Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಹಲವು ರಾಜ್ಯಗಳಲ್ಲಿ ವಿಪರೀತ ಚಳಿ: ಕಂಬಳಿ...

ಹಲವು ರಾಜ್ಯಗಳಲ್ಲಿ ವಿಪರೀತ ಚಳಿ: ಕಂಬಳಿ ವಿತರಣಾ ಕಾರ್ಯ ಆರಂಭಿಸಿದ ಕೆಸಿಎಫ್ ಯುಎಇ

ವಾರ್ತಾಭಾರತಿವಾರ್ತಾಭಾರತಿ12 Feb 2021 11:17 PM IST
share
ಹಲವು ರಾಜ್ಯಗಳಲ್ಲಿ ವಿಪರೀತ ಚಳಿ: ಕಂಬಳಿ ವಿತರಣಾ ಕಾರ್ಯ ಆರಂಭಿಸಿದ ಕೆಸಿಎಫ್ ಯುಎಇ

ಯುಎಇ: ಭಾರತದ ಹಲವು ರಾಜ್ಯಗಳಲ್ಲಿ ಜನರು ಮೈಕೊರೆಸುವ ಚಳಿಯಿಂದ ತತ್ತರಿಸಿದ್ದು, ಈ ಪ್ರದೇಶಗಳ ಜನರಿಗೆ ಯುಎಇ ಕೆಸಿಎಫ್ ಸಮಿತಿಯು ಕಂಬಳಿ ವಿತರಣಾ ಕಾರ್ಯಕ್ರಮವನ್ನು ಆರಂಭಿಸಿದೆ.

ಭಾರತದ ದಿಲ್ಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ರಾಜಸ್ಥಾನ, ಪಂಜಾಬ್, ಗುಜರಾತ್ ಸೇರಿದಂತೆ ದೇಶದಾದ್ಯಂತ ಹಲವಾರು ರಾಜ್ಯಗಳು ಈ ಬಾರಿ ಮೈಕೊರೆಯುವ ಚಳಿಯಿಂದ ತತ್ತರಿಸಿವೆ. ಈ ಪ್ರದೇಶಗಳಲ್ಲಿ ಅಸಾಮಾನ್ಯ ಹವಾಮಾನದಿಂದ ಬಳಲುತ್ತಿರುವ ಅನೇಕ ಜನರನ್ನು ಗುರುತಿಸಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ಸಮಿತಿ ಕಂಬಳಿ ವಿತರಣಾ ಕಾರ್ಯವನ್ನು ಆರಂಭಿಸಿದೆ.

ಈಗಾಗಲೇ ದೇಶದ ಆಯಾ ಪ್ರದೇಶಗಳಲ್ಲಿ ಪ್ರತಿಷ್ಠಿತ ಮರ್ಕಝ್ ಸಂಸ್ಥೆಯ ನೂರಾನಿ ವಿದ್ವಾಂಸರ ಸಹಕಾರದೊಂದಿಗೆ ದಿಲ್ಲಿಯ ತೈಬಾ ಹೆರಿಟೇಜ್ ಮೂಲಕ ಹಲವಾರು ಕಂಬಳಿಗಳನ್ನು ಯುಎಇ ಕೆಸಿಎಫ್ ವಿತರಿಸಿದೆ. ದಿಲ್ಲಿಯಲ್ಲಿ ಶಾಫಿ ನೂರಾನಿ ಮತ್ತು ಅಡ್ವಕೇಟ್ ಸಿದ್ದೀಕ್, ಗುಜರಾತಿನಲ್ಲಿ ಆದಮ್ ನೂರಾನಿ ಮತ್ತು ಉಬೈದ್ ನೂರಾನಿ, ಹರ್ಯಾಣದಲ್ಲಿ ಮುಶ್ರಖ್ ರಬ್ಬಾನಿ, ಉತ್ತರ ಪ್ರದೇಶದಲ್ಲಿ ಜಲೀಲ್ ನಿಝಾಮಿ ಮತ್ತು ಖಾರಿ ಶಹೀರ್, ರಾಜಸ್ಥಾನದಲ್ಲಿ ಮುನೀಬ್ ನ‌ಈಮಿ, ವಹೀದ್ ನ‌ಈಮಿ ಮತ್ತು ವಾಹಿದ್ ಮು‌ಈನಿ, ಜಮ್ಮು ಕಾಶ್ಮೀರದಲ್ಲಿ ಶೌಕತ್ ಬುಖಾರಿ ಹಾಗೂ ಶಬೀರ್ ಸರ್ ಮತ್ತು ಪಂಜಾಬಿನಲ್ಲಿ ಮುಫ್ತಿ ಮೌಲಾನ ನೂರಾನಿ ಶಾಹ್ ಅವರ ನೇತೃತ್ವದಲ್ಲಿ ಕಂಬಳಿಗಳನ್ನು ವಿತರಿಸಲಾಗಿದೆ.

ಕೆಸಿಎಫ್‌ನ ಈ ಕಾರ್ಯವನ್ನು ಕಂಡ ದುಬೈಯ ದಾನಿಯೊಬ್ಬರು ಐದು ಲಕ್ಷ ರೂ. ಮೊತ್ತದ ಕಂಬಳಿಗಳನ್ನು ನೀಡಲು ಮುಂದೆ ಬಂದಿದ್ದಾರೆ. 

ಅಲ್ಲದೇ, ಯುಎಇ ಕೆಸಿಎಫ್‌ನ ಕನಸಿನ ಕೂಸಾದ ಬಹುನಿರೀಕ್ಷಿತ 'ದಾರುಲ್ ಅಮಾನ್' ವಸತಿ ನಿರ್ಮಾಣ ಯೋಜನೆಯ ಮುಂದುವರಿದ ಭಾಗವಾಗಿ ಉತ್ತರಾಖಂಡದ ಬೀದಿಬದಿಯಲ್ಲಿರುವ ಮನೆಯಿಲ್ಲದ ಬಡ ನಿರ್ಗತಿಕರಿಗೆ ನೆಲೆ ಕಲ್ಪಿಸುವ ಸಲುವಾಗಿ ವಸತಿ ನಿರ್ಮಾಣ ಕಾರ್ಯವನ್ನೂ ಕೂಡ ಕೆಸಿಎಫ್ ಯುಎಇ ಕೈಗೆತ್ತಿಕೊಂಡಿದೆ. ಈಗಾಗಲೇ ವಸತಿ ಸಂಕೀರ್ಣದ ಶಿಲಾನ್ಯಾಸ ನೆರವೇರಿದ್ದು, ಕೆಲಸ ಭರದಿಂದ ಸಾಗುತ್ತಿದೆ. ದಾರುಲ್ ಅಮಾನ್ ಯೋಜನೆಯ ಮೊದಲ ಮನೆಯನ್ನು ಈಗಾಗಲೇ ಉಪ್ಪಿನಂಗಡಿಯ ಪೆರ್ಣೆಯ ಅನಿಲ ದುರಂತದಲ್ಲಿ ಅನಾಥರಾದ ಮಕ್ಕಳಿಗೆ ನಿರ್ಮಿಸಿಕೊಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X