Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್ ನಲ್ಲಿ ಮುಂದುವರಿದ...

ಮ್ಯಾನ್ಮಾರ್ ನಲ್ಲಿ ಮುಂದುವರಿದ ಪ್ರತಿಭಟನೆ: ಸೇನೆಯಿಂದ ದಮನ ಕಾರ್ಯಾಚರಣೆಗೆ ವ್ಯಾಪಕ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ15 Feb 2021 10:52 PM IST
share
ಮ್ಯಾನ್ಮಾರ್ ನಲ್ಲಿ ಮುಂದುವರಿದ ಪ್ರತಿಭಟನೆ: ಸೇನೆಯಿಂದ ದಮನ ಕಾರ್ಯಾಚರಣೆಗೆ ವ್ಯಾಪಕ ಸಿದ್ಧತೆ

ಯಾಂಗನ್ (ಮ್ಯಾನ್ಮಾರ್), ಫೆ. 15: ಮ್ಯಾನ್ಮಾರ್‌ನಲ್ಲಿ ಸೇನಾ ಕ್ಷಿಪ್ರಕ್ರಾಂತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಸೇನೆಯು ಬೃಹತ್ ದಮನ ಕಾರ್ಯಾಚರಣೆಯೊಂದನ್ನು ನಡೆಸಲು ಸಿದ್ಧವಾಗುತ್ತಿದೆ ಎಂಬ ಭೀತಿ ವ್ಯಾಪಕವಾಗಿ ಹರಡುತ್ತಿರುವಂತೆಯೇ, ಪ್ರತಿಭಟನಕಾರರು ಸೋಮವಾರ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಎರಡು ವಾರಗಳ ಹಿಂದೆ ನಡೆದ ಸೇನಾ ಕ್ಷಿಪ್ರಕ್ರಾಂತಿಯ ವಿರುದ್ಧ ನಡೆಯುತ್ತಿರುವ ಬಂಡಾಯವನ್ನು ದಮನಿಸುವ ತನ್ನ ಪ್ರಯತ್ನಗಳನ್ನು ಸೇನೆಯು ನಿಧಾನವಾಗಿ ಹೆಚ್ಚಿಸುತ್ತಿದೆ.

ಫೆಬ್ರವರಿ 1ರಂದು ಕ್ಷಿಪ್ರಕ್ರಾಂತಿ ನಡೆಸಿದ ಮ್ಯಾನ್ಮಾರ್ ಸೇನೆಯು ದೇಶದ ಆಡಳಿತವನ್ನು ನಾಗರಿಕ ಸರಕಾರದಿಂದ ತನ್ನ ವಶಕ್ಕೆ ಪಡೆದುಕೊಂಡಿದೆ ಹಾಗೂ ದೇಶದ ನಾಯಕಿ ಆಂಗ್ ಸಾನ್ ಸೂ ಕಿ ಸೇರಿದಂತೆ ನೂರಾರು ನಾಗರಿಕ ನಾಯಕರನ್ನು ಬಂಧಿಸಿದೆ.

ಪ್ರತಿಭಟನೆಗಳನ್ನು ನಿಲ್ಲಿಸಲು ಜನರು ನಿರಾಕರಿಸುತ್ತಿರುವಂತೆಯೇ, ಸೇನಾ ನಾಯಕರು ಸೋಮವಾರ ಬೆಳಗ್ಗೆ ದೇಶಾದ್ಯಂತ ಇಂಟರ್‌ನೆಟ್ ಕಡಿತಗೊಳಿಸಿದರು ಹಾಗೂ ದೇಶಾದ್ಯಂತ ಸೇನೆಯ ಉಪಸ್ಥಿತಿಯನ್ನು ಹೆಚ್ಚಿಸಿದರು.

ದೇಶದ ಅತ್ಯಂತ ದೊಡ್ಡ ನಗರ ಹಾಗೂ ವಾಣಿಜ್ಯ ಕೇಂದ್ರ ಯಾಂಗನ್‌ನ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಸೈನಿಕರು ಕಂಡರು. ಸೆಂಟ್ರಲ್ ಬ್ಯಾಂಕ್ ಸಮೀಪ ಸೈನಿಕರನ್ನು ಒಯ್ಯುವ ವಾಹನಗಳು ಕಂಡುಬಂದವು.

ಆದರೆ, ಸೆಂಟ್ರಲ್ ಬ್ಯಾಂಕ್ ಸಮೀಪ ಹಾಗೂ ಇತರ ಸ್ಥಳಗಳಲ್ಲಿ ಸೋಮವಾರ ಬೆಳಗ್ಗೆ ಹೊಸದಾಗಿ ಪ್ರತಿಭಟನೆಗಳು ನಡೆದವು.

ಸೈನಿಕರಿಗೆ ತಡೆಯೊಡ್ಡಿದರೆ 20 ವರ್ಷ ಜೈಲು: ಪ್ರತಿಭಟನಕಾರರಿಗೆ ಸೇನೆ ಎಚ್ಚರಿಕೆ

ಸಶಸ್ತ್ರ ಪಡೆಗಳಿಗೆ ತಡೆಯೊಡ್ಡಿದರೆ ನೀವು 20 ವರ್ಷಗಳನ್ನು ಜೈಲಿನಲ್ಲಿ ಕಳೆಯಬಹುದಾಗಿದೆ ಎಂದು ಮ್ಯಾನ್ಮಾರ್ ಸೇನೆ ಕ್ಷಿಪ್ರಕ್ರಾಂತಿ ವಿರೋಧಿ ಪ್ರತಿಭಟನಕಾರರಿಗೆ ಎಚ್ಚರಿಸಿದೆ.

ಕ್ಷಿಪ್ರಕ್ರಾಂತಿಯ ನಾಯಕರ ವಿರುದ್ಧ ‘‘ದ್ವೇಷ ಅಥವಾ ತಿರಸ್ಕಾರ ಭಾವನೆ ಮೂಡುವಂತೆ ಮಾಡುವವರಿಗೂ’’ ಸುದೀರ್ಘ ಜೈಲುವಾಸ ಮತ್ತು ಭಾರೀ ದಂಡ ಕಾದಿದೆ ಎಂಬುದಾಗಿಯೂ ಅದು ಹೇಳಿದೆ.

ಹಲವು ನಗರಗಳ ಪ್ರಮುಖ ಬೀದಿಗಳಲ್ಲಿ ಸೇನಾ ವಾಹನಗಳು ಕಂಡುಬಂದಿರುವಂತೆಯೇ ಈ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಬಿಬಿಸಿ ಸೋಮವಾರ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X