Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮುದಾಯಗಳಿಗೆ ನೋವಾಗುವಂತೆ ಮಾತನಾಡುವುದು...

ಸಮುದಾಯಗಳಿಗೆ ನೋವಾಗುವಂತೆ ಮಾತನಾಡುವುದು ಸಲ್ಲದು : ಯುಟಿ ಖಾದರ್

ವಾರ್ತಾಭಾರತಿವಾರ್ತಾಭಾರತಿ10 Feb 2021 10:09 PM IST
share

ಮಂಗಳೂರು, ಫೆ.10: ಯಾವುದೇ ಸಮುದಾಯಗಳಿಗೆ ನೋವಾಗುವಂತೆ ಮಾತನಾಡಬಾರದು. ಇಂತಹವನ್ನು ಸಹಿಸಲಸಾಧ್ಯ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ್ ಅಧಿಕಾರಿ ಆಡಿದ ಮಾತುಗಳು ಕೋಟಿ-ಚೆನ್ನಯ, ಜನಾರ್ದನ ಪೂಜಾರಿ, ಬಿಲ್ಲವರಿಗೆ ದುಃಖ ತಂದಿದೆ. ಹಿರಿಯರಾದ ಅವರು ಅಂಥ ಮಾತುಗಳನ್ನಾಡಬಾರದಿತ್ತು. ಅಧಿಕಾರಿ ಸಹಿತ ನಾವೆಲ್ಲರೂ ಪೂಜಾರಿಯವರ ಗರಡಿಯಲ್ಲೇ ಬೆಳೆದವರು. ಅವರು ಪಕ್ಷ ಬಿಟ್ಟು ಹೋದರೆ, ನಾವು ಈಗಲೂ ಇದ್ದೇವೆ. ಮುಂದಕ್ಕೆ ಯಾರೊಬ್ಬರೂ ಈ ರೀತಿ ತಪ್ಪಿ ಮಾತನಾಡಬಾರದು. ಮುಂದಕ್ಕಿದು ಬೇರೆಯವರಿಗೆ ಪಾಠವಾಗಬೇಕು ಎಂದು ತಿಳಿಸಿದರು.

ಪ್ರತಿಭಾ ಕುಳಾಯಿ ಆಡಿರುವ ಮುಖಕ್ಕೆ ಮಸಿ ಬಳಿಯುವ ಮಾತು ಸಮರ್ಥಿಸಲಾಗದು. ಅಧಿಕಾರಿಯ ಮಾತಿನಿಂದ ಸಮುದಾಯ, ಪೂಜಾರಿಯವರಿಗಾದ ಅವಮಾನದಿಂದ ಬೇಸತ್ತು ಮಸಿ ಬಳಿಯುವ ಮಾತನ್ನಾಡಿರಬಹುದು. ಅಧಿಕಾರಿಯಂತೆಯೇ ಪ್ರತಿಭಾ ಅವರೂ ಗಡಿಬಿಡಿ ಯಲ್ಲಿ ಮಾತನಾಡಿದ್ದಾರೆ. ಅವರದ್ದು ವೈಯಕ್ತಿಕ ಹೇಳಿಕೆಯಾಗಿದ್ದು, ಕಾಂಗ್ರೆಸ್ ವಹಿಸಿಕೊಳ್ಳಲಾಗದು ಎಂದರು.

ಕೆಲವರಿಂದ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ: ಮಂಗಳೂರಿನಲ್ಲಿ ಸಿಸಿಬಿ ವಶದಲ್ಲಿದ್ದ ಕಾರು ಮಾರಾಟವಾಗಿರುವ ವಿಚಾರದ ಬಗ್ಗೆ ವಿದಾನಸಭೆ ಯಲ್ಲಿ ಮಾತನಾಡಲು ಸಮಯ ಕೇಳಿದ್ದರೂ ಅವಕಾಶ ಸಿಕ್ಕಿಲ್ಲ. ಪೊಲೀಸರಿಗೆ ಗೊತ್ತಿಲ್ಲದೆ ಯಾವುದೇ ಕೆಲಸ ಆಗುವುದಿಲ್ಲ. ಇಲಾಖೆಯಲ್ಲಿ ಶೇ.90ರಷ್ಟು ಪೊಲೀಸರು ಒಳ್ಳೆಯವರಿದ್ದರೂ ಶೇ.10 ಮಂದಿಯಿಂದ ಇಲಾಖೆಯ ಹೆಸರು ಹಾಳಾಗಿ ಜನರು ನಂಬಿಕೆ ಕಳೆದುಕೊಳ್ಳು ವಂತಾಗಿದೆ. ಪೊಲೀಸರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ಸಿಕ್ಕಿಲ್ಲ, ಆದರೂ ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಸರಕಾರಕ್ಕೆ ಪತ್ರ ಬರೆದಿದ್ದೇನೆ. ತನಿಖೆ ನಡೆಸಬೇಕಿರುವುದು, ಇಲಾಖೆಯನ್ನು ಪ್ರಶ್ನಿಸಬೇಕಿರುವುದು ಸರಕಾರದ ಜವಾಬ್ದಾರಿ. ಆದರೆ ಜನರು ಅವರಲ್ಲಿ ಕೇಳುವ ಬದಲು ಪ್ರತಿಪಕ್ಷದವರಲ್ಲಿ ಕೇಳುತ್ತಾರೆ ಎಂದು ಖಾದರ್ ಚಟಾಕಿ ಹಾರಿಸಿದರು.

ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಸೇಲ್ ಇಂಡಿಯಾ, ಲೂಟ್ ಇಂಡಿಯಾ ಆಗಿದೆ. ಜನರ ಮೇಲೆ ಇಲ್ಲಸಲ್ಲದ ತೆರಿಗೆ ಹೊರೆ ಹೇರಲಾಗಿದೆ. ತೈಲ ಬೆಲೆ ಏರಿಕೆಯಿಂದ ಎಲ್ಲ ವಸ್ತುಗಳಿಗೂ ಬೆಲೆಯೇರಿಕೆ ಸಣ್ಣ ಮಕ್ಕಳಿಗೂ ಗೊತ್ತಿದೆ. ಇದೆಲ್ಲ ಗೊತ್ತಿದ್ದರೂ ಸರಕಾರ ಕಾನೂನು ಬದ್ಧವಾಗಿ ಜನರನ್ನು ಲೂಟಿ ಮಾಡಿದೆ. ಪ್ರತಿ ಬಜೆಟ್‌ನಲ್ಲೂ ರಾಜ್ಯ, ಕರಾವಳಿ ಭಾಗಕ್ಕೆ ಯಾವುದೇ ಕೊಡುಗೆ ಇರುವುದಿಲ್ಲ. ಆದರೂ ಈ ಬಗ್ಗೆ ರಾಜ್ಯದ ಸಂಸದರು, ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಧ್ವನಿ ಎತ್ತುವ ತಾಕತ್ತು ತೋರಿಸುತ್ತಿಲ್ಲ. ಈ ಬಜೆಟ್ ಕಷ್ಟಕಾಲದಲ್ಲಿ ಮಾಂಗಲ್ಯ ಅಡವಿಡುವಂಥ ಪರಿಸ್ಥಿತಿ ನಿರ್ಮಿಸಿದೆ ಎಂದು ಖಾದರ್ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮುಹಮ್ಮದ್ ಮೋನು, ಸುದರ್ಶನ್ ಶೆಟ್ಟಿ, ಝಕರಿಯಾ ಮಲಾರ್, ಸದಾಶಿವ ಉಳ್ಳಾಲ್, ಫಾರೂಕ್ ತುಂಬೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X