Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲವ್‍ ಜಿಹಾದ್ ಕಾನೂನು ಪ್ರಸ್ತಾವ ಕೈಬಿಡಿ:...

ಲವ್‍ ಜಿಹಾದ್ ಕಾನೂನು ಪ್ರಸ್ತಾವ ಕೈಬಿಡಿ: ಜನವಾದಿ ಮಹಿಳಾ ಸಂಘಟನೆ ಕಾರ್ಯದರ್ಶಿ ಗೌರಮ್ಮ ಒತ್ತಾಯ

‘ನಮ್ಮ ಬದುಕು ನಮ್ಮ ಆಯ್ಕೆ' ದುಂಡು ಮೇಜಿನ ಸಭೆ

ವಾರ್ತಾಭಾರತಿವಾರ್ತಾಭಾರತಿ14 Feb 2021 10:16 PM IST
share

ಬೆಂಗಳೂರು, ಫೆ. 14: ರಾಜ್ಯದಲ್ಲಿ ಸಂವಿಧಾನ ಬಾಹಿರವಾಗಿ ಹುಟ್ಟು ಹಾಕಿರುವ ಅರ್ಥಹೀನವಾದ ‘ಲವ್ ಜಿಹಾದ್' ಎಂಬ ಪದದ ಕಾನೂನು ಪ್ರಸ್ತಾಪವನ್ನು ರಾಜ್ಯ ಸರಕಾರ ಕೈ ಬಿಡಬೇಕೆಂದು ಜನವಾದಿ ಮಹಿಳಾ ಸಂಘಟನೆಯ ಕಾರ್ಯದರ್ಶಿ ಗೌರಮ್ಮ ಒತ್ತಾಯಿಸಿದ್ದಾರೆ.

ರವಿವಾರ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ನಗರದ ವಿಮಾ ಕಾರ್ಪೊರೇಷನ್ ನೌಕರರ ಸಂಘದಲ್ಲಿ ನನ್ನ ಬದುಕು ನನ್ನ ಆಯ್ಕೆ ಸಂವಿಧಾನದ 21ನೇ ಪರಿಚ್ಚೇದದ ಕುರಿತು ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಂತರ್ ಜಾತಿ ವಿವಾಹವಾದ ಯುವಕ-ಯುವತಿಯರನ್ನು ಮರ್ಯಾದೆ ಹತ್ಯೆ ಹಾಗೂ ಅಂತರ್ ಧರ್ಮಿಯವಾಗಿ ಮದುವೆಯಾದ ಯುವಕ, ಯುವತಿಯರನ್ನು ಹತ್ಯೆ ಮಾಡುವುದು ಇಲ್ಲವೇ ಕಿರುಕುಳ ನೀಡುವಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗ ಇದಕ್ಕೆ ಪೂರಕವಾಗಿ ಬಿಜೆಪಿ ಸರಕಾರ ಲವ್‍ಜಿಹಾದ್‍ಗೆ ಕಾನೂನಿನ ಸ್ವರೂಪ ನೀಡಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ವಿಷಾದಿಸಿದ್ದಾರೆ.

ನಮ್ಮ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ವಿವಾಹದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ, ತಮಗೆ ಇಷ್ಟಬಂದ ಧರ್ಮಕ್ಕೆ ಮತಾಂತರಗೊಳ್ಳುವ ಹಾಗೂ ಎಲ್ಲ ಧರ್ಮಗಳನ್ನು ನಿರಾಕರಿಸಿ ಸಂವಿಧಾನಕ್ಕಷ್ಟೆ ಬದ್ಧವಾಗಿ ನಡೆದುಕೊಳ್ಳುವ ಅವಕಾಶ ನೀಡಿದೆ. ಆದರೆ, ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ನಂತರ ಸಂವಿಧಾನದ ಮೌಲ್ಯಗಳನ್ನು ನಾಶ ನಿರ್ಮೂಲನೆ ಮಾಡುವಂತಹ ಕಾನೂನುಗಳನ್ನು ಜಾರಿ ಮಾಡಲು ಮುಂದಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನೈತಿಕ ಪೊಲೀಶ್‍ಗಿರಿ ಮತ್ತಷ್ಟು ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಹಲ್ಲೆ, ಹತ್ಯೆಗೆ ಈಡಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಕಾನೂನು ವ್ಯವಸ್ಥೆ ಸಂವಿಧಾನ ಮೌಲ್ಯಗಳಿಗೆ ಬದ್ದವಾಗಿ ಕಾರ್ಯನಿರ್ವಹಿಸುವ ಮೂಲಕ ಅಂತರ್ ಜಾತಿ, ಅಂತರ್ ಧರ್ಮಿಯ ವಿವಾಹಿತರನ್ನು ರಕ್ಷಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸಭೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆಯರಾದ ವಿಮಲಾ, ಲಕ್ಷ್ಮಿ, ವಕೀಲೆ ಮೈತ್ರಿ ಕೃಷ್ಣನ್, ಎಚ್.ಜಿ.ಜಯಲಕ್ಷ್ಮಿ, ಬರಹಗಾರ ಡಾ.ಗಾಯತ್ರಿ, ಮಮತಾ, ಸುರೇಂದ್ರ ರಾವ್ ಮತ್ತಿತರರಿದ್ದರು.

ಹಕ್ಕೊತ್ತಾಯಗಳು

-ರಾಜ್ಯದಲ್ಲಿ ಸಂವಿಧಾನ ಬಾಹಿರವಾಗಿ ಹುಟ್ಟು ಹಾಕಿದ ಅರ್ಥಹೀನ ಲವ್ ಜಿಹಾದ್ ಎಂಬ ಪದದ ಕಾನೂನಿನ ಪ್ರಸ್ತಾಪ ಕೈ ಬಿಡಬೇಕು.

-ವಯಸ್ಕರ ಸಂವಿಧಾನದತ್ತ ಆಯ್ಕೆ ಸ್ವಾತಂತ್ರ್ಯವನ್ನು ಹತ್ತಿಕ್ಕಬಾರದು.

-ಸುಪ್ರೀಂಕೋರ್ಟ್ ಮತ್ತು ಹಲವು ಉಚ್ಚ ನ್ಯಾಯಾಲಯಗಳು ಆಯ್ಕೆ ಸ್ವಾತಂತ್ರ್ಯವನ್ನು ಎತ್ತಿ ಹಿಡಿದ ತೀರ್ಪುಗಳನ್ನು ಗೌರವಿಸಬೇಕು.

-ರಾಜ್ಯದಲ್ಲಿ ನಡೆದ ಮರ್ಯಾದೆಯ ಹೆಸರಿನ ಹತ್ಯೆಗಳ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಹಾಗೂ ಮರ್ಹಾದೆ ಹತ್ಯೆಗಳನ್ನು ನಿಷೇಧಿಸುವ ಕಾನೂನು ಜಾರಿ ಮಾಡಬೇಕು.

-ಅಂತರ್ ಧರ್ಮಿಯ, ಅಂತರ್ ಜಾತಿಯ ವಿವಾಹಿತರಿಗೆ ಸರಿಯಾದ ರಕ್ಷಣೆ ಮತ್ತು ಸೌಲಭ್ಯಗಳನ್ನು ಕಲ್ಪಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X