Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಂಗಳನ ಕಕ್ಷೆ ಪ್ರವೇಶಿಸಿದ ಯುಎಇಯ ‘ಹೋಪ್’...

ಮಂಗಳನ ಕಕ್ಷೆ ಪ್ರವೇಶಿಸಿದ ಯುಎಇಯ ‘ಹೋಪ್’ ಶೋಧ ನೌಕೆ

ವಿಜ್ಞಾನಿಗಳು, ಜನರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ9 Feb 2021 11:58 PM IST
share
ಮಂಗಳನ ಕಕ್ಷೆ ಪ್ರವೇಶಿಸಿದ ಯುಎಇಯ ‘ಹೋಪ್’ ಶೋಧ ನೌಕೆ

  ದುಬೈ (ಯುಎಇ), ಫೆ. 10: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಮಂಗಳ ಗ್ರಹ ಶೋಧಕ ನೌಕೆ ‘ಹೋಪ್’ ಮಂಗಳವಾರ ಕೆಂಪು ಗ್ರಹದ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಸಾಧನೆಗೈದ ಮೊದಲ ಅರಬ್ ದೇಶವಾಗಿ ಅದು ಇತಿಹಾಸಕ್ಕೆ ಸೇರ್ಪಡೆಗೊಂಡಿದೆ.

ಮಂಗಳ ಗ್ರಹದ ಹವಾಮಾನವನ್ನು ಅಧ್ಯಯನ ಮಾಡುವುದಕ್ಕಾಗಿ ಈ ಶೋಧ ನೌಕೆಯನ್ನು ವಿನ್ಯಾಸಗೊಳಿಸಲಾಗಿದೆ. ಆದರೆ, ಈ ಬಾಹ್ಯಾಕಾಶ ಕಾರ್ಯಕ್ರಮವು ವಲಯದ ಯುವಜನರಿಗೆ ಪ್ರೇರಣೆಯಾಗಬೇಕೆಂದೂ ಯುಎಇ ಬಯಸಿದೆ.

‘‘ಶೋಧಕ ನೌಕೆ ‘ಹೋಪ್’ ಮಂಗಳ ಗ್ರಹದ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿದೆ ಎನ್ನುವ ಸುದ್ದಿಯನ್ನು ಯುಎಇಯ ಜನತೆಗೆ ಹಾಗೂ ಅರಬ್ ಮತ್ತು ಮುಸ್ಲಿಮ್ ದೇಶಗಳಿಗೆ ನಾವು ಘೋಷಿಸುತ್ತೇವೆ. ದೇವರಿಗೆ ಸ್ತೋತ್ರ’’ ಎಂದು ಕಾರ್ಯಕ್ರಮದ ಯೋಜನಾ ನಿರ್ವಾಹಕ ಉಮ್ರಾನ್ ಶರಾಫ್ ಹೇಳಿದರು.

 ನೌಕೆಯು ಮಂಗಳ ಗ್ರಹದ ಕಕ್ಷೆಯನ್ನು ಪ್ರವೇಶಿಸಿದಂತೆಯೇ ನಿಯಂತ್ರಣ ಕೇಂದ್ರದಲ್ಲಿದ್ದ ಸಿಬ್ಬಂದಿ ಚಪ್ಪಾಳೆಗೈದು ಹರ್ಷ ವ್ಯಕ್ತಪಡಿಸಿದರು. ನೌಕೆಯು ಮಂಗಳ ಗ್ರಹದ ಗುರುತ್ವಾಕರ್ಷಣೆಯಿಂದ ಸೆಳೆಯಲ್ಪಡುವುದಕ್ಕಾಗಿ ಅದರ ವೇಗವನ್ನು ಕಡಿಮೆ ಮಾಡುವ ಅರ್ಧ ಗಂಟೆಯ ಉದ್ವಿಗ್ನ ಕಾರ್ಯಾಚರಣೆಯ ಬಳಿಕ ಅವರು ನಿರಾಳರಾದರು. ಇದು ಶೋಧ ನೌಕೆಯ ಪ್ರಯಾಣದ ಅತ್ಯಂತ ಅಪಾಯಕಾರಿ ಹಂತವಾಗಿತ್ತು.

ಯುಎಇಯ ‘ಹೋಪ್’ ಬಳಿಕ, ಇದೇ ತಿಂಗಳಲ್ಲಿ ಅಮೆರಿಕ ಮತ್ತು ಚೀನಾಗಳ ಶೋಧ ನೌಕೆಗಳೂ ಮಂಗಳನ ಕಕ್ಷೆಯನ್ನು ಸೇರಲಿವೆ. ಮಂಗಳ ಮತ್ತು ಭೂಮಿ ಪರಸ್ಪರ ಅತ್ಯಂತ ಸನಿಹದಲ್ಲಿದ್ದಾಗ ಕಳೆದ ವರ್ಷದ ಜುಲೈಯಲ್ಲಿ ಈ ಮೂರು ದೇಶಗಳು ಶೋಧ ನೌಕೆಗಳನ್ನು ಉಡಾಯಿಸಿದ್ದವು.

‘‘ಈ ಸಾಧನೆಯೊಂದಿಗೆ ನೀವು ನಿಮಗೆ ಮತ್ತು ದೇಶಕ್ಕೆ ಗೌರವ ತಂದಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ’’ ಎಂದು ಅಬುಧಾಬಿಯ ಯುವರಾಜ ಶೇಖ್ ಮುಹಮ್ಮದ್ ಬಿನ್ ಝಾಯಿದ್ ನಿಯಂತ್ರಣ ಕೊಠಡಿಗೆ ಪ್ರವೇಶಿಸಿ ಅಲ್ಲಿನ ವಿಜ್ಞಾನಿಗಳನ್ನು ಉದ್ದೇಶಿಸಿ ಹೇಳಿದರು.

‘ಅಲ್ ಅಮಾಲ್’ (ಹೋಪ್) ಶೋಧಕ ನೌಕೆಯು ತನ್ನ ಸರಾಸರಿ ವೇಗವನ್ನು ಗಂಟೆಗೆ 1,21,000 ಕಿ.ಮೀ.ನಿಂದ ಗಂಟೆಗೆ ಸುಮಾರು 18,000 ಕಿ.ಮೀ.ಗೆ ಇಳಿಸುವುದಕ್ಕಾಗಿ ತನ್ನ ಎಲ್ಲ 6 ಶಕ್ತಿಶಾಲಿ ನೂಕು ಯಂತ್ರಗಳನ್ನು ವಿರುದ್ಧ ದಿಕ್ಕಿನಲ್ಲಿ ನಿಯೋಜಿಸಿತು.

ಜಗತ್ತಿನ ಅತಿ ಎತ್ತರದ ಕಟ್ಟಡವಾಗಿರುವ ದುಬೈನ ಬುರ್ಜ್ ಖಲೀಫವನ್ನು ಮಂಗಳ ಗ್ರಹದ ಬಣ್ಣವಾಗಿರುವ ಕೆಂಪಿನಿಂದ ಬೆಳಗಿಸಲಾಗಿತ್ತು ಹಾಗೂ ನೀಲಿ ಲೇಸರ್ ಬೆಳಕನ್ನು ಹಾಯಿಸಲಾಗಿತ್ತು.

ಯುಎಇಯಾದ್ಯಂತದ ಎಲ್ಲ ಪ್ರಮುಖ ಕಟ್ಟಡಗಳನ್ನು ಕೆಂಪಿನಿಂದ ಬೆಳಗಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X