Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನನಷ್ಟ ಮೊಕದ್ದಮೆ ಪ್ರಕರಣ: ಪ್ರಿಯಾ...

ಮಾನನಷ್ಟ ಮೊಕದ್ದಮೆ ಪ್ರಕರಣ: ಪ್ರಿಯಾ ರಮಣಿಯವರನ್ನು ಖುಲಾಸೆಗೊಳಿಸಿದ ದಿಲ್ಲಿ ನ್ಯಾಯಾಲಯ

ಎಂ.ಜೆ. ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪತ್ರಕರ್ತೆ

ವಾರ್ತಾಭಾರತಿವಾರ್ತಾಭಾರತಿ17 Feb 2021 3:29 PM IST
share
ಮಾನನಷ್ಟ ಮೊಕದ್ದಮೆ ಪ್ರಕರಣ: ಪ್ರಿಯಾ ರಮಣಿಯವರನ್ನು ಖುಲಾಸೆಗೊಳಿಸಿದ ದಿಲ್ಲಿ ನ್ಯಾಯಾಲಯ

 ಹೊಸದಿಲ್ಲಿ,ಫೆ.18: ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಪತ್ರಕರ್ತೆ ಪ್ರಿಯಾ ರಮಣಿ ಅವರನ್ನು ದಿಲ್ಲಿ ನ್ಯಾಯಾಲಯ ಬುಧವಾರ ದೋಷಮುಕ್ತಗೊಳಿಸಿದೆ. 2018ರಲ್ಲಿ ನಡೆದ ‘ಮಿ ಟೂ’ ಟ್ವಿಟರ್ ಆಭಿಯಾನದಲ್ಲಿ ಪ್ರಿಯಾ ರಮಣಿ ಅವರು, ಎಂ.ಜೆ. ಅಕ್ಬರ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದರು. ಇದರ ವಿರುದ್ಧ ಎಂ.ಜೆ. ಅಕ್ಬರ್ ಅವರು 2018ರ ಅಕ್ಟೋಬರ್ 15ರಂದು ಪ್ರಿಯಾ ರಮಣಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ದಿಲ್ಲಿಯ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಅವರು ಫೆ.1ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ಫೆ.17ಕ್ಕೆ ತೀರ್ಪನ್ನು ಕಾದಿರಿಸಿದ್ದರು.

 ಇಂದು ತೀರ್ಪು ಪ್ರಕಟಿಸಿದ ರವೀಂದ್ರ ಕುಮಾರ್, ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆರೋಪಿ ಪ್ರಿಯಾ ರಮಣಿ ಅವರನ್ನು ದೋಷಮುಕ್ತಗೊಳಿಸಿದರು.‘‘ ಲೈಂಗಿಕ ಕಿರುಕುಳದಿಂದ ಸಂತ್ರಸ್ತರ ಮೇಲಾಗುವ ಪರಿಣಾಮವನ್ನು ಸಮಾಜವು ಅರಿತುಕೊಳ್ಳಬೇಕು. ಅನ್ಯಾಯಕ್ಕೊಳಗಾಗಿ ದಶಕಗಳಾದ ಬಳಿಕವೂ ಮಹಿಳೆಗೆ ತನ್ನ ನೋವನ್ನು ಹೇಳುವ ಹಕ್ಕಿದೆ’’ ಎಂದು ತೀರ್ಪಿನಲ್ಲಿ ಹೇಳಿದ್ದಾರೆ. ಕೆಲಸದ ಸ್ಥಳಗಳಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳವನ್ನು ವಿರೋಧಿಸುವ ಹಿತದೃಷ್ಟಿಯಿಂದ ಪ್ರಿಯಾ ರಮಣಿ ಅವರು ಈ ವಿಷಯಗಳನ್ನು ಬಹಿರಂಗಪಡಿಸಿದ್ದಾರೆಂದು ನ್ಯಾಯಾಲಯ ಅಭಿಪ್ರಾಯಿಸಿತು.

 ಉನ್ನತ ಸಾಮಾಜಿಕ ಸ್ಥಾನಮಾನವನ್ನು ಹೊಂದಿರುವ ವ್ಯಕ್ತಿಯೂ ಲೈಂಗಿಕ ಶೋಷಕನಾಗಿರುವ ಸಾಧ್ಯತೆಯಿರುತ್ತದೆ.ಮಹಿಳೆಯ ಘನತೆಯ ಬೆಲೆತೆತ್ತು ವ್ಯಕ್ತಿಯೊಬ್ಬನ ಪ್ರತಿಷ್ಠೆಯ ಹಕ್ಕನ್ನು ಸಂರಕ್ಷಿಸಲು ಸಾಧ್ಯವಿಲ್ಲವೆಂದು ನ್ಯಾಯಾಧೀಶರು ತೀರ್ಪಿನಲ್ಲಿ ಅಭಿಪ್ರಾಯಿಸಿದರು.

