Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡದ ಹಿಮಾಪಾತದಿಂದ ಅಪಾಯಕಾರಿ...

ಉತ್ತರಾಖಂಡದ ಹಿಮಾಪಾತದಿಂದ ಅಪಾಯಕಾರಿ ಸರೋವರ ಸೃಷ್ಟಿ: ಉಪಗ್ರಹ ಚಿತ್ರದಲ್ಲಿ ದಾಖಲು

ವಾರ್ತಾಭಾರತಿವಾರ್ತಾಭಾರತಿ12 Feb 2021 10:05 PM IST
share
ಉತ್ತರಾಖಂಡದ ಹಿಮಾಪಾತದಿಂದ ಅಪಾಯಕಾರಿ ಸರೋವರ ಸೃಷ್ಟಿ: ಉಪಗ್ರಹ ಚಿತ್ರದಲ್ಲಿ ದಾಖಲು

ಹೊಸದಿಲ್ಲಿ, ಫೆ. 12: ಹನ್ನೆರಡಕ್ಕೂ ಅಧಿಕ ಜನರು ಸಾವನ್ನಪ್ಪಲು ಹಾಗೂ ಇನ್ನೂರಕ್ಕೂ ಅಧಿಕ ಜನರು ನಾಪತ್ತೆಯಾಗಲು ಕಾರಣವಾದ ಹಿಮಪಾತದ ಅವಶೇಷಗಳ ಅಡಿಯಲ್ಲಿ ಸೃಷ್ಟಿಯಾಗಿರುವ ಅಪಾಯಕಾರಿ ಸರೋವರವನ್ನು ಅತ್ಯಧಿಕ ರೆಸಲ್ಯೂಷನ್‌ನ ಉಪಗ್ರಹ ಛಾಯಾಚಿತ್ರ ರವಿವಾರ ನಿಖರವಾಗಿ ಗುರುತಿಸಿದೆ.

ಸರೋವರದ ನೀರು ಬಿರುಕಿನ ಮೂಲಕ ರಬಸವಾಗಿ ಹೊರ ಹರಿಯುವುದರಿಂದ ಉಂಟಾಗುವ ಇನ್ನೊಂದು ದುರಂತವನ್ನು ತಪ್ಪಿಸಲು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನಾ ಪಡೆ (ಎನ್‌ಡಿಆರ್‌ಎಫ್) ಹಾಗೂ ಇತರ ಸಂಘಟನೆಗಳ ವಿಜ್ಞಾನಿಗಳು ಯೋಜನೆ ಯೊಂದನ್ನು ರೂಪಿಸುತ್ತಿದ್ದಾರೆ. ‘‘ಈ ವಿಷಯದ ಬಗ್ಗೆ ಗಮನ ಹರಿಸಲಾಗಿದೆ.

ಪರಿಸ್ಥಿತಿ ಅಂದಾಜಿಸಲು ಹಾಗೂ ಪರಿಶೀಲಿಸಲು ತಂಡಗಳು ಈಗಾಗಲೇ ತೆರಳಿವೆ. ಇದಕ್ಕಿಂತ ಮೊದಲು ತಂಡ ಈ ಪ್ರದೇಶದಲ್ಲಿ ವಿಮಾನಗಳ ಮೂಲಕ ಹಾರಾಡಿ ಪರಿಶೀಲನೆ ನಡೆಸಿವೆ. ಡ್ರೋನ್, ಮಾನವ ರಹಿತ ವಿಮಾನಗಳು, ಪಾಲುದಾರ ಏಜೆನ್ಸಿಗಳು ಅಲ್ಲಿನ ನಿಖರ ಪರಿಸ್ಥಿತಿಯನ್ನು ಅವಲೋಕನ ನಡೆಸಿವೆ’’ ಎಂದು ಎನ್‌ಡಿಆರ್‌ಎಫ್‌ನ ಪ್ರಧಾನ ನಿರ್ದೇಶಕ ಎಸ್.ಎನ್. ಪ್ರಧಾನ್ ಹೇಳಿದ್ದಾರೆ. ಅಲ್ಲಿ ನಡೆಯುತ್ತಿರುವುದನ್ನು ಗಮನಿಸಲು, ಅಂದಾಜಿಸಲು ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಾವು ಈ ಕೆಲಸದಲ್ಲಿ ತೊಡಗಿಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ. ವೇಗವಾಗಿ ಹರಿಯುವ ರೋಂಟಿ ನದಿಯಿಂದ ನೀರು ಪಡೆಯುವ ಋಷಿ ಗಂಗಾ ನದಿಯಲ್ಲಿ ತಡೆಗಳನ್ನು ಉಪಗ್ರಹ ಚಿತ್ರ ಗುರುತಿಸಿದೆ. ಫೆಬ್ರವರಿ 7ರಂದು ಸಂಭವಿಸಿದ ಹಿಮಪಾತದಿಂದ ಪ್ರವಾಹ ಹಾಗೂ ಅವಶೇಷಗಳಿಂದ ತೀವ್ರ ಹಾನಿಯಾಗಿರುವ ತಪೋವನ್ ಜಲ ವಿದ್ಯುತ್ ಘಟಕದತ್ತ ಋಷಿಗಂಗಾ ನದಿ ಹರಿಯುತ್ತಿರುವುದು ಕಂಡು ಬಂದಿದೆ. ನಾವು ಸರೋವರದ ಉದ್ದ ಹಾಗೂ ಅಗಲಗಳನ್ನು, ಅವಶೇಷಗಳ ಗೋಡೆಗಳನ್ನು ಅಂದಾಜಿಸುತ್ತಿದ್ದೇವೆ. ಇದನ್ನೆಲ್ಲ ಪರಿಶೀಲಿಸಿದ ಬಳಿಕ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲಿದ್ದೇವೆ ಎಂದು ಎನ್‌ಡಿಆರ್‌ಎಫ್‌ನ ಅಧಿಕಾರಿ ತಿಳಿಸಿದ್ದಾರೆ.

ವಿಪತ್ತಿನ ಬಳಿಕ ಪರಿಸ್ಥಿತಿ ಅವಲೋಕಿಸಲು ಸ್ಥಳಕ್ಕೆ ತೆರಳಿದ್ದ ಗರ್ವಾಲ್ ವಿಶ್ವವಿದ್ಯಾನಿಲಯದ ವೈ.ಪಿ. ಸಂಡ್ರಿಯಲ್, ಸರೋವರ ರೂಪುಗೊಂಡಿರುವುದು ಚಿಂತೆಗೆ ಕಾರಣವಾಗುವ ವಿಚಾರ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X