಕ್ಷಕ ವರ್ಗದ ಪಾತ್ರ ಅಪಾರ ಎಂದರು.

ಶಾಸಕ ಡಾ.ವೈ.ಭರತ್ ಶೆಟ್ಟಿ ಪುಸ್ತಕ ಪ್ರದರ್ಶನ ಮಳಿಗೆ ಉದ್ಘಾಟಿಸಿದರು. ಮೇಯರ್ ದಿವಾಕರ ಪಾಂಡೇಶ್ವರ್ ರಾಷ್ಟ್ರಧ್ವಜಾರೋಹಣಗೈದರು. ಮನಪಾ ಉಪ ಮೇಯರ್ ವೇದಾವತಿ ಕನ್ನಡ ಭುವನೇಶ್ವರಿ ದಿಬ್ಬಣ ಉದ್ಘಾಟಿಸಿದರು. ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ಪರಿಷತ್‌ನ ಧ್ವಜಾರೋಹಣಗೈದು ಆಶಯ ಭಾಷಣಗೈದರು. ಕಾರ್ಪೊರೇಟರ್ ಸುನೀತಾ ಕನ್ನಡ ಧ್ವಜಾರೋಹಣಗೈದರು.

ಕೃಷ್ಣ ಪ್ರದೀಪ ಶೇಡಿಗುಡ್ಡೆ ಅವರ ಕಣಿಪುರದ ಕಂಪು, ಎಸ್.ಕೆ. ಗೋಪಾಲಕೃಷ್ಣ ಭಟ್ ಅವರ ‘ಆಶಾವಾದ’ ಕವನ ಸಂಕಲನವನ್ನು ಕೇಂದ್ರ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಪಿ.ಅನಂತ ಐತಾಳ ಅತಿಥಿಗಳಾಗಿದ್ದರು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಲೇಖಕ ರಘು ಇಡ್ಕಿದು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X