2017ರಲ್ಲಿ ಪ್ರಿಯಾ ರಮಣಿ ಅವರು ವೋಗ್ ಆಂಗ್ಲ ನಿಯತಕಾಲಿಕಕ್ಕೆ ಬರೆದ ಲೇಖನವೊಂದರಲ್ಲಿ, ಪತ್ರಿಕೆಯೊಂದರಲ್ಲಿ ಉದ್ಯೋಗಕ್ಕಾಗಿ ಸಂದರ್ಶನದ ಸಂದರ್ಭದಲ್ಲಿ ತಾನು ಪತ್ರಿಕಾಸಂಸ್ಥೆಯ ಮುಖ್ಯಸ್ಥನಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದೆ ಎಂಬುದಾಗಿ ಹೇಳಿದ್ದರು.

 ಒಂದು ವರ್ಷದ ಆನಂತರ ಟ್ವಿಟ್ಟರ್‌ನಲ್ಲಿ ನಡೆದ ಮೀ ಟೂ ಆಂದೋಲನ ದಲ್ಲಿ ಪ್ರಿಯಾ ಅವರು, ತನಗೆ ಕಿರುಕುಳ ನೀಡಿದ್ದ ವ್ಯಕ್ತಿ ಎಂ.ಜೆ. ಅಕ್ಬರ್ ಎಂಬು ದಾಗಿ ಬಹಿರಂಗಪಡಿಸಿದ್ದರು. ‘ಮೀ ಟೂ’ ಆಂದೋಲನದಲ್ಲಿ ಪಾಲ್ಗೊಂಡ ಇತರ ಕೆಲವು ಮಹಿಳೆಯರು ಕೂಡಾ ಎಂ.ಜೆ. ಅಕ್ಬರ್ ವಿರುದ್ಧ ಲೈಂಗಿಕ ದುರ್ನಡತೆಯ ಆರೋಪ ಹೊರಿಸಿದ್ದರು.

 ಪ್ರಿಯಾ ರಮಣಿ ತನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಬಳಿಕ ಎಂ.ಜೆ. ಅಕ್ಬರ್ ಅವರು ಅ.17ರಂದು ತನ್ನ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಅಲ್ಲಗಳೆದಿದ್ದರು.

ಕೇವಲ ಧ್ವನಿಯೆತ್ತಿದ್ದಕ್ಕಾಗಿ ನಾನು ಆರೋಪಿಯಾಗಿದ್ದೆ: ಪ್ರಿಯಾ

 ನ್ಯಾಯಾಲಯದ ತೀರ್ಪಿಗೆ ಪ್ರಿಯಾ ರಮಣಿ ಅವರು ಸಂತಸ ವ್ಯಕ್ತಪಡಿಸಿದ್ದು, ಇದರಿಂದಾಗಿ ಇನ್ನೂ ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಧ್ವನಿಯೆತ್ತಲು ಉತ್ತೇಜನ ದೊರೆತಿದೆ ಎಂದರು. ಸಂತ್ರಸ್ತರನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವ ಮುನ್ನ ಪ್ರಭಾವಿ ಪುರುಷರು ಎರಡು ಬಾರಿ ಯೋಚಿಸಬೇಕಾದಂತಹ ಪರಿಣಾಮವನ್ನು ಈ ತೀರ್ಪು ಸೃಷ್ಟಿಸಿದೆ ಎಂದವರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನಾನೊಬ್ಬಳು ಆರೋಪಿಯಾಗಿದ್ದೇನೆಂಬುದನ್ನು ಮರೆಯದಿರಿ ಹಾಗೂ ಕೇವಲ ಧ್ವನಿಯೆತ್ತಿದ್ದಕ್ಕಾಗಿ ನಾನು ಆರೋಪಿಯಾಗಿದ್ದೆ ರಮಣಿ ತಿಳಿಸಿದ್ದಾರೆ.

  ಲೈಂಗಿಕ ಕಿರುಕುಳದ ವಿರುದ್ಧ ಧ್ವನಿಯೆತ್ತಿದ ಎಲ್ಲಾ ಮಹಿಳೆಯರ ಪರವಾಗಿ ದೊರೆತ ಸಮರ್ಥನೆ ಇದಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ತನ್ನ ಪರವಾಗಿ ಸಾಕ್ಷಿ ನುಡಿದ ಗಝಾಲಾ ವಹಾಬ್ ಹಾಗೂ ನಿಲೋಫರ್ ವೆಂಕಟರಾಮನ್ ಅವರಿಗೂ ರಮಣಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X