Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ನೈಸರ್ಗಿಕ ಅನಿಲ ವಿತರಣೆ ಬಂಕ್...

ಮಂಗಳೂರು: ನೈಸರ್ಗಿಕ ಅನಿಲ ವಿತರಣೆ ಬಂಕ್ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ16 Feb 2021 10:18 PM IST
share
ಮಂಗಳೂರು: ನೈಸರ್ಗಿಕ ಅನಿಲ ವಿತರಣೆ ಬಂಕ್ ಕಾರ್ಯಾರಂಭ

ಮಂಗಳೂರು, ಫೆ.16: ಕರಾವಳಿಯ ಮೊದಲ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ವಿತರಣೆ ಬಂಕ್ ಮಂಗಳವಾರದಿಂದ ಮಂಗಳೂರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ.

ಗೈಲ್ ಗ್ಯಾಸ್ ಲಿ.ವತಿಯಿಂದ ವಾಹನಗಳಿಗೆ ಪೂರೈಕೆ ಉದ್ದೇಶದಿಂದ ಸಿಎನ್‌ಜಿ ಸ್ಥಾವರಗಳು ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಅದರಂತೆ ಮೊದಲ ಬಂಕ್ ನಗರ ಹೊರವಲಯದ ಅಡ್ಯಾರ್‌ಕಟ್ಟೆ ಬಳಿಯ ಇಂಡಿಯನ್ ಆಯಿಲ್‌ನ ನೇತ್ರಾವತಿ ಸರ್ವಿಸ್ ಸ್ಟೇಷನ್‌ನಲ್ಲಿ ಆರಂಭವಾಗಿದೆ.

ಇಂಡಿಯನ್ ಆಯಿಲ್ ಸಂಸ್ಥೆಯ ಚೀಫ್ ಡಿವಿಜನಲ್ ರಿಟೈಲ್ ಸೇಲ್ಸ್ ಮ್ಯಾನೇಜರ್ (ಸಿಡಿಆರ್‌ಎಸ್‌ಎಂ) ಅನೂಪ್ ಕುಶ್ವಾಹ್ ಬಂಕ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಂಗಳೂರು ಸ್ವಚ್ಛ ಹಸಿರು ನಗರ ಎಂದು ಪ್ರಸಿದ್ಧಿ ಪಡೆದಿದೆ. ಸಿಎನ್‌ಜಿ ಬಳಕೆ ಹಸಿರು ಪರಿಸರಕ್ಕೆ ಮತ್ತಷ್ಟು ಪೂರಕವಾಗಲಿದೆ. ವಾಯುಮಾಲಿನ್ಯ ಪ್ರಮಾಣವನ್ನೂ ಕಡಿಮೆಗೊಳಿಸಲಿದೆ. ಇತರ ಇಂಧನಗಳಿಗೆ ಹೋಲಿಸಿದರೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂದರು.

ಗೈಲ್ ಗ್ಯಾಸ್‌ನ ಚೀಫ್ ಜನರಲ್ ಮ್ಯಾನೇಜರ್ (ಸಿಜಿಡಿ ಪ್ರಾಜೆಕ್ಟ್ಸ್) ಕಪಿಲ್ ಕುಮಾರ್ ಜೈನ್, ಮಾರ್ಚ್ ಅಂತ್ಯದ ವೇಳೆಗೆ 10 ಸ್ಟೇಷನ್‌ಗಳು ಮಂಗಳೂರು ಮತ್ತು ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಲಿದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ 80-100 ಸ್ಟೇಷನ್‌ಗಳು ನಿರ್ಮಾಣ ಮಾಡಲಾಗುವುದು ಎಂದರು.

