Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಘಾನ್-ಇರಾನ್ ಗಡಿಯಲ್ಲಿ ತೈಲ ಟ್ಯಾಂಕರ್...

ಅಫ್ಘಾನ್-ಇರಾನ್ ಗಡಿಯಲ್ಲಿ ತೈಲ ಟ್ಯಾಂಕರ್ ಸ್ಫೋಟ: ಭೀಕರ ಅಗ್ನಿದುರಂತ

ಹಲವಾರು ಟ್ಯಾಂಕರ್‌ಗಳು ಅಗ್ನಿಗಾಹುತಿ

ವಾರ್ತಾಭಾರತಿವಾರ್ತಾಭಾರತಿ14 Feb 2021 9:19 PM IST
share
ಅಫ್ಘಾನ್-ಇರಾನ್ ಗಡಿಯಲ್ಲಿ ತೈಲ ಟ್ಯಾಂಕರ್ ಸ್ಫೋಟ: ಭೀಕರ ಅಗ್ನಿದುರಂತ

ಕಾಬೂಲ್,ಫೆ.14: ಇರಾನ್ ಗಡಿಗೆ ತಾಗಿಕೊಂಡಿರುವ ಅಫ್ಘಾನಿಸ್ತಾನದ ಪಶ್ಚಿಮ ಹೇರತ್ ಪ್ರಾಂತ್ಯದಲ್ಲಿರುವ ಪ್ರಮುಖ ಹೆದ್ದಾರಿಯೊಂದರಲ್ಲಿ ಶನಿವಾರ ತೈಲ ಟ್ಯಾಂಕರ್ ಸ್ಪೋಟಿಸಿದ್ದರಿಂದ ಹರಡಿರುವ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ರವಿವಾರವು ಹರಸಾಹಸಪಡುತ್ತಿದ್ದಾರೆ.

 ತೈಲ ಟ್ಯಾಂಕರ್ ಸ್ಫೋಟ ಹಾಗೂ ಆನಂತರ ಸಂಭವಿಸಿದ ಅಗ್ನಿದುರಂತದಲ್ಲಿ ಕನಿಷ್ಠ 20 ಮಂದಿಗೆ ಗಾಯಗಳಾಗಿವೆ ಹಾಗೂ ಇಸ್ಲಾಂ ಖ್ವಾಲಾ ಕ್ರಾಸಿಂಗ್ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿದ್ದ ನೈಸರ್ಗಿಕ ಅನಿಲ ಹಾಗೂ ತೈಲವನ್ನು ಒಯ್ಯುವ 500ಕ್ಕೂ ಅಧಿಕ ಟ್ರಂಕ್‌ಗಳು ಬೆಂಕಿಗಾಹುತಿಯಾಗಿದ್ದು, ಇನ್ನೂ ಹೊತ್ತಿ ಉರಿಯುತ್ತಿವೆ.

  ‘‘ಅಗ್ನಿಯನ್ನು ನಿಯಂತ್ರಿಸಲು ಅಸಾಧ್ಯವಾಗುತ್ತಿದ್ದು, ನೈಸರ್ಗಿಕ ಅನಿಲದ ಸಿಲಿಂಡರ್‌ಳು ಸ್ಫೋಟಗೊಂಡು, 100 ಮೀಟರ್‌ಗಿಂತಲೂ ಅಧಿಕ ಎತ್ತರಕ್ಕೆ ಚಿಮ್ಮುತ್ತಿರುವುದು ಕಾಣುತ್ತಿದೆ ’’ ಎಂದು ಹೇರತ್ ಪ್ರಾಂತದ ಗವರ್ನರ್ ವಾಹಿದ್ ಖತಾಲಿ ತಿಳಿಸಿದ್ದಾರೆ.

 ಅಫ್ಘಾನ್-ಇರಾನ್ ಗಡಿದಾಟು ಪ್ರದೇಶದಲ್ಲಿ ನಡೆದಿರುವ ಸ್ಫೋಟಗಳನ್ನು ನಾಸಾ ಉಪಗ್ರಹಗಳು ಕೂಡಾ ಗುರುತಿಸಿವೆ. ಮೊದಲನೆ ಸ್ಪೋಟವು ಶನಿವಾರ ಮಧ್ಯಾಹ್ನ 1:10ಕ್ಕೆ ಸಂಭವಿಸಿದ್ದರೆ, ಎರಡನೆಯ ಸ್ಪೋಟವು ಅರ್ಧತಾಸಿನ ಬಳಿಕ ಉಂಟಾಗಿತ್ತು.

 ಇರಾನ್ ವಿರುದ್ಧ ಅಂತಾರಾಷ್ಟ್ರೀಯ ನಿರ್ಬಂಧವನ್ನು ವಿಧಿಸಿರುವ ಹೊರತಾಗಿಯೂ ಅಫ್ಘಾನಿಸ್ತಾನಕ್ಕೆ ಮಾತ್ರ ಆ ದೇಶದಿಂದ ತೈಲವನ್ನು ಆಮದು ಮಾಡಿಕೊಳ್ಳಲು ಅಮೆರಿಕವು ಅನುಮತಿ ನೀಡಿದೆ.

  ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಗಾಳಿಯು ಜೋರಾಗಿ ಬೀಸುತ್ತಿರುವುದರಿಂದ ಬೆಂಕಿ ಇನ್ನಷ್ಟು ಕಡೆಗೆ ಹರಡುವ ಸಾಧ್ಯತೆಯಿದ್ದು, ಇನ್ನಷ್ಟು ತೈಲ ಹೊತ್ತ ಟ್ಯಾಂಕರ್‌ಗಲಿಗೆ ಬೆಂಕಿ ಹತ್ತಿಕೊಳ್ಳುವ ಅಪಾಯವಿದೆ ಎಂದು ಹೇರತ್ ಪ್ರಾಂತೀಯ ಗವರ್ನರ್ ವಾಹಿದ್ ಖತಾಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X