ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಕ್ಕೆ 11 ಬಲಿ,36 ಜನರಿಗೆ ಗಾಯ
ಪರಿಹಾರ ಘೋಷಿಸಿದ ಮುಖ್ಯಮಂತ್ರಿ, ಪ್ರಧಾನಿ

photo: ANI
ಚೆನ್ನೈ,ಫೆ.12: ತಮಿಳುನಾಡಿನ ವಿರುಧನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 11 ಜನರು ಮೃತಪಟ್ಟಿದ್ದು,36 ಜನರು ಗಾಯಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಈ ದುರಂತಕ್ಕೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಮಧ್ಯಾಹ್ನ 1:30 ಸುಮಾರಿಗೆ ದುರಂತ ಸಂಭವಿಸಿದೆ. ರಾಸಾಯನಿಕಗಳನ್ನು ಮಿಶ್ರಗೊಳಿಸುತ್ತಿದ್ದಾಗ ಉಂಟಾದ ಘರ್ಷಣೆ ಸ್ಫೋಟಕ್ಕೆ ಕಾರಣವಾಗಿರುವಂತೆ ಕಂಡು ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೋರ್ವರು ತಿಳಿಸಿದರು.
ವಿವಿಧೆಡೆಗಳಿಂದ ತರಿಸಲಾಗಿದ್ದ 10 ಅಗ್ನಿಶಾಮಕ ಯಂತ್ರಗಳು ಗಂಟೆಗಟ್ಟಲೆ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂ. ಮತ್ತು ತೀವ್ರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ.ಪರಿಹಾರವನ್ನು ಘೋಷಿಸಿದ್ದಾರೆ. ಕೇಂದ್ರವು ಮೃತರ ಕುಟುಂಬಗಳಿಗೆ ತಲಾ ಎರಡು ಲ.ರೂ.ಮತ್ತು ಗಾಯಾಳುಗಳಿಗೆ 50,000 ರೂ.ಪರಿಹಾರವನ್ನು ಘೋಷಿಸಿದೆ.
தமிழகத்தின் விருதுநகர் தீவிபத்தில் உயிரிழந்தோர் குடும்பத்திற்கு பிரதமரின் தேசிய நிவாரண நிதியிலிருந்து ரூ 2 லட்சம் கருணைத் தொகை வழங்க ஒப்புதல் அளிக்கப் பட்டுள்ளது. தீவிர காயமடைந்தவர்களுக்கு ரூ 50, 000 வழங்கப்படும்.
— PMO India (@PMOIndia) February 12, 2021
An ex-gratia of Rs. 2 lakh each has been approved from PMNRF for the next of kin of those who have lost their lives due to a fire in Virudhunagar, Tamil Nadu. Rs. 50,000 would be given to those seriously injured.
— PMO India (@PMOIndia) February 12, 2021







