Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಭೇಟಿಯ ವೇಳೆ 'ದೂರು ನೀಡಿದ್ದನ್ನೇ...

ರಾಹುಲ್ ಭೇಟಿಯ ವೇಳೆ 'ದೂರು ನೀಡಿದ್ದನ್ನೇ ಹೊಗಳಿಕೆಯನ್ನಾಗಿ'ಅನುವಾದಿಸಿದ ಪುದುಚ್ಚೇರಿ ಸಿಎಂ

ಸಾಮಾಜಿಕ ತಾಣದಾದ್ಯಂತ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ18 Feb 2021 11:34 AM IST
share
ರಾಹುಲ್ ಭೇಟಿಯ ವೇಳೆ ದೂರು ನೀಡಿದ್ದನ್ನೇ ಹೊಗಳಿಕೆಯನ್ನಾಗಿಅನುವಾದಿಸಿದ ಪುದುಚ್ಚೇರಿ ಸಿಎಂ

ಪುದುಚ್ಚೇರಿ: ಬುಧವಾರ ಕಾಂಗ್ರೆಸ್ ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಪುದುಚ್ಚೇರಿಯಲ್ಲಿ ಮೀನುಗಾರರ ಜತೆ ನಡೆಸಿದ ಸಾರ್ವಜನಿಕ ಸಭೆಯ ವೇಳೆ ಅವರ ಅನುವಾದಕರಾಗಿ ಕಾರ್ಯನಿರ್ವಹಿಸಿದ ಪುದುಚ್ಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರು ತಮ್ಮ ತಪ್ಪನ್ನು ಅಡಗಿಸುವ ಸಲುವಾಗಿ ಉದ್ದೇಶಪೂರ್ವಕವಾಗಿ ತಪ್ಪಾಗಿ ಅನುವಾದಿಸಿ ಪೇಚಿಗೆ ಸಿಲುಕಿದ್ದಾರಲ್ಲದೆ ಅವರ ಈ ಕೃತ್ಯ ವೀಡಿಯೋದಲ್ಲೂ ಸೆರೆಯಾಗಿ ಅದೀಗ ವೈರಲ್ ಆಗಿದೆ.

ಈ ಸಭೆಯಲ್ಲಿ  ಸಾಕಷ್ಟು ಚೆನ್ನಾಗಿಯೇ ರಾಹುಲ್ ಗಾಂಧಿ ಅವರ ಮಾತುಗಳನ್ನು ತಮಿಳು ಭಾಷೆಗೆ ಹಾಗೂ  ಸ್ಥಳಿಯರು ತಮಿಳು ಮಾತನಾಡಿದಾಗ ಅದನ್ನು ಇಂಗ್ಲಿಷಿನಲ್ಲಿ ರಾಹುಲ್ ಗೆ ವಿವರಿಸುತ್ತಿದ್ದ ನಾರಾಯಣಸ್ವಾಮಿ, ಮಹಿಳೆಯೊಬ್ಬರು ಸ್ವತಃ ಸಿಎಂ ವಿರುದ್ಧವೇ ದೂರಿದಾಗ ಉದ್ದೇಶಪೂರ್ವಕವಾಗಿ ತಪ್ಪಾಗಿ ಅನುವಾದಿಸಿದ್ದಾರೆ.

ವೀಡಿಯೋದಲ್ಲಿ ಹಸಿರು ಸೀರೆಯುಟ್ಟ ಮಹಿಳೆಯೊಬ್ಬರು ಮಾತನಾಡುತ್ತಾ, "ಕರಾವಳಿ ಪ್ರದೇಶಗಳು ಯಾವತ್ತೂ ಹೀಗೆಯೇ ಇವೆ. ಯಾರೂ ನಮಗೆ ಬೆಂಬಲ ನೀಡುತ್ತಿಲ್ಲ. ಈ ವ್ಯಕ್ತಿ (ನಾರಾಯಣಸ್ವಾಮಿ) ಕೂಡ  ಚಂಡಮಾರುತದ ಸಂದರ್ಭ ನಮ್ಮನ್ನು ಭೇಟಿಯಾಗಲು ಬಂದಿಲ್ಲ. ಬಂದಿದ್ದಾರೆಯೇ?" ಎಂದು ಹೇಳಿದಾಗ ನೆರೆದಿದ್ದ ಜನರು ಜೋರಾಗಿ ಬೊಬ್ಬೆ ಹಾಕಿ ಆಕೆಯನ್ನು ಹುರಿದುಂಬಿಸಿದ್ದರು.

ಆದರೆ ಮಹಿಳೆಯ ಮಾತನ್ನು ನಾರಾಯಣಸ್ವಾಮಿ  ಅನುವಾದಿಸಿದ ರೀತಿ ಮಾತ್ರ ಭಿನ್ನವಾಗಿತ್ತು. "ನಿವಾರ್ ಚಂಡಮಾರುತದ ಸಂದರ್ಭ ನಾನು ಇಲ್ಲಿಗೆ ಭೇಟಿ ನೀಡಿ ಅವರಿಗೆ ಪರಿಹಾರ ನೀಡಿದ್ದೇನೆಂದು ಆಕೆ ಹೇಳುತ್ತಿದ್ದಾರೆ" ಎಂದು  ಅವರು ಹೇಳಿದ್ದರು. ಈ  ವೀಡಿಯೋ ಅವರ ಫೇಸ್ ಬುಕ್ ಪುಟದಲ್ಲಿ ನೇರ ಪ್ರಸಾರವಾಗುತ್ತಿತ್ತು.

ಅರೆಕ್ಷಣದಲ್ಲಿ ಈ ವೀಡಿಯೋ ವೈರಲ್ ಆಗಿತ್ತಲ್ಲದೆ ಹಲವರು ಹಲವು ರೀತಿಯಲ್ಲಿ ಇದರ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

Dai @CMPuducherry paavi. What she said and what did you translate for @RahulGandhi pic.twitter.com/VT16oDsLWd

— Suresh N (@surnell) February 17, 2021

Puducherry's Congress CM wrongly translates what woman says about him and brazenly lies to Rahul Gandhi! #RahulGandhi #RahulRanAway pic.twitter.com/tbg8ghr6uY

— Avi Malenadu (@avinash_jh83) February 17, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X