Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತಾಂತರ ನಿಷೇಧ ಕಾಯ್ದೆಯ ಬಳಿಕ...

ಮತಾಂತರ ನಿಷೇಧ ಕಾಯ್ದೆಯ ಬಳಿಕ ಮಧ್ಯಪ್ರದೇಶದಲ್ಲಿ ದಿನಕ್ಕೊಂದು ಪ್ರಕರಣ!

ವಾರ್ತಾಭಾರತಿವಾರ್ತಾಭಾರತಿ12 Feb 2021 2:16 PM IST
share
ಮತಾಂತರ ನಿಷೇಧ ಕಾಯ್ದೆಯ ಬಳಿಕ ಮಧ್ಯಪ್ರದೇಶದಲ್ಲಿ ದಿನಕ್ಕೊಂದು ಪ್ರಕರಣ!

ಭೋಪಾಲ್, ಫೆ.12: ಮಧ್ಯಪ್ರದೇಶ ಸರಕಾರ ಧಾರ್ಮಿಕ ಸ್ವಾತಂತ್ರ್ಯ ಅಧ್ಯಾದೇಶ-2020ನ್ನು ಜಾರಿಗೆ ತಂದ ಮೊದಲ ಒಂದು ತಿಂಗಳಲ್ಲಿ ದಿನಕ್ಕೆ ಸರಾಸರಿ ಒಂದರಂತೆ ʼಬಲವಂತದ ಮತಾಂತರʼ ಪ್ರಕರಣಗಳನ್ನು ದಾಖಲಿಸಿದೆ. "ಜನವರಿಯಲ್ಲಿ ಆಂಗೀಕರಿಸಿದ ಧಾರ್ಮಿಕ ಸ್ವಾತಂತ್ರ್ಯ ಅಧ್ಯಾದೇಶ-2020ರ ಅಡಿಯಲ್ಲಿ 23 ಪ್ರಕರಣಗಳನ್ನು ಜನವರಿಯಲ್ಲಿ ದಾಖಲಿಸಲಾಗಿದೆ" ಎಂದು ಗೃಹಸಚಿವ ನರೋತ್ತಮ ಮಿಶ್ರಾ ಹೇಳಿದ್ದಾರೆ. ಈ ಅಧ್ಯಾದೇಶ ಜನವರಿ 9ರಂದು ಜಾರಿಗೆ ಬಂದಿತ್ತು.

ಭೋಪಾಲ್‌ನಲ್ಲಿ ಗರಿಷ್ಠ ಅಂದರೆ ಏಳು ಪ್ರಕರಣಗಳು ದಾಖಲಾಗಿದ್ದು, ಇಂದೋರ್‌ನಲ್ಲಿ ಐದು, ಜಬಲ್ಪುರದಲ್ಲಿ ನಾಲ್ಕು, ರೇವಾ ಹಾಗೂ ಗ್ವಾಲಿಯರ್‌ನಲ್ಲಿ ತಲಾ ಮೂರು ಪ್ರಕರಣಗಳು ದಾಖಲಾಗಿವೆ. "ಇದು ಗಂಭೀರ ಸಮಸ್ಯೆ ಮತ್ತು ಇಂಥ ಶಕ್ತಿಗಳು ದೇಶಾದ್ಯಂತ ಸಕ್ರಿಯವಾಗಿವೆ ಎನ್ನುವುದನ್ನು ಪುನರುಚ್ಚರಿಸುತ್ತೇವೆ" ಎಂದು ಮಿಶ್ರಾ ಹೇಳಿದರು.

ಮೊದಲ ಪ್ರಕರಣ ಜನವರಿ 17ರಂದು ಬರ್ವಾನಿ ಜಿಲ್ಲೆಯ ಪಲ್ಸೂದ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿತ್ತು. ಸೋಹೈಲ್ ಮನ್ಸಿರಿ ಅಲಿಯಾಸ್ ಸನ್ನಿ ಎಂಬಾತ ತನ್ನ ಜಾತಿಯ ವಿಷಯವನ್ನು ಮುಚ್ಚಿಟ್ಟು, ಅನ್ಯ ಕೋಮಿನ ಯುವತಿಗೆ ನಾಲ್ಕು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆಪಾದಿಸಲಾಗಿತ್ತು. ಇದಾದ ಮೂರು ದಿನ ಬಳಿಕ ರಾಜ್ಯ ರಾಜಧಾನಿಯಲ್ಲಿ ಮೊದಲ 'ಬಲವಂತದ ಮತಾಂತರ' ಪ್ರಕರಣ ದಾಖಲಾಗಿದ್ದು, ಮುಂದಿನ 11 ದಿನದಲ್ಲಿ ಅರು ಪ್ರಕರಣಗಳು ದಾಖಲಾಗಿವೆ.

ಬಹುತೇಕ ಪ್ರಕರಣಗಳಲ್ಲಿ ಯುವತಿಯರು ದೂರು ನೀಡಿದ್ದು, ತಮ್ಮ ಸಂಬಂಧದಲ್ಲಿ ಯುವಕರು ನೈಜ ಜಾತಿಯನ್ನು ಮರೆಮಾಚಿದ್ದಾರೆ ಎಂದು ಆಪಾದಿಸಿದ್ದಾರೆ. ಈ ಅಧ್ಯಾದೇಶಕ್ಕೆ ಮಧ್ಯಪ್ರದೇಶ ವಿಧಾನಸಭೆ ಇನ್ನೂ ಅನುಮೋದನೆ ನೀಡಿಲ್ಲ. ಇದರ ಅನ್ವಯ ಬಲವಂತದ ಮತಾಂತರಕ್ಕೆ 1-5 ವರ್ಷ ಜೈಲು ಶಿಕ್ಷೆ ಹಾಗೂ ಕನಿಷ್ಠ 25 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ. ಸಂತ್ರಸ್ತೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ ಅಥವಾ ಅಪ್ರಾಪ್ತ ವಯಸ್ಸಿನವಳಾಗಿದ್ದರೆ ಆರೋಪಿಗೆ 10 ವರ್ಷ ಜೈಲು ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.

ಈ ಹಿಂದೆ ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಸಂದರ್ಭ ಹಲವಾರು ಪ್ರಕರಣಗಳಲ್ಲಿ ಸಂಘಪರಿವಾರ ಸಂಘಟನೆಗಳು ಸೇರಿಕೊಂಡು ಯುವತಿಯರ ಕುಟುಂಬಗಳಿಗೆ ಬೆದರಿಕೆ ನೀಡುವ ಮೂಲಕ ಬಲವಂತವಾಗಿ ದೂರು ದಾಖಲಿಸುತ್ತಿದ್ದರು ಎಂದು timesofindia.com, theprint.in ಸೇರಿದಂತೆ ಹಲವು ಪ್ರಮುಖ ಮಾಧ್ಯಮಗಳು ವರದಿ ಮಾಡಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X