ಕಾಂಗ್ರೆಸ್ ಬೆಂಬಲಿತನಾಗಿ ಗೆದ್ದು ಅಧ್ಯಕ್ಷನಾಗಿ ಬಿಜೆಪಿಗೆ ಜಿಗಿದ ದೇವು ಪೂಜಾರಿ

ಉಡುಪಿ, ಫೆ.16: ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿ ಜಯಗಳಿಸಿದ್ದಲ್ಲದೇ ಪೆರ್ಡೂರು ಗ್ರಾಪಂನ ಅಧ್ಯಕ್ಷರಾಗಿಯೂ ಆಯ್ಕೆಯಾದ ದೇವು ಪೂಜಾರಿ ಇದೀಗ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಪೆರ್ಡೂರು ಗ್ರಾಪಂನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಶಾಸಕ ಲಾಲಾಜಿ ಆರ್ ಮೆಂಡನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಕುಯಿಲಾಡಿ ಸುರೇಶ್ ನಾಯಕ್, ಪಕ್ಷದ ಧ್ವಜ ನೀಡಿ ದೇವು ಪೂಜಾರಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಓಂತಿಬೆಟ್ಟು, ಪಕ್ಷದ ಮುಖಂಡರಾದ ಸುಧಾಕರ ಶೆಟ್ಟಿ, ಸುರೇಶ ಸೇರ್ವೇಗಾರ್, ಜಿಯಾನಂದ ಹೆಗ್ಡೆ, ಸತ್ಯಾನಂದ ನಾಯಕ, ತಾಲೂಕು ಪಂಚಾಯತ್ ಸದಸ್ಯ ಸುಭಾಶ್ ನಾಯ್ಕ್ ಹಾಗೂ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
Next Story





