Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್‌ವೈ ಕುಟುಂಬದ ವಿರುದ್ಧ ಯತ್ನಾಳ್...

ಬಿಎಸ್‌ವೈ ಕುಟುಂಬದ ವಿರುದ್ಧ ಯತ್ನಾಳ್ ಭ್ರಷ್ಟಾಚಾರ ಆರೋಪ: ಸುಪ್ರೀಂ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Feb 2021 7:10 PM IST
share
ಬಿಎಸ್‌ವೈ ಕುಟುಂಬದ ವಿರುದ್ಧ ಯತ್ನಾಳ್ ಭ್ರಷ್ಟಾಚಾರ ಆರೋಪ: ಸುಪ್ರೀಂ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಹೊಸದಿಲ್ಲಿ, ಫೆ.16: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಸಂಪಾದನೆ ಮಾಡಿದ್ದ ಹಣವನ್ನು ಮಾರಿಷಸ್‍ನಲ್ಲಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ಈ ಪ್ರಕರಣ ಕುರಿತು ತಕ್ಷಣ ಸುಪ್ರೀಂ ಕೋರ್ಟ್‍ನ ಹಾಲಿ ನ್ಯಾಯಾಧೀಶರ ಮೂಲಕ ತನಿಖೆಗೆ ಪ್ರಧಾನಿ ನರೇಂದ್ರ ಮೋದಿ ಆದೇಶಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಮಂಗಳವಾರ ಹೊಸದಿಲ್ಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಸಂದರ್ಭದಲ್ಲಿ ‘ನಾ ಖಾವುಂಗಾ, ನಾ ಖಾನೆದೂಂಗಾ’(ನಾನು ತಿನ್ನುವುದಿಲ್ಲ, ಬೇರೆಯವರಿಗೆ ತಿನ್ನಲೂ ಬಿಡುವುದಿಲ್ಲ) ಎಂದು ಭಾಷಣ ಮಾಡುತ್ತಿದ್ದರು. ಇವತ್ತು ಅವರ ಪಕ್ಷದ ಮುಖ್ಯಮಂತ್ರಿ ವಿರುದ್ಧ ಅವರದೇ ಪಕ್ಷದ ಹಿರಿಯ ಶಾಸಕರು ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಪ್ರಧಾನಿ ತಮ್ಮ ಹೇಳಿಕೆಗೆ ಬದ್ಧವಾಗಿರಲಿ. ಈ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೂಲಕ ತನಿಖೆಗೆ ಆದೇಶಿಸಲಿ ಎಂದರು.

ಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೋರಾಟಕ್ಕೆ ಇದು ಸೂಕ್ತ ಸಮಯವಲ್ಲ. ಕುಲಶಾಸ್ತ್ರ ಅಧ್ಯಯನ ವರದಿ ಬಂದ ನಂತರ, ರಾಜ್ಯ ಸರಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿ, ಆ ಶಿಫಾರಸ್ಸನ್ನು ಕೇಂದ್ರ ತಿರಸ್ಕರಿಸಿದರೆ ಹೋರಾಟದ ಅಗತ್ಯ ಬೀಳಲಿದೆ. ಈಗಲೇ ಹೋರಾಟ ವ್ಯರ್ಥ ಎಂದು ಸಿದ್ದರಾಮಯ್ಯ ಹೇಳಿದರು.

ಕುರುಬರ ಎಸ್ಟಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಈಶ್ವರಪ್ಪ ಬಿಜೆಪಿ ನಾಯಕ. ಮೀಸಲಾತಿಗಾಗಿ ಶಿಫಾರಸ್ಸು ಮಾಡಬೇಕಾದ, ಆ ಶಿಫಾರಸನ್ನು ಅನುಮೋದಿಸಬೇಕಾದ ಸರಕಾರಗಳು ಬಿಜೆಪಿ ಕೈಯಲ್ಲಿದೆ. ಹಾಗಾಗಿ ಇದೊಂದು ರೀತಿ ಈಶ್ವರಪ್ಪನವರ ವಿರುದ್ಧ ಈಶ್ವರಪ್ಪನೇ ಹೋರಾಟ ನಡೆಸಿದಂತೆ ಎಂದು ಅವರು ವ್ಯಂಗ್ಯವಾಡಿದರು.

