Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುದೀರ್ಘ ಪ್ರತಿಭಟನೆಗೆ ಸಜ್ಜಾಗಲು...

ಸುದೀರ್ಘ ಪ್ರತಿಭಟನೆಗೆ ಸಜ್ಜಾಗಲು ಸೌಲಭ್ಯಗಳು,ಮೂಲಸೌಕರ್ಯ ಹೆಚ್ಚಿಸಿಕೊಳ್ಳುತ್ತಿರುವ ರೈತರು

ಇಂಟರ್ನೆಟ್ ಸಮಸ್ಯೆ ಎದುರಾಗದಿರಲು ಪ್ರತ್ಯೇಕ ಆಪ್ಟಿಕಲ್ ಫೈಬರ್ ಲೈನ್ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ11 Feb 2021 8:07 PM IST
share
ಸುದೀರ್ಘ ಪ್ರತಿಭಟನೆಗೆ ಸಜ್ಜಾಗಲು ಸೌಲಭ್ಯಗಳು,ಮೂಲಸೌಕರ್ಯ ಹೆಚ್ಚಿಸಿಕೊಳ್ಳುತ್ತಿರುವ ರೈತರು

ಹೊಸದಿಲ್ಲಿ,ಫೆ.11: ನೂತನ ಕೃಷಿ ಕಾಯ್ದೆಗಳ ಕುರಿತು ಸೃಷ್ಟಿಯಾಗಿರುವ ಬಿಕ್ಕಟ್ಟು ಸದ್ಯಕ್ಕೆ ಪರಿಹಾರಗೊಳ್ಳುವ ಸಾಧ್ಯತೆ ಕಂಡುಬರದ ಹಿನ್ನೆಲೆಯಲ್ಲಿ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರು ಸುದೀರ್ಘ ಪ್ರತಿಭಟನೆಗೆ ಸಜ್ಜಾಗಲು ಸ್ಥಳದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದಾರೆ.

 ಮೋದಿ ಸರಕಾರವು ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೆ ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಶಾಸನಾತ್ಮಕ ಖಾತರಿಯನ್ನು ನೀಡುವವರೆಗೆ ಅನಿರ್ದಿಷ್ಟಾವಧಿ ಕಾಲ ಪ್ರತಿಭಟನೆಯು ಮುಂದುವರಿಯಲಿದೆ ಎಂದು ಆಂದೋಲನದ ನೇತೃತ್ವವನ್ನು ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರು ಪುನರುಚ್ಚರಿಸಿದ್ದಾರೆ.

ಸುದೀರ್ಘ ಅವಧಿಗೆ ಪ್ರತಿಭಟನೆಯನ್ನು ಮುಂದುವರಿಸಲು ನಮ್ಮ ಸಂವಹನ ವ್ಯವಸ್ಥೆ ಮತ್ತು ಇತರ ಮೂಲಸೌಕರ್ಯಗಳನ್ನು ಬಲಗೊಳಿಸುತ್ತಿದ್ದೇವೆ ಎಂದು ಸಿಂಘು ಗಡಿಯಲ್ಲಿ ಮೊಕ್ಕಾಂ ವ್ಯವಸ್ಥೆಯ ಹೊಣೆ ಹೊತ್ತಿರುವ ತಂಡದ ಸದಸ್ಯ ದೀಪ್ ಖತ್ರಿ ತಿಳಿಸಿದರು.

 ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಮತ್ತು ದುಷ್ಕರ್ಮಿಗಳನ್ನು ದೂರವಿಡಲು ಮೋರ್ಚಾದ ನಾಯಕರು ಬಳಸುವ ಮುಖ್ಯವೇದಿಕೆಯಲ್ಲಿ ಮತ್ತು ಕೆಲವು ಗುರುತಿಸಿದ ಸ್ಥಳಗಳಲ್ಲಿ ನೂರು ಡಿಜಿಟಲ್ ವೀಡಿಯೊ ರೆಕಾರ್ಡರ್ ಸಹಿತ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿದಿನ ಬಹಳಷ್ಟು ಜನರು ಬಂದುಹೋಗುತ್ತಿರುವುದರಿಂದ ನಿಗಾಯಿರಿಸಲು ಮುಖ್ಯವೇದಿಕೆಯ ಹಿಂದೆ ನಿಯಂತ್ರಣ ಕೊಠಡಿಯೊಂದನ್ನು ಸಹ ಸಜ್ಜುಗೊಳಿಸಲಾಗುತ್ತಿದೆ. ಪ್ರತಿಭಟನಾ ಸ್ಥಳದಲ್ಲಿ ಗಸ್ತು ಮತ್ತು ಸಂಚಾರ ವ್ಯವಸ್ಥೆಯನ್ನು ಹಾಗೂ ರಾತ್ರಿಗಳಲ್ಲಿ ಕಾವಲು ನಿರ್ವಹಿಸಲು 600 ಸ್ವಯಂಸೇವಕರ ತಂಡವೊಂದನ್ನು ರೂಪಿಸಲಾಗುತ್ತಿದೆ. ಈ ಸ್ವಯಂಸೇವಕರಿಗೆ ಸುಲಭವಾಗಿ ಗುರುತಿಸಲಾಗುವ ಹಸಿರು ಜಾಕೆಟ್‌ಗಳು ಮತ್ತು ಗುರುತು ಚೀಟಿಗಳನ್ನು ನೀಡಲಾಗುತ್ತದೆ. ರೈತರು ಮುಖ್ಯವೇದಿಕೆಯಿಂದ ನಾಯಕರ ಭಾಷಣಗಳಂತಹ ಚಟುವಟಿಕೆಗಳನ್ನು ವೀಕ್ಷಿಸಲು ಸಾಧ್ಯವಾಗುವಂತೆ 700-800 ಮೀ.ಅಂತರದಲ್ಲಿ ಆಯಕಟ್ಟಿನ 10 ತಾಣಗಳಲ್ಲಿ ಎಲ್‌ಸಿಡಿ ಪರದೆಗಳನ್ನು ಸ್ಥಾಪಿಸುವ ಕೆಲಸವೂ ನಡೆಯುತ್ತಿದೆ ಎಂದು ಅವರು ವಿವರಿಸಿದರು.

ಸರಕಾರವು ಇತ್ತೀಚಿಗೆ ಮಾಡಿದ್ದಂತೆ ಅಂತರ್ಜಾಲ ಸೇವೆಯಲ್ಲಿ ಯಾವುದೇ ವ್ಯತ್ಯಯವನ್ನು ಎದುರಿಸಲು ಮೋರ್ಚಾ ವೈಫೈ ಸೌಲಭ್ಯಕ್ಕಾಗಿ ಪ್ರತ್ಯೇಕ ಆಪ್ಟಿಕಲ್ ಪೈಬರ್ ಲೈನ್‌ನ್ನು ಬಾಡಿಗೆಯ ನೆಲೆಯಲ್ಲಿ ಪಡೆದುಕೊಳ್ಳುತ್ತಿದೆ,ಮುಂಬರುವ ಬೇಸಿಗೆಯ ಹಿನ್ನೆಲೆಯಲ್ಲಿ ಮುಖ್ಯವೇದಿಕೆಯಲ್ಲಿ ವಿದ್ಯುತ್ ಚಾಲಿತ ಫ್ಯಾನ್‌ಗಳು ಮತ್ತು ಏರ್‌ಕಂಡಿಷನರ್‌ಗಳನ್ನೂ ಅಳವಡಿಸಲಾಗುತ್ತಿದೆ ಹಾಗೂ ಅಲ್ಲಿಯ ಇತರ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತಿದೆ ಎಂದರು.

ಇದೇ ವೇಳೆ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರು,ತಿಂಗಳುಗಟ್ಟಲೆ ಕಾಲ ಇಲ್ಲಿ ಮೊಕ್ಕಾಂ ಹೂಡಿ ಪ್ರತಿಭಟನೆ ನಡೆಸಲು ಸಿದ್ಧರಿದ್ದೇವೆ,ಹಾಗೆ ಮಾಡಲು ಜನರು ಅಥವಾ ಸಂಪನ್ಮೂಲಗಳ ಕೊರತೆಯಿಲ್ಲ ಎಂದು ಒತ್ತಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X