Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟೂಲ್ ಕಿಟ್ ಪ್ರಕರಣ: ವಕೀಲೆ,ಸಾಮಾಜಿಕ...

ಟೂಲ್ ಕಿಟ್ ಪ್ರಕರಣ: ವಕೀಲೆ,ಸಾಮಾಜಿಕ ಕಾರ್ಯಕರ್ತೆ ನಿಕಿತಾ ಜೇಕಬ್‌ ಗೆ ಜಾಮೀನು ರಹಿತ ಬಂಧನ ವಾರಂಟ್

ವಾರ್ತಾಭಾರತಿವಾರ್ತಾಭಾರತಿ15 Feb 2021 11:51 AM IST
share
ಟೂಲ್ ಕಿಟ್ ಪ್ರಕರಣ: ವಕೀಲೆ,ಸಾಮಾಜಿಕ ಕಾರ್ಯಕರ್ತೆ ನಿಕಿತಾ ಜೇಕಬ್‌ ಗೆ ಜಾಮೀನು ರಹಿತ ಬಂಧನ ವಾರಂಟ್

ಹೊಸದಿಲ್ಲಿ, ಫೆ. 15: ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ರೈತರ ಪ್ರತಿಭಟನೆ ಕುರಿತ ‘ಟೂಲ್ ಕಿಟ್’ಗೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ್ತಿ ದಿಶಾ ರವಿಯನ್ನು ಬಂಧಿಸಿದ ಒಂದು ದಿನದ ಬಳಿಕ ದಿಲ್ಲಿ ಪೊಲೀಸರು ಸೋಮವಾರ ಇನ್ನಿಬ್ಬರು ಸಾಮಾಜಿಕ ಹೋರಾಟಗಾರರಿಗೆ ಜಾಮೀನು ರಹಿತ ಬಂಧನ ಆದೇಶ ಜಾರಿಗೊಳಿಸಿದ್ದಾರೆ.

‘‘ನಿಕಿತಾ ಜಾಕೋಬ್ ಹಾಗೂ ಶಂತನು ಅವರ ವಿರುದ್ಧ ನಾವು ಜಾಮೀನು ರಹಿತ ಬಂದನ ಆದೇಶ ಜಾರಿಗೊಳಿಸಿದ್ದೇವೆ. ಅವರಿಬ್ಬರು ಜಾಮೀನು ರಹಿತ ಆರೋಪ ಎದುರಿಸುತ್ತಿದ್ದಾರೆ. ಟೂಲ್‌ಕಿಟ್ ಪ್ರಕರಣದಲ್ಲಿ ಅವರು ಭಾಗಿಯಾಗಿರುವುದನ್ನು ವಿಶೇಷ ಸೆಲ್‌ನ ಸೈಬರ್ ಘಟಕ ಪತ್ತೆ ಮಾಡಿದೆ. ನಾವು ಅವರನ್ನು ಶೀಘ್ರದಲ್ಲಿ ಬಂಧಿಸಲಿದ್ದೇವೆ’’ ಎಂದು ದಿಲ್ಲಿ ಪೊಲೀಸ್ ವಕ್ತಾರ ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ದಿನ ನಡೆಯುವ ರೈತರ ಪ್ರತಿಭಟನೆಗೆ ಮುನ್ನ ‘ಟ್ವೀಟ್‌ಗಳ ಬಿರುಗಾಳಿ’ ಸೃಷ್ಟಿಸಲು ಗ್ರೆಟಾ ಥನ್‌ಬರ್ಗ್ ಹಂಚಿಕೊಂಡ ಟೂಲ್‌ಕಿಟ್ ಹಿಂದಿರುವ ಸಂಘಟನೆ ಸಾಮಾಜಿಕ ಹೋರಾಟಗಾರ್ತಿ ನಿಕಿತಾ ಜಾಕೋಬ್ ಅವರನ್ನು ಸಂಪರ್ಕಿಸಿತ್ತು. ಈ ಸಂಘಟನೆ ಖಲಿಸ್ತಾನ್ ಗುಂಪು ಎಂದು ನಮ್ಮ ತನಿಖೆಯಲ್ಲಿ ಬಹಿರಂಗಗೊಂಡಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯವಾದಿಯೂ ಆಗಿರುವ ನಿಕಿತಾ ಜಾಕೋಬ್ ನಾಲ್ಕು ವಾರಗಳ ಕಾಲ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಬಾಂಬೆ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅಲ್ಲದೆ ಪೊಲೀಸರು ಯಾವುದೇ ರೀತಿಯ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಪ್ರಥಮ ಮಾಹಿತಿ ವರದಿಯ ಪ್ರತಿಯನ್ನು ಕೋರಿದ್ದಾರೆ.

ಮನವಿಯಲ್ಲಿ ನಿಕಿತ ಜಾಕೋಬ್ ತನ್ನ ಮನೆಗೆ ದಿಲ್ಲಿ ಪೊಲೀಸರು ಕಳೆದ ಗುರುವಾರ ಸರ್ಚ್ ವಾರಂಟ್‌ನೊಂದಿಗೆ ಆಗಮಿಸಿದ್ದರು ಹಾಗೂ ಇಲೆಕ್ಟ್ರಾನಿಕ್ಸ್ ಸಾಧನಗಳನ್ನು ವಶಪಡಿಸಿಕೊಂಡಿ ದ್ದಾರೆ ಎಂದು ಆರೋಪಿಸಿದ್ದಾರೆ. ಟೂಲ್‌ಕಿಟ್ ದಾಖಲೆಗಳನ್ನು ತಿದ್ದಿದ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ನಿಕಿತಾ ಜಾಕೋಬ್ ಒಳಗಾಗಿದ್ದಾರೆ. ದಿಶಾ ರವಿ ಅವರು ಗ್ರೆಟಾ ಥನ್‌ಬರ್ಗ್ ಅವರ ‘ಫ್ರೈಡೇಸ್ ಫಾರ್ ಫ್ಯೂಚರ್’ ಅಭಿಯಾನದ ಭಾಗವಾಗಿದ್ದರು ಎಂದು ಹೇಳಲಾಗುತ್ತಿದೆ.

‘‘ನಾನು ಟೂಲ್‌ಕಿಟ್ ರಚಿಸಿಲ್ಲ. ರೈತರಿಗೆ ಬೆಂಬಲ ನೀಡಲು ಬಯಸಿದ್ದೆ. ಫೆಬ್ರವರಿ 3ರಂದು ಟೂಲ್‌ಕಿಟ್‌ನ ಎರಡು ಗೆರೆಗಳನ್ನು ತಿದ್ದಿದ್ದೇನೆ’’ ಎಂದು ವೌಂಟ್ ಕಾರ್ಮೆಲ್ ಕಾಲೇಜಿನ ಪದವೀಧರೆ ದಿಶಾ ರವಿ ನ್ಯಾಯಾಲಯಕ್ಕೆ ತಿಳಿಸಿದ್ದರು. ನ್ಯಾಯಾಲಯ ಅವರನ್ನು ಮುಂದಿನ ವಿಚಾರಣೆ ವರೆಗೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X