Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸ್ಕೃತಿಯ ಕೊಡುಕೊಳು್ಳವಿಕೆ ಪ್ರವೃತ್ತಿ...

ಸಂಸ್ಕೃತಿಯ ಕೊಡುಕೊಳು್ಳವಿಕೆ ಪ್ರವೃತ್ತಿ ಕುಂದಿದೆ: ಬಿ.ಜಯಶ್ರೀ

ರಂಗ ಸಾಮ್ರಾಜ್ಞಿ ಬಿರುದಿನೊಂದಿಗೆ ‘ರಂಗಭೂಮಿ ಪ್ರಶಸ್ತಿ’ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ13 Feb 2021 10:00 PM IST
share
ಸಂಸ್ಕೃತಿಯ ಕೊಡುಕೊಳು್ಳವಿಕೆ ಪ್ರವೃತ್ತಿ ಕುಂದಿದೆ: ಬಿ.ಜಯಶ್ರೀ

ಉಡುಪಿ, ಫೆ.13: ಉಡುಪಿ ರಂಗಭೂಮಿ ವತಿಯಿಂದ ಹಿರಿಯ ರಂಗ ಕರ್ಮಿ ಪದ್ಮಶ್ರೀ ಬಿ.ಜಯಶ್ರೀ ಅವರಿಗೆ ರಂಗ ಸಾಮ್ರಾಜ್ಞಿ ಬಿರುದಿನೊಂದಿಗೆ ರಂಗಭೂಮಿ ಪ್ರಶಸ್ತಿಯನ್ನು ಇಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಪ್ರದಾನ ಮಾಡಲಾಯಿತು.

ಬಳಿಕ ಮಾತನಾಡಿದ ಜಯಶ್ರೀ, ಈ ಪ್ರಶಸ್ತಿಯನ್ನು ನನ್ನನ್ನು ಬೆಳೆಸಿದ ಪ್ರಕೃತಿ ಮಾತೆ, ಕಲಾವಿದೆ, ಪ್ರೇಕ್ಷಕರಿಗೆ ಅರ್ಪಿಸುತ್ತೇನೆ. ಈ ಹಿಂದೆ ಇದ್ದು ಸಂಸ್ಕೃತಿಯ ಕೊಡು ಕೊಳ್ಳುವಿಕೆಯ ಪ್ರವೃತ್ತಿ ಈಗ ಇಲ್ಲವಾಗಿದೆ. ಇಲ್ಲಿನ ಕಲಾವಿದರು ನಮ್ಮಲ್ಲಿಗೆ ಮತ್ತು ನಾವು ಇಲ್ಲಿಗೆ ಬರುತ್ತಿದ್ದೇವು. ಈ ಮೂಲಕ ಪರಸ್ಪರ ಸಂಸ್ಕೃತಿಯ ಪರಿಚಯ ಆಗುತ್ತಿತ್ತು. ಆದರೆ ಈಗ ಆ ಕಾರ್ಯ ಆಗುತ್ತಿಲ್ಲ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಯಶ್ರೀ ಅವರಿಗೆ ಪ್ರಶಸ್ತಿ ನೀಡಿರುವುದರಿಂದ ರಂಗಭೂಮಿ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಾಟಕದ ಮೂಲಕ ಮೂಗುದಾರ ಹಾಕಿಲಾಗಿದ್ದು, ಇದು ನಾಟಕದ ಶಕ್ತಿಯನ್ನು ತೋರಿಸುತ್ತದೆ ಎಂದು ಹೇಳಿದರು.

ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಅಭಿನಂದನಾ ಭಾಷಣ ಮಾಡಿದರು. ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಭೀಮಸೇನ ಆರ್., ಹಿರಿಯ ಕಲಾ ನಿರ್ದೇಶಕ ಶಶಿಧರ ಅಡಪ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ವಹಿಸಿದ್ದರು.

ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು. ಸದಸ್ಯ ಶ್ರೀಪಾದ ಹೆಗ್ಡೆ ಪ್ರಶಸ್ತಿ ಪತ್ರ ವಾಚಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿ ಪದಕ ವಿಜೇತ ಎಎಸ್ಸೈ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಎಂ.ನಂದಕುಮಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನಾ ಜೀವಾ ತಂಡದಿಂದ ರಂಗಗೀತೆಗಳು ಜರಗಿದವು. ಕಾರ್ಯಕ್ರಮದ ನಂತರ ಮಂಗಳೂರು ಆಯನ ಮನೆ ತಂಡದಿಂದ ದ್ವೀಪ ನಾಟಕ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X