ಗೈಲ್ ಗ್ಯಾಸ್ ಡಿಜಿಎಂ ವಿಲೀನ್ ಝುಂಕೆ, ಇಂಡಿಯನ್ ಆಯಿಲ್ ಸೀನಿಯರ್ ಮ್ಯಾನೇಜರ್ ರೀಟೈಲ್ ಸೇಲ್ಸ್ ಸಿ.ಎನ್.ಶ್ರೀನಿವಾಸ್, ಅಸಿಸ್ಟೆಂಟ್ ಮ್ಯಾನೇಜರ್ ರೀಟೈಲ್ ಸೇಲ್ಸ್ ಪ್ರತಿಭಾ, ಬಂಕ್ ಮಾಲಕ ಬಾಬು ಉಪಸ್ಥಿತರಿದ್ದರು.

ಮಾಂಡೋವಿ ಮೋಟರ್ಸ್‌ ಸಹಾಯಕ ಮಾರಾಟ ಪ್ರಬಂಧಕ ಮುರಳೀಧರ್ ಬಿ.ಜೆ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

55 ರೂ.ಗೆ 1 ಕೆ.ಜಿ. ಸಿಎನ್‌ಜಿ

ಮೊದಲ ದಿನ ಸಿಎನ್‌ಜಿಗೆ 1 ಕೆ.ಜಿಗೆ 55 ರೂ. ದರವಿತ್ತು. ಮೊದಲ ಗ್ರಾಹಕ ಶಂಕರ ಭಟ್ ತಮ್ಮ ಕಾರಿಗೆ ಸಿಎನ್‌ಜಿ ಹಾಕಿಸುವ ಮೂಲಕ ಜಿಲ್ಲೆಯ ಮೊದಲ ಸಿಎನ್‌ಜಿ ಗ್ರಾಹಕ ಎಂದೆನಿಕೊಂಡರು. ಪ್ರಸ್ತುತ ಸುರತ್ಕಲ್‌ನ ಆಟೋ ಫ್ಯೂಯೆಲ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಸಿಎನ್‌ಜಿ ಕನ್ವರ್ಟರ್ ಕಿಟ್‌ಗಳು ಲಭ್ಯವಿವೆ. ಬುಧವಾರ ಎರಡನೇ ಸಿಎನ್‌ಜಿ ಬಂಕ್ ಕಾವೂರಿನಲ್ಲಿ ಆರಂಭವಾಗಲಿದೆ. ಪ್ರಸ್ತುತ ಟ್ಯಾಂಕರ್ ಮೂಲಕ ಸಿಎನ್‌ಜಿ ಪೂರೈಸಲಾಗುವುದು, ಪೈಪ್‌ಲೈನ್ ಕೆಲಸ ಪೂರ್ಣಗೊಂಡ ಬಳಿಕ ಸಂಪರ್ಕ ನೀಡಲಾಗುವುದು ಎಂದು ವಿಲೀನ್ ಝುಂಕೆ ಮಾಹಿತಿ ನೀಡಿದರು.

*ಮಾರಾಟ ಸಂಸ್ಥೆ ಮಾಹಿತಿ ಕೇಂದ್ರ

ನಗರದಲ್ಲಿ ಸಿಎನ್‌ಜಿ ವಿತರಣೆ ಆರಂಭವಾಗಿರುವುದರಿಂದ ಕಾರು, ಆಟೋ ಮಾರಾಟ ಸಂಸ್ಥೆಗಳು ತಮ್ಮ ಮಾಹಿತಿ ಕೇಂದ್ರ ಮತ್ತು ಸಿಎನ್‌ಜಿ ವಾಹನಗಳ ಪ್ರದರ್ಶನ ಬಂಕ್‌ನಲ್ಲಿ ಆರಂಭಿಸಿದೆ. ನಗರದ ಮುಂಚೂಣಿ ಕಾರು ಮಾರಾಟ ಸಂಸ್ಥೆಗಳಾದ ಮಾಂಡೋವಿ ಮೋಟರ್ಸ್‌, ಭಾರತ್ ಆಟೋ ಕಾರ್ಸ್‌ ಮತ್ತು ಆಟೋ ಮಾರಾಟ ಸಂಸ್ಥೆ ಸುಪ್ರೀಂ ಬಜಾಜ್ ಮಾಹಿತಿ ಕೇಂದ್ರಗಳು ಬಂಕ್ ಆರಂಭಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X