Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅವಳಿ ಕೊಲೆ ಪ್ರಕರಣ; ಆರೋಪಿ ವಿರುದ್ಧದ...

ಅವಳಿ ಕೊಲೆ ಪ್ರಕರಣ; ಆರೋಪಿ ವಿರುದ್ಧದ ಆರೋಪ ಸಾಬೀತು: ಸೋಮವಾರ ಶಿಕ್ಷೆ ಪ್ರಕಟ

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ11 Feb 2021 4:32 PM IST
share
ಅವಳಿ ಕೊಲೆ ಪ್ರಕರಣ; ಆರೋಪಿ ವಿರುದ್ಧದ ಆರೋಪ ಸಾಬೀತು: ಸೋಮವಾರ ಶಿಕ್ಷೆ ಪ್ರಕಟ

ಉಡುಪಿ, ಫೆ.11: ಸುಮಾರು ಆರು ವರ್ಷಗಳ ಹಿಂದೆ ಉಡುಪಿ ನಗರದ ಚಿಟ್ಪಾಡಿಯಲ್ಲಿ ನಡೆದ ಅವಳಿ ಕೊಲೆ ಪ್ರಕರಣದ ಆರೋಪಿ ವಿರುದ್ಧದ ಆರೋಪಗಳು ಸಾಬೀತಾಗಿರುವುದಾಗಿ ತನ್ನ ತೀರ್ಪಿನಲ್ಲಿ ಪ್ರಕಟಿಸಿರುವ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುಬ್ರಹ್ಮಣ್ಯ ಜೆ.ಎನ್., ಆತನಿಗೆ ವಿಧಿಸುವ ಶಿಕ್ಷೆಯನ್ನು ಫೆ.15ರಂದು ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಅಸ್ಸಾಂ ಮೂಲದ ಸಂಜಯ್‌ ಕುಮಾರ್ ದತ್ತ (44) ಅವಳಿ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಆತ 2015ರ ಎಪ್ರಿಲ್ 30ರ ರಾತ್ರಿ 10:30ರ ಸುಮಾರಿಗೆ ತನ್ನ ಪತ್ನಿ ಅರ್ಚನಾ ಹಾಗೂ ಅತ್ತೆ ನಿರ್ಮಲಾರನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿತ್ತು. ಇವರಲ್ಲಿ ನಿರ್ಮಲಾ ಸ್ಥಳದಲ್ಲೆ ಮೃತಪಟ್ಟಿದ್ದರೆ, ಅರ್ಚನಾ ಮರುದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಮೇ 1ರಂದು ಆರೋಪಿ ಸಂಜಯ್ ದತ್ತನ್ನು ಪೊಲೀಸರು ಬಂಧಿಸಿದ್ದರು.

ಅಂದಿನ ಪೊಲೀಸ್ ವೃತ್ತ ನಿರೀಕ್ಷಕ ಶ್ರೀಕಾಂತ್ ಪ್ರಕರಣ ತನಿಖೆ ನಡೆಸಿದ್ದರು. 2019ರ ಆ.24ರಂದು ಪ್ರಕರಣದ ತನಿಖೆ ಪ್ರಾರಂಭಗೊಂಡಿದ್ದು, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಫೆ.10ರಂದು ತೀರ್ಪು ಪ್ರಕಟಿಸಿದರು. ಪ್ರಕರಣದಲ್ಲಿ ಒಟ್ಟು 44 ಮಂದಿ ಸಾಕ್ಷಿಗಳನ್ನು ಗುರುತಿಸಲಾಗಿದ್ದು, ಇವರಲ್ಲಿ 25 ಮಂದಿಯ ವಿಚಾರಣೆ ನಡೆಸಲಾಯಿತು. ವಿಚಾರಣೆಯಲ್ಲಿ ಸಂಜಯ್‌ಕುಮಾರ್ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಧೀಶರು ಪ್ರಕಟಿಸಿದರು.

ಘಟನೆ ಹಿನ್ನೆಲೆ: ಅಸ್ಸಾಂ ಮೂಲದ ಸಂಜಯ್ ಕುಮಾರ್ ದತ್ತ ಕಳೆದ 20 ವರ್ಷಗಳಿಂದ ಉಡುಪಿಯಲ್ಲಿ ವಾಸವಾಗಿದ್ದು, ಮಂಗಳೂರು ಬೈಕಂಪಾಡಿಯ ಕಾರ್ಖಾನೆಯೊಂದರಲ್ಲಿ ಪ್ರೋಡಕ್ಷನ್ ಮ್ಯಾನೇಜರ್ ಆಗಿ ಕೆಲಸ ಮಾಡುತಿದ್ದ. ಆತ 2007ರಲ್ಲಿ ಚಿಟ್ಪಾಡಿಯ ಬಿಲ್ಲವ ಜಾತಿಯ ನಿರ್ಮಲ ಎಂಬವರ ಮಗಳಾದ ಅರ್ಚನಾಳನ್ನು ಮದುವೆಯಾಗಿದ್ದ. ದಂಪತಿಗಳಿಗೆ ಎರಡು ಗಂಡು ಹಾಗೂ ಓರ್ವ ಮಗಳಿದ್ದರು. ದಂಪತಿಯ ನಡುವೆ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ಪದೇ ಪದೇ ಗಲಾಟೆಯಾಗುತ್ತಿತ್ತು ಎಂದು ದೋಷಾರೋಪಣ ಪಟ್ಟಿಯಲ್ಲಿ ಹೇಳಲಾಗಿತ್ತು.

2015ರ ರಾತ್ರಿ 10:30ರ ಸುಮಾರಿಗೆ ಗಂಡ-ಹೆಂಡತಿ ಮಧ್ಯೆ ಮತ್ತೆ ಜಗಳವಾಗಿದ್ದು, ಸಿಟ್ಟಿನಿಂದ ಆರೋಪಿ ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಕಡಿಯಲು ಮುಂದಾಗಿದ್ದು, ತಡೆಯಲು ನಿರ್ಮಲಾ ಮಧ್ಯಪ್ರವೇಶಿಸಿದಾಗ ಆಕೆ ಏಟು ಬಿದ್ದು ಗಂಭೀರ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ನಂತರ ಆರೋಪಿ ಪತ್ನಿಯನ್ನು ಯನ್ನು ಅಟ್ಟಿಸಿಕೊಂಡು ಹೋಗಿ ಕತ್ತಿಯಿಂದ ಕಡಿದಿದ್ದು, ಗಂಭೀರವಾಗಿ ಗಾಯಗೊಂಡ ಅರ್ಚನಾರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೇ 1ರಂದು ಮೃತಪಟ್ಟಿದ್ದರು. ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾದ ಶ್ರೀಕಾಂತ್ ಕೆ. ಜುಲೈ 14ರಂದು ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X