Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳ-ಅಡ್ಯಾರ್ ಅಣೆಕಟ್ಟು, ಸೇತುವೆ...

ಹರೇಕಳ-ಅಡ್ಯಾರ್ ಅಣೆಕಟ್ಟು, ಸೇತುವೆ ಕಾಮಗಾರಿ ಡಿಸೆಂಬರ್ ಗೆ ಪೂರ್ಣ: ಶಾಸಕ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ12 Feb 2021 5:42 PM IST
share
ಹರೇಕಳ-ಅಡ್ಯಾರ್ ಅಣೆಕಟ್ಟು, ಸೇತುವೆ ಕಾಮಗಾರಿ ಡಿಸೆಂಬರ್ ಗೆ ಪೂರ್ಣ: ಶಾಸಕ ಯು.ಟಿ.ಖಾದರ್

ಕೊಣಾಜೆ: ಹರೇಕಳ ಕಡವಿನ ಬಳಿಯಿಂದ ಅಡ್ಯಾರ್ ವರೆಗೆ  192.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಣೆಕಟ್ಟು ಹಾಗೂ ಸೇತುವೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು ಶಾಸಕ ಯು.ಟಿ.ಖಾದರ್ ಅವರು ಶುಕ್ರವಾರ ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯು.ಟಿ.ಖಾದರ್ ಅವರು ಸೇತುವೆ ಮತ್ತು ಅಣೆಕಟ್ಟು ಕಾಮಗಾರಿಯ ಕೆಲಸವು ಭರದಿಂದ ಸಾಗುತ್ತಿದೆ. ರಾಜ್ಯದಲ್ಲಿ ಸಣ್ಣ ನೀರಾವರಿ ಇಲಾಖೆಯ ಮುಖಾಂತರ ಇಷ್ಟು ದೊಡ್ಡ ಸೇತುವೆ ಜೊತಗೆ ಅಣೆಕಟ್ಟು ನಿರ್ಮಾಣವಾಗುತ್ತಿರುವುದು ರಾಜ್ಯದಲ್ಲೇ ಪ್ರಥಮ. ಇದರಲ್ಲಿ ಏಳೂವರೆ ಮೀಟರ್ ಉದ್ದದ ರಸ್ತೆ ಹಾಗೂ ಪಾದಾಚಾರಿಗಳಿಗೆ ನಡೆದುಕೊಂಡು ಹೋಗಲು ಎರಡು ಬದಿಗಳಲ್ಲಿ ಒಂದು ಮೀಟರ್ ಅಗಲ ಒಟ್ಟು ಒಂಭತ್ತೂವರೇ ಮೀಟರ್ ಅಗಲದ ಸೇತುವೆಯಾಗಿದೆ. ಕಾಮಗಾರಿಯು ಡಿಸೆಂಬರ್ ವೇಳೆಗೆ ಪೂರ್ಣಗೊಂಡು ಉದ್ಘಾಟನೆ ನಡೆಯಲಿದೆ ಎಂದರು.

ಈ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣದೊಂದಿಗೆ ಮುಡಿಪು, ಕೊಣಾಜೆ ಭಾಗದ ನಾಗರಿಕರಿಗೆ ನಗರ ಸಂಪರ್ಕಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಅಲ್ಲದೆ ತೊಕ್ಕೊಟ್ಟು ದೇರಳಕಟ್ಟೆ ಭಾಗದಲ್ಲಿ ವಾಹನದಟ್ಟಣೆ ಕೂಡಾ ಕಡಿಮೆಯಾಗಬಹುದಾಗಿದೆ. ಅಲ್ಲದೆ ಇಲ್ಲಿಯ ಅಣೆಕಟ್ಟು ನಿರ್ಮಾಣದಿಂದ 18.2ಮಿಲಿಯನ್ ಕ್ಯೂಸೆಕ್ ಮೀಟರ್ ನಮಗೆ ಸಿಹಿನೀರು ಸಿಗುತ್ತದೆ. ಈ ಸಿಹಿನೀರಿನಿಂದ ಉಳ್ಳಾಲ ವ್ಯಾಪ್ತಿಯ ಪ್ರದೇಶಗಳು ಮಾತ್ರವಲ್ಲ ಮಂಗಳೂರು ನಗರಕ್ಕೂ ಮುಂದಿನ ಮೂವತ್ತು ವರ್ಷಗಳ ಕಾಲ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದರು.

'ಪ್ರವಾಸೋದ್ಯಮ ಕ್ಷೇತ್ರ ನಿರ್ಮಾಣ'
ಹರೇಕಳ ಅಡ್ಯಾರ್ ಪ್ರದೇಶವು ಬಹಳ ಸುಂದರವಾದ ತಾಣವಾಗಿದ್ದು, ಇಲ್ಲಿ ಡ್ಯಾಂ ಮತ್ತು ಅಣೆಕಟ್ಟು ನಿರ್ಮಾಣದಿಂದ ಪ್ರವಾಸೋದ್ಯಮ ಕ್ಷೇತ್ರವಾಗಿಯೂ ಪರಿವರ್ತನೆಯಾಗಲಿದೆ. ಬೋಟಿಂಗ್, ಮಕ್ಕಳಿಗೆ ಕ್ರೀಡಾ ವ್ಯವಸ್ಥೆ ಮಾಡಿದರೆ ತುಂಬಾ ಅನುಕೂಲವಾಗಲಿದೆ. ಹಾಗೆಯೇ ಮೀನುಗಾರಿಕೆ ಕ್ಷೇತ್ರದಲ್ಲಿಯು ಅಭಿವೃದ್ಧಿ ಚಟುವಟಿಕೆಗಳಿಗೆ ಉಪಯೋಗವಾಗಲಿದೆ  ಹಾಗೂ ಇಲ್ಲಿಯ ಕೃಷಿ ಜಮೀನುಗಳಿಗೂ ಅನುಕೂಲವಾಗಲಿದ್ದು ಈ ಊರಿಗೆ ಈ ಯೋಜನೆ ಒಂದು ಕೊಡುಗೆಯಾಗಲಿದೆ ಎಂದರು.

ಈ ಯೋಜನೆಯು ಸರ್ಕಾರದ ಪ್ರೊತ್ಸಾಹದೊಂದಿಗೆ ಕಾರ್ಯಕಾರಿ ಅಭಿಯಂತರರು, ಗುತ್ತಿಗೆದಾರರ‌ ಹಾಗೂ ಸ್ಥಳೀಯರ ಸಹಕಾರದೊಂದಿಗೆ ನಡೆಯುತ್ತಿದ್ದು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಮಹಮ್ಮದ್ ಮೋನು, ಹರೇಕಳ ಗ್ರಾಮ ಪಂಚಾಯತಿಯ ಬದ್ರುದ್ದೀನ್, ಹರೇಕಳ ಪಂಚಾಯತಿ ಮಾಜಿ ಅಧ್ಯಕ್ಷ ಮಹಾಬಲ ಹೆಗ್ಡೆ, ಸಣ್ಣ ನೀರಾವರಿಯೋಜನೆಯ ಎಂಜಿನಿಯರ್ ಗೋಕುಲ್ ದಾಸ್, ಗುರುಮೂರ್ತಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X