Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಯುವತಿಗೆ ವರದಕ್ಷಿಣೆ ಕಿರಕುಳ ಆರೋಪ:...

ದಲಿತ ಯುವತಿಗೆ ವರದಕ್ಷಿಣೆ ಕಿರಕುಳ ಆರೋಪ: ಬಿಜೆಪಿ ಮುಖಂಡನ ಬಂಧನಕ್ಕೆ ದಸಂಸ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ11 Feb 2021 10:55 PM IST
share
ದಲಿತ ಯುವತಿಗೆ ವರದಕ್ಷಿಣೆ ಕಿರಕುಳ ಆರೋಪ: ಬಿಜೆಪಿ ಮುಖಂಡನ ಬಂಧನಕ್ಕೆ ದಸಂಸ ಒತ್ತಾಯ

ಮೈಸೂರು,ಫೆ.11: ಬಿಜೆಪಿ ಮುಖಂಡ ಚಿದಂಬರ ಎಂಬಾತ ದಲಿತ ಯುವತಿಯನ್ನು ಮದುವೆಯಾಗಿ, ವರದಕ್ಷಿಣೆ ಕಿರುಕುಳ ನೀಡುವುದಲ್ಲದೇ ವಿಚ್ಛೇಧನ ನೀಡಲು ಮುಂದಾಗಿದ್ದು ಈತನ ವಿರುದ್ಧ ಮೈಸೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೂಡಲೇ ಈತನನ್ನು ಬಂಧಿಸಬೇಕು ಎಂದು ದಲಿತ ಸಂಘರ್ಷ ಸಮತಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. 

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಸಂಸ ಸಂಘಟನಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಗುಲ್ಬರ್ಗ ಮೂಲದ ಶಿವಾಜಿ ಎಂಬವರ ಪುತ್ರಿಯನ್ನು ಚಿದಂಬರನು ಜೀವನ್ ಸಾತಿ ಎಂಬ ವೆಬ್‍ಸೈಟ್ ಮೂಲಕ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಆಕೆಯೊಂದಿಗೆ ಒಂದು ವರ್ಷಗಳ ಕಾಲ ಪ್ರೀತಿಯ ನಾಟಕವಾಡಿ ತಮ್ಮ ಮನೆಯವರ ಸಹಕಾರದಿಂದ ಆಕೆಯ ಮನೆಯವರನ್ನು ನಂಬಿಸಿ ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನ ಬೆಳ್ಳಿ ಆಭರಣಗಳನ್ನು ಪಡೆದು ಮೇ.10. 2020 ರಂದು ಮೈಸೂರು ತಾಲೂಕಿನ ತನ್ನ ಫಾರ್ಮ್ ಹೌಸ್‍ನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಮದುವೆಯಾಗಿದ್ದಾನೆ ಎಂದರು. 

ಮದುವೆಯಾದ ಕೆಲವೇ ದಿನಗಳಲ್ಲಿ ಹಂತ ಹಂತವಾಗಿ ಪತ್ನಿಯ ಬ್ಯಾಂಕ್ ಖಾತೆಯಿಂದ 7.5 ಲಕ್ಷ ರೂಪಾಯಿಯನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಮತ್ತೆ ಹೆಚ್ಚಿನ ಹಣಕ್ಕೆ ಪೀಡಿಸಿ ಹಣಕೊಡದ ಕಾರಣವನ್ನೇ ನೆಪ ಮಾಡಿಕೊಂಡು ಪ್ರತ್ಯೇಕ ಊಟ ನೀಡಿ, ದೇವರ ಕೋಣೆಗೆ ಪ್ರವೇಶ ನಿರಾಕರಣೆ ಸೇರಿದಂತೆ ಮನೆಯೊಳಗೆ ಜಾತಿ ಹೆಸರಿನಲ್ಲಿ ನಿಂದಿಸಿ, ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದಾನೆ. ಅಲ್ಲದೇ, ಆಷಾಢ ಮಾಸದ ನೆಪದಲ್ಲಿ ತನ್ನ ಪತ್ನಿಯನ್ನು ತಾಯಿ ಮನೆಗೆ ಕರೆದುಕೊಂಡು ಹೋಗಿ ಬಿಟ್ಟು ಒಂದು ಲಕ್ಷ ರೂ. ಹಣ ಪಡೆದು ವಾಪಸ್ ಬಂದಿದ್ದಾನೆ ಎಂದು ಆರೋಪಿಸಿದರು.

ಮತ್ತೆ ನಾಲ್ಕೇ ತಿಂಗಳಲ್ಲಿ ವಿವಾಹ ವಿಚ್ಛೇದನ ತಿಳುವಳಿಕೆ ಪತ್ರವನ್ನು ತವರು ಮನೆಯಲ್ಲಿದ್ದ ತನ್ನ ಪತ್ನಿಗೆ ಕಳುಹಿಸಿದ್ದಾನೆ. ಇದರಿಂದ ನೊಂದ ಯುವತಿ ಮತ್ತು ಅವರ ಕುಟುಂಬ ಮೈಸೂರಿನ ಕುವೆಂಪು ನಗರ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷದ ನಗರಪಾಲಿಕೆ ಸದಸ್ಯ ಮಂಜುನಾಥ್ ಮತ್ತು ವಿಶ್ವಪ್ರಕಾಶ್ ಮದ್ಯಪ್ರವೇಶ ಮಾಡಿ ಚಿದಂಬರನ ವಿರುದ್ಧ ದೂರು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಅಲ್ಲದೆ ನ್ಯಾಯ ಕೊಡಿಸುವುದಾಗಿ ನಂಬಿಸಿ ಅರ್ಜಿದಾರರನ್ನು ವಾಪಸ್ ತವರೂರಿಗೆ ಕಳುಹಿಸಿದ್ದಾರೆ. ಫೆ.5 ರಂದು ನಗರಕ್ಕೆ ವಾಪಸ್ ಆದ ಸಂತ್ರಸ್ತೆ ತಾಯಿಯೊಂದಿಗೆ ಗಂಡನ ಮನೆಗೆ ಹೋಗಿದ್ದಾರೆ. ಚಿದಂಬರ ಅವಾಚ್ಯ ಶಬ್ದಗಳಿಂದ ನಿಂದಿಸಿ, ತನ್ನ ಕಾರನ್ನು ಹೆಂಡತಿ ಮೇಲೆ ಚಲಾಯಿಸಿ ಕೊಲ್ಲಲು ಯತ್ನಿಸಿದ್ದಾನೆ. ಈ ಹಿನ್ನಲೆಯಲ್ಲಿ ಆರೋಪಿಗಳಾದ ಚಿದಂಬರ್, ಇವರ ತಂದೆ, ತಾಯಿ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆ ವರದಕ್ಷಿಣೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ತಕ್ಷಣ ಮೂವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಡದೊರೆ ಮಹಾದೇವಯ್ಯ, ದೇವರಾಜು, ಬೊಕ್ಕಳ್ಳಿ ಮಹದೇವಸ್ವಾಮಿ, ಬಸವಟ್ಟಿಗೆ ನಾಗೇಂದ್ರ, ತಳೂರು ಸಂತೋಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X