Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲದ ರಶ್ಮಿ ಸಾಮಂತ್ ಆಕ್ಸ್‌ಫರ್ಡ್...

ಮಣಿಪಾಲದ ರಶ್ಮಿ ಸಾಮಂತ್ ಆಕ್ಸ್‌ಫರ್ಡ್ ವಿವಿ ವಿದ್ಯಾರ್ಥಿ ಒಕ್ಕೂಟದ ಪ್ರಥಮ ಭಾರತೀಯ ಅಧ್ಯಕ್ಷೆ

ವಾರ್ತಾಭಾರತಿವಾರ್ತಾಭಾರತಿ12 Feb 2021 7:47 PM IST
share
ಮಣಿಪಾಲದ ರಶ್ಮಿ ಸಾಮಂತ್ ಆಕ್ಸ್‌ಫರ್ಡ್ ವಿವಿ ವಿದ್ಯಾರ್ಥಿ ಒಕ್ಕೂಟದ ಪ್ರಥಮ ಭಾರತೀಯ ಅಧ್ಯಕ್ಷೆ

ಉಡುಪಿ, ಫೆ.12: ಮಣಿಪಾಲದ ರಶ್ಮಿ ಸಾಮಂತ್ ಅವರು ವಿಶ್ವದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾದ ಆಕ್ಸ್‌ಫರ್ಡ್ ವಿದ್ಯಾರ್ಥಿ ಒಕ್ಕೂಟದ ಪ್ರಪ್ರಥಮ ಭಾರತೀಯ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಮಣಿಪಾಲ ಮಾಹೆಯ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯ ಹಳೆ ವಿದ್ಯಾರ್ಥಿಯಾಗಿರುವ ರಶ್ಮಿ ಸಾಮಂತ್, ಫೆ.11ರಂದು ಆಕ್ಸ್‌ಫರ್ಡ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಈ ಪ್ರತಿಷ್ಠಿತ ಸ್ಥಾನಕ್ಕೆ ಆಯ್ಕೆಯಾದರು. ಸಾಮಂತ್ ಗೆಲುವು ಐತಿಹಾಸಿಕ ಎನಿಸಿದ್ದು, ಆಕೆಯ ಮೂವರು ಎದುರಾಳಿಗಳು ಪಡೆದ ಒಟ್ಟು ಮತಕ್ಕಿಂತಲೂ ಆಕೆ ಹೆಚ್ಚು ಮತ ಪಡೆದು ಆಯ್ಕೆಯಾದರು.

ಆಕ್ಸ್‌ಫರ್ಡ್ ವಿವಿಯ ಲಿನಾಕ್ರಿ ಕಾಲೇಜಿನಲ್ಲಿ ಎನರ್ಜಿ ಸಿಸ್ಟಮ್ ವಿಷಯದ ಎಂಎಸ್ಸಿ ಪದವಿಗಾಗಿ ಓದುತ್ತಿರುವ ರಶ್ಮಿ ಸಾಮಂತ್, ನಾಲ್ಕು ಮುಖ್ಯ ಆದ್ಯತೆಗಳೊಂದಿಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಸ್ವಯಂಮಾಡಳಿತ ಮತ್ತು ಎಲ್ಲರ ಒಳಗೊಳ್ಳುವಿಕೆ, ಎಲ್ಲರಿಗೂ ಕೋವಿಡ್ ರಕ್ಷಣೆ, ಗುಣಮಟ್ಟದ ಮಾನಸಿಕ ಆರೋಗ್ಯ ಸಂಪನ್ಮೂಲ ಲಭ್ಯತೆ ಹಾಗೂ ವಿವಿ ಕ್ಯಾಂಪಸ್‌ನ್ನು ಇಂಗಾಲದಿಂದ ಮುಕ್ತಗೊಳಿಸುವುದು.

