Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನ'...

'ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನ' ನೀಡಲು ರಾಜ್ಯಸಭೆಯಲ್ಲಿ ಡಾ.ಎಲ್.ಹನುಮಂತಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 Feb 2021 9:29 PM IST
share
ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನ ನೀಡಲು ರಾಜ್ಯಸಭೆಯಲ್ಲಿ ಡಾ.ಎಲ್.ಹನುಮಂತಯ್ಯ ಆಗ್ರಹ

ಹೊಸದಿಲ್ಲಿ, ಫೆ.11: ಶಾಸ್ತ್ರಿಯ ಸ್ಥಾನಮಾನ ಪಡೆದ ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕೆಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಗುರುವಾರ ರಾಜ್ಯಸಭೆಯಲ್ಲಿ ಆಗ್ರಹಿಸಿದರು.

ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಡಾ.ಎಲ್.ಹನುಮಂತಯ್ಯ, 2008 ರಲ್ಲಿಯೆ ಶಾಸ್ತ್ರೀಯ ಸ್ಥಾನಮಾನ ಪಡೆದಿರುವ, ಕನ್ನಡ ಶಾಸ್ತ್ರೀಯ ಭಾಷಾ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕೆಂದು ಕರ್ನಾಟಕ ಸರಕಾರ ಸೇರಿದಂತೆ, ಕನ್ನಡ ಭಾಷಾ ಸಾಹಿತಿಗಳು ಮತ್ತು ಕನ್ನಡಪರ ಹೋರಾಟಗಾರರು ಅನೇಕ ವರ್ಷಗಳಿಂದ ಕೇಂದ್ರ ಸರಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿಸಿದರು.

ಇತ್ತೀಚಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಮೈಸೂರಿನ ‘ಭಾರತೀಯ ಭಾಷಾ ಕೇಂದ್ರವನ್ನು' ಹಾಗೂ ‘ಭಾರತೀಯ ಅನುವಾದ ಮತ್ತು ವ್ಯಾಖ್ಯಾನ ಸಂಸ್ಥೆಯನ್ನು' ಭಾರತೀಯ ಭಾಷಾ ವಿಶ್ವವಿದ್ಯಾಲಯವನ್ನಾಗಿ(ಬಿಬಿವಿ) ಪರಿವರ್ತಿಸಲು ಪ್ರಸ್ತಾಪ ನೀಡಿದೆ ಎಂದು ಹನುಮಂತಯ್ಯ ಹೇಳಿದರು.

ಕೇಂದ್ರ ಸರಕಾರವು ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದಿರುವ ಶಾಸ್ತ್ರೀಯ ಭಾಷಾ ಸಂಸ್ಥೆಗಳನ್ನು ಭಾರತೀಯ ಭಾಷಾ ವಿಶ್ವ ವಿದ್ಯಾಲಯವನ್ನಾಗಿ (ಬಿಬಿವಿ) ಅಡಿಯಲ್ಲಿ ತರಲು ಎನ್.ಗೋಪಾಲಸ್ವಾಮಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕೆಲವು ನಿಯಮಗಳನ್ನು ನೀಡಿ ಸಲಹೆಗಳನ್ನು ಕೋರಿದೆ ಎಂದು ಅವರು ತಿಳಿಸಿದರು.

