Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡ ದುರಂತ:ತಪೋವನ ಸುರಂಗದಲ್ಲಿ...

ಉತ್ತರಾಖಂಡ ದುರಂತ:ತಪೋವನ ಸುರಂಗದಲ್ಲಿ ಅಡಚಣೆಗಳ ನಡುವೆಯೇ ಮುಂದುವರಿದಿರುವ ರಕ್ಷಣಾ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ11 Feb 2021 8:18 PM IST
share
ಉತ್ತರಾಖಂಡ ದುರಂತ:ತಪೋವನ ಸುರಂಗದಲ್ಲಿ ಅಡಚಣೆಗಳ ನಡುವೆಯೇ ಮುಂದುವರಿದಿರುವ ರಕ್ಷಣಾ ಕಾರ್ಯಾಚರಣೆ

ಡೆಹ್ರಾಡೂನ್,ಫೆ.11: ನೀರ್ಗಲ್ಲು ಸ್ಫೋಟದಿಂದ ಹಿಮಪ್ರವಾಹ ಉಂಟಾಗಿದ್ದ ರವಿವಾರದಿಂದ ತಪೋವನ ವಿದ್ಯುತ್ ಯೋಜನೆಯ ಸುರಂಗದಲ್ಲಿ ಸಿಕ್ಕಿಹಾಕಿಕೊಂಡಿರುವ 25ರಿಂದ 35 ಜನರ ಜೀವ ಉಳಿಸಲು ವ್ಯತ್ಯಯಗಳ ನಡುವೆಯೇ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಗುರುವಾರ ಧೌಲಿಗಂಗಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದರಿಂದ ಸುರಂಗದಲ್ಲಿ ಕಾರ್ಯನಿರತರಾಗಿದ್ದ ರಕ್ಷಣಾ ಸಿಬ್ಬಂದಿಗಳು ಹೊರಗೆ ಧಾವಿಸುವಂತಾಗಿತ್ತು ಮತ್ತು ಕೆಸರಿನ ನಡುವೆಯೇ ಕೊರೆಯಲು ಬಳಸಲಾಗಿದ್ದ ಭಾರೀ ಯಂತ್ರೋಪಕರಣಗಳನ್ನು ಕಾರ್ಯಾಚರಣೆಯಿಂದ ಹಿಂದೆಗೆದುಕೊಳ್ಳಲಾಗಿತ್ತು. ಬಳಿಕ ಮತ್ತೆ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.

ಸುರಂಗದಲ್ಲಿಯ ರಾಶಿ ರಾಶಿ ಕೆಸರನ್ನು ತೆಗೆಯುವ ವ್ಯಾಪಕ ಪ್ರಯತ್ನದ ಬಳಿಕ ಒಳಗೆ ಸಿಕ್ಕಿಹಾಕಿಕೊಂಡಿರುವ ಕಾರ್ಮಿಕರಿಗೆ ಆಮ್ಲಜನಕ ಸಿಲಿಂಡರ್‌ನಂತಹ ಜೀವರಕ್ಷಕ ಸಾಧನಗಳನ್ನು ತಲುಪಿಸಲು ರಕ್ಷಣಾ ಸಿಬ್ಬಂದಿಗಳು ಕೆಸರಿನಲ್ಲಿ ರಂಧ್ರಗಳನ್ನು ಕೊರೆಯುವ ಕೆಲಸವನ್ನಾರಂಭಿಸಿದ್ದರು. ನದಿನೀರಿನ ಮಟ್ಟವು ಏಕಾಏಕಿ ಏರಿದ ಪರಿಣಾಮ ಅವರು ತಮ್ಮ ಯಂತ್ರೋಪಕರಣಗಳೊಂದಿಗೆ ಹೊರಕ್ಕೆ ಬಂದಿದ್ದರು ಮತ್ತು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಕೆಲ ಸಮಯದ ಬಳಿಕ ರಕ್ಷಣಾ ತಂಡಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದ್ದು,ಜೋಶಿಮಠದಲ್ಲಿ ಸೀಮಿತ ತಂಡಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡಿದೆ ಎಂದು ಎನ್‌ಡಿಆರ್‌ಎಫ್ ವಕ್ತಾರರು ತಿಳಿಸಿದರು.

ಸುಮಾರು 12-13 ಮೀ.ಗಳಷ್ಟು ಕೆಳಗಿರುವ ಕೆಸರು ತುಂಬಿದ ಸುರಂಗದಲ್ಲಿ ಇಣುಕಿ ನೋಡಲು ರಂಧ್ರಗಳನ್ನು ಕೊರೆಯುವ ಕೆಲಸವನ್ನು ನಸುಕಿನ ಎರಡು ಗಂಟೆಗೆ ಆರಂಭಿಸಲಾಗಿತ್ತು. ಕೆಸರು ಮತ್ತು ಹೂಳಿನ ನಿರಂತರ ಪ್ರವಾಹವು ರಕ್ಷಣಾ ತಂಡಗಳು ಮತ್ತು ಒಳಗೆ ಸಿಲುಕಿರುವವರ ನಡುವೆ ಅಡ್ಡಿಯಾಗಿದೆ. ಹೀಗಾಗಿ ಕಾರ್ಯತಂತ್ರವನ್ನು ಬದಲಿಸಲಾಗಿದೆ ಎಂದು ಐಟಿಬಿಪಿಯ ವಕ್ತಾರ ವಿವೇಕಕುಮಾರ ಪಾಂಡೆ ಅವರು ದಿಲ್ಲಿಯಲ್ಲಿ ತಿಳಿಸಿದರು.

ರಂಧ್ರಗಳನ್ನು ಕೊರೆಯುವ ಮೂಲಕ ಸುರಂಗದಲ್ಲಿ ಸಿಕ್ಕಿಹಾಕಿಕೊಂಡವರಿಗೆ ಜೀವರಕ್ಷಕ ಸಾಧನಗಳನ್ನು ತಲುಪಿಸಲು ಸದ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದು ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿರುವ ಗಡ್ವಾಲ್ ವಿಭಾಗಾಧಿಕಾರಿ ರವಿನಾಥ ರಮಣ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X