ಈ ಚುನಾವಣೆಯಲ್ಲಿ 4,881 ವಿದ್ಯಾರ್ಥಿಗಳು ಒಟ್ಟು 36,405 ಮತಗಳನ್ನು ಚಲಾಯಿಸಿದ್ದು, ವಿವಿ ಇತಿಹಾಸದಲ್ಲಿ ಇದೊಂದು ಅತ್ಯಧಿಕ ಮತದಾನದ ದಾಖಲೆ ಎನಿಸಿಕೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಬಿದ್ದ 3,708 ಮತಗಳಲ್ಲಿ ಸಾಮಂತ್ 1966ನ್ನು ಪಡೆದು ಭರ್ಜರಿ ಜಯ ದಾಖಲಿಸಿದರು.

ರಶ್ಮಿ ಸಾಮಂತ್ ತನ್ನ ಪ್ರಣಾಳಿಕೆಯಲ್ಲಿ, ಆಕ್ಸ್‌ಫರ್ಡ್ ವಿವಿ ಹಾಗೂ ಎಲ್ಲಾ ಸಂಬಂಧಪಟ್ಟ ಕಾಲೇಜುಗಳಲ್ಲಿರುವ ಸಾಮ್ರಾಜ್ಯಶಾಹಿಗಳ ಪ್ರತಿಮೆಗಳನ್ನು ತೆಗೆಸುವ ಬಗ್ಗೆ ವಿಶೇಷ ಪ್ರಯತ್ನ ನಡೆಸುವ, ಡಬ್ಲುಎಚ್‌ಓ ವಿಶ್ವದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಕೊನೆಗೊಂಡಿದೆ ಎಂದು ಘೋಷಿಸುವ ತನಕ ವಿದ್ಯಾರ್ಥಿಗಳ ವಸತಿಗೆ ಸಂಬಂಧಿಸಿದ ಅಗತ್ಯತೆಗಳಿಗೆ ರಿಯಾಯಿತಿ ನೀಡುವ ಬಗ್ಗೆ ಪ್ರಯತ್ನಿಸುವ, ಕಾಲೇಜುಗಳಲ್ಲಿ ಪಳೆಯುಳಿಕೆ ಇಂಧನದ ಬಳಕೆಯನ್ನು ನಿಲ್ಲಿಸುವ ಪ್ರಯತ್ನಿಸುವ ಭರವಸೆಯನ್ನೂ ನೀಡಿದ್ದರು.

ಪರಿಚಯ: ರಸ್ಮಿ ಸಾಮಂತ್ ಅವರು ಮಣಿಪಾಲದ ದಿನೇಶ್ ಸಾಮಂತ್ ಹಾಗೂ ವತ್ಸಲಾ ಸಾಮಂತರ ಪುತ್ರಿ. ಮಣಿಪಾಲ ಮತ್ತು ಉಡುಪಿಗಳಲ್ಲಿ ತನ್ನ ಆರಂಭಿಕ ಶಿಕ್ಷಣವನ್ನು ಪಡೆದ ಅವರು 2016-2020ರ ಅವಧಿಯಲ್ಲಿ ಎಂಐಟಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದರು. ಇಲ್ಲಿ ಕಲಿಯುತ್ತಿರುವಾಗಲೇ ತನ್ನ ನಾಯಕತ್ವ ಗುಣವನ್ನು ಪ್ರದರ್ಶಿಸಿದ್ದ ಅವರು ಎಂಐಟಿ ವಿದ್ಯಾರ್ಥಿ ಸಂಘದಲ್ಲಿ ತಾಂತ್ರಿಕ ಕಾರ್ಯದರ್ಶಿಯಾಗಿದ್ದರು. ಆಕೆಯ ಪ್ರಯತ್ನದಿಂದ ಎಂಐಟಿಯಲ್ಲಿ ಮಣಿಪಾಲ ಹ್ಯಾಕಥಾನ್ ಎಂಬ ಕಾರ್ಯಕ್ರಮ ಪ್ರಾರಂಭಗೊಂಡಿತ್ತು ಎಂದು ಮಾಹೆ ನೀಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X