Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿಬಿಸಿ ಪ್ರಸಾರವನ್ನು ಸ್ಥಗಿತಗೊಳಿಸಿದ...

ಬಿಬಿಸಿ ಪ್ರಸಾರವನ್ನು ಸ್ಥಗಿತಗೊಳಿಸಿದ ಚೀನಾ

ಉಯಿಘರ್ ಮುಸ್ಲಿಮ್ ಮಹಿಳೆಯರಿಗೆ ಸಂಬಂಧಿಸಿದ ವರದಿ ಬಳಿಕ ಬೆಳವಣಿಗೆ

ವಾರ್ತಾಭಾರತಿವಾರ್ತಾಭಾರತಿ12 Feb 2021 10:37 PM IST
share
ಬಿಬಿಸಿ ಪ್ರಸಾರವನ್ನು ಸ್ಥಗಿತಗೊಳಿಸಿದ ಚೀನಾ

ಬೀಜಿಂಗ್ (ಚೀನಾ), ಫೆ. 12: ಬಿಬಿಸಿ ವರ್ಲ್ಡ್ ನ್ಯೂಸ್ ಚಾನೆಲ್‌ನ ಪ್ರಸಾರವನ್ನು ಸ್ಥಗಿತಗೊಳಿಸಿರುವುದಾಗಿ ಚೀನಾದ ಪ್ರಸಾರ ನಿಯಂತ್ರಣ ಇಲಾಖೆ ಗುರುವಾರ ಘೋಷಿಸಿದೆ. ಈ ಚಾನೆಲ್ ಚೀನಾದಲ್ಲಿನ ವರದಿಗಾರಿಕೆಗೆ ಸಂಬಂಧಿಸಿದ ಮಾರ್ಗದರ್ಶಿ ಸೂತ್ರಗಳನ್ನು ‘ಗಂಭೀರವಾಗಿ’ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಅದು ಹೇಳಿದೆ.

ಚೀನಾಕ್ಕೆ ಸಂಬಂಧಿಸಿದ ಬಿಬಿಸಿ ವರ್ಲ್ಡ್ ನ್ಯೂಸ್‌ನ ವರದಿಗಳು ಪ್ರಸಾರ ಮಾರ್ಗದರ್ಶಿ ಸೂತ್ರಗಳನ್ನು ‘ಗಂಭೀರವಾಗಿ ಉಲ್ಲಂಘಿಸಿರುವುದು’ ಕಂಡು ಬಂದಿದೆ ಎಂದು ಚೀನಾದ ನ್ಯಾಶನಲ್ ರೇಡಿಯೊ ಆ್ಯಂಡ್ ಟೆಲಿವಿಶನ್ ಅಡ್ಮಿನಿಸ್ಟ್ರೇಶನ್ (ಎನ್‌ಆರ್‌ಟಿಎ) ಹೇಳಿದೆ. ‘‘ಸುದ್ದಿಗಳು ಸತ್ಯ ಮತ್ತು ನ್ಯಾಯೋಚಿತ ಆಗಿರಬೇಕು ಹಾಗೂ ಚೀನಾದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಹಾನಿ ಮಾಡಬಾರದು ಎಂಬ ಷರತ್ತುಗಳನ್ನು ಚಾನೆಲ್ ಉಲ್ಲಂಘಿಸಿದೆ’’ ಎಂದು ಹೇಳಿಕೆಯೊಂದರಲ್ಲಿ ಅದು ಹೇಳಿದೆ.

ಚೀನಾದ ಶಿಬಿರಗಳಲ್ಲಿ ಉಯಿಘರ್ ಮುಸ್ಲಿಮ್ ಮಹಿಳೆಯರ ವಿರುದ್ಧ ನಡೆಸಲಾಗುತ್ತಿದೆಯೆನ್ನಲಾದ ಹಿಂಸೆ ಮತ್ತು ಲೈಂಗಿಕ ದೌರ್ಜನ್ಯಗಳ ಕುರಿತ ವಿವರವಾದ ವರದಿಯೊಂದು ಫೆಬ್ರವರಿ 3ರಂದು ಬಿಬಿಸಿಯಲ್ಲಿ ಪ್ರಕಟಗೊಂಡ ಬಳಿಕ ಈ ಬೆಳವಣಿಗೆ ಸಂಭವಿಸಿದೆ.

ಅದೂ ಅಲ್ಲದೆ, ಚೀನಾದ ಸರಕಾರಿ ಒಡೆತನದ ಸುದ್ದಿವಾಹಿನಿ ಸಿಜಿಟಿಎನ್‌ನ ಪ್ರಸಾರವನ್ನು ಕೆಲವು ದಿನಗಳ ಹಿಂದೆ ಬ್ರಿಟನ್‌ನಲ್ಲಿ ನಿಲ್ಲಿಸಲಾಗಿತ್ತು. ಸರಕಾರಿ ಒಡೆತನಕ್ಕೆ ಸಂಬಂಧಿಸಿದ ಬ್ರಿಟನ್‌ನ ಕಾನೂನನ್ನು ಚಾನೆಲ್ ಉಲ್ಲಂಘಿಸಿದೆ ಎಂದು ಬ್ರಿಟನ್‌ನ ಪ್ರಸಾರ ನಿಯಂತ್ರಣ ಇಲಾಖೆ ಹೇಳಿತ್ತು. ಅದಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ತೆಗೆದುಕೊಂಡಿದೆ ಎಂಬುದಾಗಿಯೂ ಹೇಳಲಾಗಿದೆ.

ಚೀನಾದಲ್ಲಿ ಪ್ರಸಾರವನ್ನು ಮುಂದುವರಿಸಲು ಬಿಬಿಸಿಗೆ ಎನ್‌ಆರ್‌ಟಿಎ ಅನುಮತಿ ನೀಡುವುದಿಲ್ಲ ಹಾಗೂ ಪರವಾನಿಗೆಯನ್ನು ಹೊಸ ವರ್ಷದಲ್ಲಿ ನವೀಕರಿಸಲು ಅದು ಸಲ್ಲಿಸಿರುವ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಎನ್‌ಆರ್‌ಟಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಬಿಸಿ ಮೇಲಿನ ನಿಷೇಧವು ಅಸ್ವೀಕಾರಾರ್ಹ ಎಂದು ಹೇಳಿರುವ ಬ್ರಿಟನ್ ವಿದೇಶ ಕಾರ್ಯದರ್ಶಿ ಡಾಮಿನಿಕ್ ರಾಬ್, ಅದು ಮಾಧ್ಯಮ ಸ್ವಾತಂತ್ರ್ಯವನ್ನು ಕಡಿತಗೊಳಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X