ಸಂವಿಧಾನದ 15, 16 ಹಾಗೂ 340ನೇ ವಿಧಿಗಳಿಗನುಸಾರ ಅರ್ಹರಾಗಿ ಇರುವವರಿಗೆ ಮೀಸಲಾತಿ ನೀಡಲೇಬೇಕು. ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮಾತ್ರ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗಳಿಗೆ ಗುರುತು ಹಾಕಲಾಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಮನೆಗೂ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಕೆಲವರು ಬಂದಿದ್ದರು. ಆದರೆ, ನಾನು ವಿವಾದಿತ ಸ್ಥಳದಲ್ಲಿ ನಿರ್ಮಿಸುತ್ತಿರುವ ಮಂದಿರಕ್ಕೆ ದೇಣಿಗೆ ಕೊಡಲ್ಲ. ಬೇರೆ ಕಡೆ ನಿರ್ಮಿಸಿದರೆ ನೀಡುತ್ತೇನೆ ಎಂದು ಹೇಳಿ ಕಳುಹಿಸಿದ್ದೇನೆ ಎಂದರು.

ನಮ್ಮ ಮನೆಗೆ ಬಂದವರೂ ಯಾರು ಗುರುತು ಹಾಕಿ ಹೋಗಿಲ್ಲ. ಅವರ ಮನೆಗೆ ಏನಾದರೂ ಗುರುತು ಹಾಕಿದ್ದಾರಾ ಅನ್ನೋದನ್ನು ಅವರ ಬಳಿಯೆ ಕೇಳಿ ಎಂದ ಸಿದ್ದರಾಮಯ್ಯ, ಸಾರ್ವಜನಿಕರಿಂದ ಹಣ ಸಂಗ್ರಹಿಸುವವವರು ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಪಿಎಂ ಕೇರ್ಸ್ ನಿಧಿಯ ಲೆಕ್ಕವನ್ನೇ ಕೊಡದಿರುವ ಈಗಿನ ಬಿಜೆಪಿ ಸರಕಾರ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹಿಸುವ ಹಣದ ಲೆಕ್ಕ ನೀಡುತ್ತಾ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ ಎಂದರು.

ರಾಮಮಂದಿರ ನಿರ್ಮಾಣಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಇದೇ ಬಿಜೆಪಿ ಹಿಂದೊಮ್ಮೆ ರಾಮ ಮಂದಿರ ನಿರ್ಮಾಣಕ್ಕಾಗಿ ಇಟ್ಟಿಗೆ-ಹಣ ಸಂಗ್ರಹಿಸಿತ್ತಲ್ಲಾ, ಅದು ಏನಾಯಿತೆಂದು ಯಾರಿಗೂ ಗೊತ್ತಿಲ್ಲ. ಅದರ ಲೆಕ್ಕವನ್ನು ಬಿಜೆಪಿ ಮೊದಲು ಸಾರ್ವಜನಿಕರಿಗೆ ನೀಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿಪಿಎಲ್ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ನಡೆಸಿದರೆ ತಪ್ಪಲ್ಲ. ಆದರೆ ಟಿವಿ-ಬೈಕ್‍ಗಳು ಬಡತನದ ಮಾನದಂಡಗಳಲ್ಲ. ಜನ ಸಾಲ ಮಾಡಿ ಬೈಕ್-ಟಿವಿ ಇಟ್ಕೊಂಡಿರ್ತಾರೆ, ಅವರೆಲ್ಲ ಶ್ರೀಮಂತರಾ? ಬಡವರ ಸೇವೆ ಮಾಡಲು ಮನಸ್ಸಿಲ್ಲದ ಉಮೇಶ್ ಕತ್ತಿಯಂತಹವರಿಗೆ ಮಾತ್ರ ಇಂತಹ ಅಸಂಬದ್ಧ ಯೋಚನೆಗಳು ಬರುತ್ತೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ @BSYBJP ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಸಂಪಾದನೆ ಮಾಡಿದ್ದ ಹಣವನ್ನು ಮಾರಿಷಸ್‌ನಲ್ಲಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ.
ಈ ಪ್ರಕರಣ ಕುರಿತು ತಕ್ಷಣ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ಮೂಲಕ ತನಿಖೆಗೆ ಪ್ರಧಾನಿ @narendramodi ಆದೇಶಿಸಬೇಕು.

— Siddaramaiah (@siddaramaiah) February 16, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X