Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಿತಿ ಮೀರಿ ಮಾದಕ ದ್ರವ್ಯ ಸೇವನೆಯಿಂದ...

ಮಿತಿ ಮೀರಿ ಮಾದಕ ದ್ರವ್ಯ ಸೇವನೆಯಿಂದ 2,300ಕ್ಕೂ ಅಧಿಕ ಜನರ ಸಾವು: ಎನ್‌ಸಿಆರ್‌ಬಿ ದತ್ತಾಂಶ

ವಾರ್ತಾಭಾರತಿವಾರ್ತಾಭಾರತಿ14 Feb 2021 11:56 PM IST
share
ಮಿತಿ ಮೀರಿ ಮಾದಕ ದ್ರವ್ಯ ಸೇವನೆಯಿಂದ 2,300ಕ್ಕೂ ಅಧಿಕ ಜನರ ಸಾವು: ಎನ್‌ಸಿಆರ್‌ಬಿ ದತ್ತಾಂಶ

ಹೊಸದಿಲ್ಲಿ, ಫೆ. 14: ಭಾರತದಲ್ಲಿ ಮಿತಿಮೀರಿ ಮಾದಕ ದ್ರವ್ಯ ಸೇವನೆಯಿಂದ 2017ರಿಂದ 2019ರ ವರೆಗೆ 2,300ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಇವರಲ್ಲಿ ಅತ್ಯಧಿಕ ಜನರು 30ರಿಂದ 45 ವರ್ಷ ವಯೋಮಾನದವರು ಎಂದು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೊ (ಎನ್‌ಸಿಆರ್‌ಬಿ) ದತ್ತಾಂಶ ಹೇಳಿದೆ.

ಮಿತಿ ಮೀರಿ ಮಾದಕ ದ್ರವ್ಯ ಸೇವನೆಯಿಂದ 2017ರಲ್ಲಿ ಒಟ್ಟು 745, 2018ರಲ್ಲಿ 875 ಹಾಗೂ 2019ರಲ್ಲಿ 704 ಜನರು ಸಾವನ್ನಪ್ಪಿದ್ದಾರೆ. ರಾಜಸ್ಥಾನದಲ್ಲಿ ಅತಿ ಹೆಚ್ಚು 338 ಸಾವು ವರದಿಯಾಗಿದೆ. ಅನಂತರ ಕರ್ನಾಟಕದಲ್ಲಿ 239 ಹಾಗೂ ಉತ್ತರಪ್ರದೇಶದಲ್ಲಿ 236 ಸಾವು ದಾಖಲಾಗಿದೆ ಎಂದು ವರದಿ ಹೇಳಿದೆ.

ಮಿತಿ ಮೀರಿ ಮಾದಕ ದ್ರವ್ಯ ಸೇವನೆಯಿಂದ 14 ವಯೋಮಾನಕ್ಕಿಂತ ಕೆಳಗಿನ 55ಕ್ಕೂ ಅಧಿಕ ಮಕ್ಕಳು, 14ರಿಂದ 18 ವಯೋಮಾನದ 70 ಮಕ್ಕಳು ಸಾವನ್ನಪ್ಪಿದ್ದಾರೆ. 18ರಿಂದ 30 ವಯೋಮಾನದ ಒಟ್ಟು 624 ಜನರು ಹಾಗೂ 45ರಿಂದ 60ರ ವಯೋಮಾನದ 550 ಜನರು ಮೃತಪಟ್ಟಿದ್ದಾರೆ. 60 ಹಾಗೂ ಅದಕ್ಕಿಂತ ಹೆಚ್ಚಿನ ವಯೋಮಾನದ 241 ಜನರು ಸಾವನ್ನಪ್ಪಿದ್ದಾರೆ ಎಂದು ದತ್ತಾಂಶ ಹೇಳಿದೆ.

ಮಾದಕ ದ್ರವ್ಯ ಬಳಕೆ ನಿಯಂತ್ರಿಸಲು ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾಲಯ ಮಾದಕ ದ್ರವ್ಯದಿಂದ ಹೆಚ್ಚು ಪೀಡಿತವಾಗಿರುವ 272 ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ (ಎನ್‌ಎಂಬಿಎ)ವನ್ನು ಇತ್ತೀಚೆಗೆ ಆರಂಭಿಸಿದೆ. ಈ ಯೋಜನೆ ಮಾದಕ ದ್ರವ್ಯ ಬ್ಯೂರೊದ ಪ್ರಯತ್ನ, ಔಟ್‌ರೀಚ್, ಸಾಮಾಜಿಕ ನ್ಯಾಯ ಸಚಿವಾಲಯದಿಂದ ಜಾಗೃತಿ ಹಾಗೂ ಆರೋಗ್ಯ ಇಲಾಖೆಯ ಮೂಲಕ ಚಿಕಿತ್ಸೆಯನ್ನು ಒಳಗೊಂಡ ಮೂರು ಆಯಾಮವನ್ನು ಹೊಂದಿದೆ. ಎನ್‌ಎಂಬಿಎಯನ್ನು ಇನ್ನಷ್ಟು ಸಬಲಗೊಳಿಸಲಾಗುವುದು ಹಾಗೂ ‘ಮಾದಕ ದ್ರವ್ಯ ಬೇಡಿಕೆ ಕಡಿಮೆ ಮಾಡಲು ರಾಷ್ಟ್ರೀಯ ಕ್ರಿಯಾ ಯೋಜನೆ’ (ಎನ್‌ಎಪಿಡಿಡಿಆರ್) ಅಡಿಯಲ್ಲಿ ಮುಂದುವರಿಸಲಾಗುವುದು. ಈ ಯೋಜನೆ ಅಡಿಯಲ್ಲಿ ಮಾದಕ ದ್ರವ್ಯ ಸೇವಿಸುವವರ ವಿರುದ್ಧ ಸಾಮುದಾಯಿಕ ಸಂಘಟಕರನ್ನಾಗಿ 272 ಜಿಲ್ಲೆಗಳಲ್ಲಿ 13,000 ಯುವ ಸ್ವಯಂ ಸೇವಕರನ್ನು ತರಬೇತುಗೊಳಿಸಲಾಗುವುದು ಎಂದು ಎನ್‌ಎಂಬಿಎಯ ಹಿರಿಯ ಅಧಿಕಾರಿ ಹೇಳಿದ್ದಾರೆ.

ಎನ್‌ಎಪಿಡಿಡಿಆರ್‌ನಿಂದ 2021-22ರ ಹಣಕಾಸು ವರ್ಷದಲ್ಲಿ ಸುಮಾರು 11.80 ಲಕ್ಷ ಜನರು ಉಪಯೋಗ ಪಡೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X