Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ...

ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ : ಪೇಜಾವರಶ್ರೀ

ಕುಮಾರಸ್ವಾಮಿ ಹೇಳಿಕೆಗೆ ಮತ್ತೆ ಸ್ವಾಮೀಜಿ ಎದಿರೇಟು

ವಾರ್ತಾಭಾರತಿವಾರ್ತಾಭಾರತಿ17 Feb 2021 8:20 PM IST
share
ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ : ಪೇಜಾವರಶ್ರೀ

ಉಡುಪಿ, ಫೆ.17: ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಎಂಬುದು ಬೇನಾಮಿ ಸಂಸ್ಥೆ ಅಲ್ಲ. ಅದು ಅಧಿಕೃತವಾಗಿ ನೊಂದಣಿಗೊಂಡಿರುವ ಟ್ರಸ್ಟ್. ಟ್ರಸ್ಟ್ ನೊಂದಾವಣಿಗೆ ಅದರದ್ದೇ ಆದ ನೀತಿ ನಿಯಮಾವಳಿಗಳಿವೆ. ದೇಣಿಗೆ ಸಂಗ್ರಹ ಮಾಡಲು ಸಹ ಅದರದ್ದೇ ಆದ ಕಾನೂನಿದೆ ಎಂದು ಪೇಜಾವರ ಮಠ ಶ್ರೀವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಉಡುಪಿಯ ಪೇಜಾವರ ಮಠದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹಣ ಸಂಗ್ರಹಿಸುವುದಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸುತಿದ್ದರು.

ಟ್ರಸ್ಟ್ ನೊಂದಣಿಗೊಂಡಿರುವ ಸಂಸ್ಥೆಯಾಗಿದ್ದು, ದೇಣಿಗೆ ಸಂಗ್ರಹಿಸಲು ಅದರದ್ದೇ ಆದ ಕಾನೂನಿದೆ. ಸಂವಿಧಾನ ನಮಗೆ ಅಧಿಕಾರ ಕೊಟ್ಟಿದೆ. ಇದರಲ್ಲಿ ಪಾರದರ್ಶಕತೆ ಖಂಡಿತ ಬೇಕಾಗಿದೆ. ಸಂಶಯಗಳನ್ನು ಮುಂದಿಟ್ಟರೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು. ಇಲ್ಲಿ ಮುಚ್ಚುಮರೆ ಮಾಡಲು ಯಾವುದೆ ವಿಷಯಗಳು ನಡೆಯುವುದಿಲ್ಲ. ಆಡಿಟ್ ಆಗಿ ಅದಕ್ಕೆ ಬೇಕಾಗಿರುವ ಪುರಾವೆಗಳನ್ನು ಕೊಡಲು ಸಾಧ್ಯವಿದೆ ಎಂದವರು ಹೇಳಿದರು.

ಯಾವುದೇ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತ. ರಾಮ ಜನ್ಮಭೂಮಿ ಟ್ರಸ್ಟ್‌ನಂತೆ ಅಧಿಕೃತವಾಗಿರುವ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತಿದ್ದಾರೆ. ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಗೆ ದೇಣಿಗೆ ಸಂಗ್ರಹದ ಜವಾಬ್ದಾರಿ ನೀಡಲಾಗಿದೆ. ವಿಹಿಂಪನ ಮುಖ್ಯಸ್ಥರು ಆಯಾ ಊರಿನಲ್ಲಿ ಸಂಗ್ರಹ ನಿರತರಾಗಿದ್ದಾರೆ. ಹಿರಿಯ ಮುಂದಾಳುಗಳ ನೇತೃತ್ವದಲ್ಲಿ ಕಾರ್ಯಕರ್ತರು ನಿಧಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದರು.

ವಿಹಿಂಪ ಪುಂಡು ಪೋಕರಿಗಳ ಸಂಸ್ಥೆಯಲ್ಲ, ಇದು ಅಧಿಕೃತ ಸಂಸ್ಥೆ. ಹೀಗಾಗಿ ಇಂತಹ ಮಾತು ಬಳಸುವುದು ಯುಕ್ತವಲ್ಲ ಎಂದು ಉತ್ತರಿಸಿದ ಶ್ರೀಗಳು ಪ್ರತಿಯೊಂದು ಸಂಶಯಕ್ಕೆ ಪರಿಹಾರ ಇದೆ. ಸಂಶಯ ಇದೆ ಎಂದು ಅರೋಪ ಮಾಡಿದರೆ, ಆರೋಪದಲ್ಲಿಯೇ ಮುಗಿಯುತ್ತದೆ. ಆರೋಪಕ್ಕೆ ಪ್ರತ್ಯಾರೋಪ ಸಿಗುತ್ತದೆ, ಪ್ರಶ್ನೆಗೆ ಉತ್ತರ ಸಿಗುವುದಿಲ್ಲ, ಪ್ರಶ್ನೆ ಮಾಡಿದರೆ ಉತ್ತರ ಕೊಡಬಹುದು ಎಂದು ಪೇಜಾವರಶ್ರೀಗಳು ಮಾಜಿ ಮುಖ್ಯಮಂತ್ರಿಗಳ ಹೇಳಿಕೆಗೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X