ನಾವು ಬೇಡಿಕೆಯಿಟ್ಟಿದ್ದು ಶಾಸ್ತ್ರೀಯ ಸ್ಥಾನಮಾನ ಪಡೆದಿರುವ ಕನ್ನಡ ಶಾಸ್ತ್ರೀಯ ಭಾಷಾ ಸಂಸ್ಥೆಯು ಸ್ವಾಯತ್ತತೆ ಹಾಗೂ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕೆಂದು. ಆದರೆ, ಕೇಂದ್ರ ಸರಕಾರ ಇಲ್ಲಿ ಎಲ್ಲ ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದ ಶಾಸ್ತ್ರೀಯ ಭಾಷಾ ಸಂಸ್ಥೆಗಳನ್ನು ಭಾರತೀಯ ಭಾಷಾ ವಿಶ್ವವಿದ್ಯಾಲಯದ ಅಧೀನದಲ್ಲಿ ತರಲು ಪ್ರಯತ್ನಿಸುತ್ತಿದೆ. ಇದು ಪ್ರತ್ಯೇಕ ಹಾಗು ಸ್ವಾಯತ್ತತೆ ಇಲ್ಲದ ಯಾವುದೇ ಶಾಸ್ತ್ರೀಯ ಭಾಷೆಯ ಸಂಸ್ಥೆಗಳ ಬೆಳವಣಿಗೆಗೆ ಹಾನಿಕರ ಎಂದು ಹನುಮಂತಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ನಾನು ಸೇರಿದಂತೆ ರಾಜ್ಯದ ನಿಯೋಗದೊಂದಿಗೆ ಕೇಂದ್ರ ಸರಕಾರದ ಈ ಹಿಂದಿನ ಮಾನವ ಸಂಪನ್ಮೂಲ ಸಚಿವರಾದ ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಸೇರಿದಂತೆ ಪ್ರಸ್ತುತ ಮಾನವ ಸಂಪನ್ಮೂಲ ಸಚಿವರಿಗೂ ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನ ನೀಡುವುದರ ಬಗ್ಗೆ ಪ್ರಸ್ತಾಪ ನೀಡಿದ್ದೇವೆ. ಮೂವರು ಸಚಿವರೂ ಕೂಡ ಈ ಪ್ರಸ್ತಾಪನೆಯನ್ನು ಒಪ್ಪಿ ಕನ್ನಡಕ್ಕೆ ಸ್ವಾಯತ್ತತೆ ಸ್ಥಾನಮಾನವನ್ನು ಕೊಡುವುದರ ಬಗ್ಗೆ ಖಚಿತಪಡಿಸಿದ್ದರು. ಆದರೆ, ಇಲ್ಲಿಯವರೆಗೂ ನೀಡಿಲ್ಲ ಎಂದು ಅವರು ಹೇಳಿದರು.

ಸ್ವಾಯತ್ತ ಸ್ಥಾನಮಾನ ನೀಡದ ಹೊರತಾಗಿ ಶಾಸ್ತ್ರೀಯ ಸ್ಥಾನಮಾನ ಪಡೆದಿರುವ ಭಾಷೆಗಳ ಕೆಲಸ ಪರಿಪೂರ್ಣಗೊಳ್ಳುವುದಿಲ್ಲ. ಅದಕ್ಕೆ ಉದಾಹರಣೆಯೆಂದರೆ ಕೇಂದ್ರ ಸರಕಾರ ತಮಿಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನದ ಜೊತೆಗೆ ಸ್ವಾಯುತ್ತ ಸ್ಥಾನಮಾನವನ್ನು ಸಹ ನೀಡಿದ್ದರಿಂದ ಅಲ್ಲಿ ಅತ್ಯುತ್ತಮ ಕೆಲಸ ಮಾಡಲು ಸಾಧ್ಯವಾಗುತ್ತಿದೆ. ಆದರೆ, ಉಳಿದ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನವನ್ನು 2008ರಲ್ಲಿಯೆ ನೀಡಿದ್ದರೂ ಸ್ವಾಯತ್ತತೆಯ ಸ್ಥಾನಮಾನವನ್ನು ಇನ್ನು ನೀಡಲಾಗಿಲ್ಲ ಎಂದು ಹನುಮಂತಯ್ಯ ಬೇಸರ ವ್ಯಕ್ತಪಡಿಸಿದರು.

ಉಳಿದ ಭಾಷೆಗಳಿಗೆ ಇನ್ನು ಯಾಕೆ ಈ ಸ್ಥಾನಮಾನವನ್ನು ನೀಡಲಾಗುತ್ತಿಲ್ಲ ಎಂದು ಕೇಂದ್ರ ಸರಕಾರ ಉತ್ತರಿಸಬೇಕಿದೆ. ಮತ್ತು ಅದರ ಬಗ್ಗೆ ಸರಕಾರ ಹೆಚ್ಚಿನ ಒಲವು ತೋರಿಸಿ ಒಂದು ನಿರ್ಧಾರಕ್ಕೆ ಬರಬೇಕೆಂದು ಹನುಮಂತಯ್ಯ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X