Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೂರ್ವ ಲಡಾಖ್: ಭಾರತ-ಚೀನಿ ಸೇನಾಪಡೆಗಳ...

ಪೂರ್ವ ಲಡಾಖ್: ಭಾರತ-ಚೀನಿ ಸೇನಾಪಡೆಗಳ ಹಿಂತೆಗೆತ ಪ್ರಕ್ರಿಯೆ ಚುರುಕು

ಚೀನಾದಿಂದ ಟೆಂಟ್,ಬಂಕರ್‌ಗಳ ತೆರವು

ವಾರ್ತಾಭಾರತಿವಾರ್ತಾಭಾರತಿ16 Feb 2021 11:17 PM IST
share
ಪೂರ್ವ ಲಡಾಖ್: ಭಾರತ-ಚೀನಿ ಸೇನಾಪಡೆಗಳ ಹಿಂತೆಗೆತ ಪ್ರಕ್ರಿಯೆ ಚುರುಕು

ಹೊಸದಿಲ್ಲಿ,ಫೆ.16: ಪೂರ್ವ ಲಡಾಖ್ನ ಪಾಂಗೊಂಗ್ ಸರೋವರದ ಉತ್ತರ ಹಾಗೂ ದಕ್ಷಿಣ ದಂಡೆಗಳಿಂದ ಸೇನಾ ಹಿಂತೆಗೆತದ ಪ್ರಕ್ರಿಯೆಯನ್ನು ಚೀನಾ ಹಾಗೂ ಭಾರತ ಮುಂದುವರಿಸಿವೆ. ಈ ಪ್ರದೇಶದಲ್ಲಿ ಚೀನಿ ಪಡೆಗಳು ಈಗಾಗಲೇ ತಮ್ಮ ಹಲವಾರು ಡೇರೆಗಳನ್ನು ಹಾಗೂ ಬಂಕರ್‌ಗಳನ್ನು ತೆರವುಗೊಳಿಸಿರುವುದಾಗಿ ವರದಿಗಳು ಬಹಿರಂಗಪಡಿಸಿವೆ.

 ಪಾಂಗೊಂಗ್ ಸರೋವರದ ದಂಡೆಗಳಿಂದ ಉಭಯ ದೇಶಗಳ ಸೇನಾಪಡೆಗಳ ಹಿಂತೆಗೆತ ಪ್ರಕ್ರಿಯೆಗೆ ಪೂರ್ಣಗೊಳ್ಳಲು ಇನ್ನೂ 6-7 ದಿನಗಳು ಬೇಕಾಗಬಹುದೆಂದು ರಕ್ಷಣಾ ಹಾಗೂ ಭದ್ರತಾ ಇಲಾಖೆಗಳ ಮೂಲಗಳು ಸೋಮವಾರ ತಿಳಿಸಿವೆ.

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಈಗಾಗಲೇ ತನ್ನ ಹಲವಾರು ಬಂಕರ್‌ಗಳು, ತಾತ್ಕಾಲಿಕ ಠಾಣೆಗಳು ಹಾಗೂ ಇತರ ಸಂರಚನೆಗಳನ್ನು ಪ್ಯಾಂಗೊಂಗ್ ಸರೋವರದ ಉತ್ತರ ದಂಡೆಯಿಂದ ತೆರವುಗೊಳಿಸಿದೆ ಹಾಗೂ ಆ ಪ್ರದೇಶದಲ್ಲಿ ತನ್ನ ಸೈನಿಕರ ಸಂಖ್ಯೆಯನ್ನು ಹಂತಹಂತವಾಗಿ ಕಡಿಮೆಗೊಳಿಸುತ್ತಿದೆ.

 9 ಸುತ್ತಿನ ಮಾತುಕತೆಗಳ ಬಳಿಕ ಕಳೆದ ವಾರ ಅಂತಿಮಗೊಂಡಿರುವ ಸೇನಾ ಹಿಂತೆಗೆತ ಪ್ರಕ್ರಿಯೆಯನ್ನು ಮುನ್ನಡೆಸಲು ಉಭಯ ಸೇನಾಪಡೆಗಳ ಫೀಲ್ಡ್ ಕಮಾಂಡರ್‌ಗಳು ಬಹುತೇಕವಾಗಿ ಪ್ರತಿದಿನವೂ ಪರಸ್ಪರ ಮಾತುಕತೆ ನಡೆಸುತ್ತಿದ್ದಾರೆ.

9 ತಿಂಗಳುಗಳ ಸಂಘರ್ಷಾವಸ್ಥೆಯ ಬಳಿಕ ಕಳೆದ ವಾರ ಉಭಯ ದೇಶಗಳ ಸೇನಾಪಡೆಗಳು ಪಾಂಗೊಂಗ್ ಸರೋವರದ ಉತ್ತರ ಹಾಗೂ ದಕ್ಷಿಣ ದಂಡೆಗಳಿಂದ ಹಿಂದೆ ಸರಿಯುವ ಒಪ್ಪಂದಕ್ಕೆ ಬಂದಿದ್ದವು. ಹಂತಹಂತವಾಗಿ, ಸಮನ್ವಯತೆಯೊಂದಿಗೆ ಹಾಗೂ ಪರಿಶೀಲಿಸಬಹುದಾದ ರೀತಿಯಲ್ಲಿ ಸೇನಾಪಡೆಗಳನ್ನು ಹಿಂತೆಗೆಯಲು ನಿರ್ಧರಿಸಿದ್ದವು. ಬುಧವಾರದಿಂದ ಸೇನಾಪಡೆಗಳ ಹಿಂತೆಗೆತ ಪ್ರಕ್ರಿಯೆ ಆರಂಭಗೊಂಡಿದೆ.

ಈ ಒಪ್ಪಂದದ ಪ್ರಕಾರ, ಪಾಂಗೊಂಗ್ ಸರೋವರದ ಉತ್ತರ ದಂಡೆಯಲ್ಲಿರುವ ಫಿಂಗರ್ 8 ಪ್ರದೇಶದಿಂದ ಚೀನಾವು ತನ್ನ ಸೇನಾಪಡೆಗಳನ್ನು ಹಿಂತೆಗೆದು ಕೊಳ್ಳಬೇಕಾಗುತ್ತದೆ ಹಾಗೂ ಅದೇ ಪ್ರದೇಶದ ಫಿಂಗರ್ 3 ಸಮೀಪದ ಧನ್‌ಸಿಂಗ್ ತಾಪಾ ಪೋಸ್ಟ್‌ನಲ್ಲಿರುವ ಖಾಯಂ ನೆಲೆಗೆ ಭಾರತೀಯ ಪಡೆಗಳು ವಾಪಾಸಾಗಲಿವೆ. ಪ್ಯಾಂಗೊಂಗ್ ಸರೋವರದ ದಕ್ಷಿಣ ದಂಡೆಯಲ್ಲಿಯೂ ಕೂಡಾ ಇದೇ ರೀತಿಯಾಗಿ ಸೇನಾ ಹಿಂತೆಗೆತ ಪ್ರಕ್ರಿಯೆ ನಡೆಯಲಿದೆಯೆಂದು ರಕ್ಷಣಾ ಸಚಿವ ರಾಜ್‌ನಾಥ್‌ಸಿಂಗ್ ಕಳೆದ ವಾರ ಲೋಕಸಭೆಗೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X