Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡ, ದುರ್ಬಲರಿಗೆ ಚಿಕಿತ್ಸೆ ನೀಡಲು ‘ಒಂದು...

ಬಡ, ದುರ್ಬಲರಿಗೆ ಚಿಕಿತ್ಸೆ ನೀಡಲು ‘ಒಂದು ರೂಪಾಯಿ ಕ್ಲಿನಿಕ್’ ಪ್ರಾರಂಭಿಸಿದ ವೈದ್ಯ

ವಾರ್ತಾಭಾರತಿವಾರ್ತಾಭಾರತಿ14 Feb 2021 11:21 PM IST
share
ಬಡ, ದುರ್ಬಲರಿಗೆ ಚಿಕಿತ್ಸೆ ನೀಡಲು ‘ಒಂದು ರೂಪಾಯಿ ಕ್ಲಿನಿಕ್’ ಪ್ರಾರಂಭಿಸಿದ ವೈದ್ಯ

ಸಾಂಬಾಲ್ಪುರ, ಫೆ. 14: ಬಡವರು ಹಾಗೂ ದುರ್ಬಲರಿಗೆ ಚಿಕಿತ್ಸೆ ಒದಗಿಸಲು ಒಡಿಶಾ ಸಾಂಬಾಲ್ಪುರ ಜಿಲ್ಲೆಯಲ್ಲಿ ವೈದ್ಯರೊಬ್ಬರು ‘ಒಂದು ರೂಪಾಯಿ’ ಕ್ಲಿನಿಕ್ ಅನ್ನು ಆರಂಭಿಸಿದ್ದಾರೆ.

ಬುರ್ಲಾದ ವೀರ್ ಸುರೇಂದ್ರ ಸಾಯಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಆ್ಯಂಡ್ ರಿಸರ್ಚ್ (ವಿಐಎಂಎಸ್‌ಎಆರ್) ನ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಂಕರ್ ರಾಮ್‌ಚಂದಾನಿ ರೋಗಿಗಳಿಗಾಗಿ ಈ ಒಂದು ರೂಪಾಯಿ ಕ್ಲಿನಿಕ್ ಅನ್ನು ಬುರ್ಲಾ ಪಟ್ಟಣದಲ್ಲಿ ಆರಂಭಿಸಿದ್ದಾರೆ.

ಕರ್ತವ್ಯದ ವೇಳೆಯ ಬಳಿಕ ಬಡವರು ಹಾಗೂ ದುರ್ಬಲರಿಗೆ ಉಚಿತ ಚಿಕಿತ್ಸೆ ನೀಡುವ ತನ್ನ ದೀರ್ಘ ಕಾಲದ ಕನಸಿನ ಒಂದು ಭಾಗ ಈ ಒಂದು ರೂಪಾಯಿ ಶುಲ್ಕದ ಕ್ಲಿನಿಕ್ ಎಂದು ರಾಮ್‌ಚಂದಾನಿ ಹೇಳಿದ್ದಾರೆ.

‘‘ನಾನು ವಿಐಎಂಎಸ್‌ಎಆರ್‌ಗೆ ಹಿರಿಯ ನಿವಾಸಿ ವೈದ್ಯನಾಗಿ ಸೇರಿದೆ. ಅಲ್ಲದೆ, ಹಿರಿಯ ನಿವಾಸಿ ವೈದ್ಯರಿಗೆ ಖಾಸಗಿಯಾಗಿ ಚಿಕಿತ್ಸೆ ನೀಡಲು ಅವಕಾಶ ಇಲ್ಲ. ಆದುದರಿಂದ ನನಗೆ ಒಂದು ರೂಪಾಯಿ ಕ್ಲಿನಿಕ್ ಆರಂಭಿಸಲು ಸಾಧ್ಯವಾಗಲಿಲ್ಲ. ಆದರೆ, ನಾನು ಇತ್ತೀಚೆಗೆ ಸಹಾಯಕ ಪ್ರಾಧ್ಯಾಪಕನಾಗಿ ಭಡ್ತಿ ಹೊಂದಿದ್ದೇನೆ. ಈಗ ನನ್ನ ಕರ್ತವ್ಯದ ವೇಳೆಯ ಬಳಿಕ ಖಾಸಗಿ ಚಿಕಿತ್ಸೆ ನೀಡುವ ಅವಕಾಶ ಇದೆ. ಆದುದರಿಂದ ನಾನು ಬಾಡಿಗೆ ಮನೆಯೊಂದರಲ್ಲಿ ಈಗ ಕ್ಲಿನಿಕ್ ಆರಂಭಿಸಿದ್ದೇನೆ’’ ಎಂದು 38 ವರ್ಷದ ರಾಮ್‌ಚಂದಾನಿ ಹೇಳಿದ್ದಾರೆ.

ಬುರ್ಲಾ ಪಟ್ಟಣದ ಕಚ್ಚಾ ಮಾರುಕಟ್ಟೆ ಪ್ರದೇಶದಲ್ಲಿ ಈ ಕ್ಲಿನಿಕ್ ಆರಂಭಿಸಲಾಗಿದೆ. ಕ್ಲಿನಿಕ್ ಬೆಳಗ್ಗೆ 7 ಗಂಟೆಯಿಂದ 8 ಗಂಟೆ ವರೆಗೆ ಹಾಗೂ ಸಂಜೆ 6 ಗಂಟೆಯಿಂದ 7 ಗಂಟೆ ವರೆಗೆ ತೆರೆದಿರಲಿದೆ. ನಿರ್ಗತಿಕರು, ದುರ್ಬಲರು, ಬಡವರು, ವೃದ್ಧರು, ಅಂಗವಿಕಲರು ಹಾಗೂ ಸರಿಯಾದ ವೈದ್ಯಕೀಯ ಸೌಲಭ್ಯ ದೊರೆಯದವರಿಗೆ ಚಿಕಿತ್ಸೆ ನೀಡುವ ಉದ್ದೇಶವನ್ನು ಈ ಒಂದು ರೂಪಾಯಿ ಕ್ಲಿನಿಕ್ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ನಾನು ಸಮುದಾಯದ ವೈದ್ಯ. ಒಂದು ವರ್ಗದ ವೈದ್ಯನಲ್ಲ ಎಂದು ಅವರು ಶಂಕರ್ ರಾಮ್‌ಚಂದಾನಿ ಹೇಳಿದ್ದಾರೆ.

ಶಂಕರ್ ರಾಮ್‌ಚಂದಾನಿ ಅವರ ಪತ್ನಿ ಶಿಖಾ ರಾಮಚಂದಾನಿ ದಂತ ಶಸ್ತ್ರಚಿಕಿತ್ಸಾ ತಜ್ಞೆ. ಅವರು ಪತಿಯ ಸೇವೆಗೆ ನೆರವು ನೀಡುತ್ತಿದ್ದಾರೆ. ಕಳೆದ ಶುಕ್ರವಾರ ಈ ಕ್ಲಿನಿಕ್ ಆರಂಭವಾಗಿದೆ. ಮೊದಲ ದಿನವೇ ಕ್ಲಿನಿಕ್‌ಗೆ 33 ರೋಗಿಗಳು ಚಿಕಿತ್ಸೆ ಪಡೆಯಲು ಆಗಮಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X