Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೆಮಿ ಫೈನಲ್ ಸೋಲು: ಪತ್ರಿಕಾಗೋಷ್ಠಿಯಲ್ಲಿ...

ಸೆಮಿ ಫೈನಲ್ ಸೋಲು: ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಅಮೆರಿಕದ ಆಟಗಾರ್ತಿ ಸೆರೆನಾ

24ನೇ ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಳಿಸಿದ ಒಸಾಕಾ

ವಾರ್ತಾಭಾರತಿವಾರ್ತಾಭಾರತಿ18 Feb 2021 5:35 PM IST
share
ಸೆಮಿ ಫೈನಲ್ ಸೋಲು: ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಅಮೆರಿಕದ ಆಟಗಾರ್ತಿ ಸೆರೆನಾ

 ಮೆಲ್ಬೋರ್ನ್, ಫೆ.18: ಅಮೆರಿಕದ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಅವರ 24ನೇ ಗ್ರಾನ್ ಸ್ಲಾಮ್ ಪ್ರಶಸ್ತಿಯ ಕನಸು ಭಗ್ನವಾಗಿದೆ. ಗುರುವಾರ ಇಲ್ಲಿ ನಡೆದ ಮಹಿಳೆಯರ ಸಿಂಗಲ್ಸ್‌ನ ಮೊದಲ ಸೆಮಿ ಫೈನಲ್‌ನಲ್ಲಿ ಹಿರಿಯ ಆಟಗಾರ್ತಿ ಸೆರೆನಾ ಅವರು ಜಪಾನ್ ನವೊಮಿ ಒಸಾಕಾ ವಿರುದ್ಧ 6-3, 6-4 ನೇರ ಸೆಟ್ ಗಳಿಂದ ಸೋಲುಂಡರು. ಸೆರೆನಾಗೆ ಶಾಕ್ ನೀಡಿದ ಒಸಾಕಾ ಎರಡನೇ ಬಾರಿ ಆಸ್ಟ್ರೇಲಿಯ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ.
 ಈ ಆಘಾತಕಾರಿ ಸೋಲಿನಿಂದಾಗಿ 9ನೇ ಬಾರಿ ಆಸ್ಟ್ರೇಲಿಯನ್ ಓಪನ್ ಫೈನಲ್‌ಗೆ ತಲುಪಿ 24ನೇ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸುವುದರೊಂದಿಗೆ ಮಾರ್ಗರೆಟ್ ಕೋರ್ಟ್ ದಾಖಲೆಯನ್ನು ಸರಿಗಟ್ಟ ಬೇಕೆನ್ನುವ ಸೆರೆನಾರ ಕನಸು ಕನಸಾಗಿಯೇ ಉಳಿದಿದೆ.

 2018ರ ಅಮೆರಿಕ ಓಪನ್ ಫೈನಲ್ ಹಣಾಹಣಿಯ ಬಳಿಕ ಸೆರೆನಾ-ಒಸಾಕಾ ಮತ್ತೊಮ್ಮೆ ಮುಖಾಮುಖಿಯಾಗಿದ್ದರು. 39ರ ಹರೆಯದ ಅನುಭವಿ ಆಟಗಾರ್ತಿ ಸೆರೆನಾರನ್ನು ಸೋಲಿಸುವ ಮೂಲಕ ಮಹಿಳಾ ಟೆನಿಸ್‌ನ ಹೊಸ ರಾಣಿಯಾಗಿ ಹೊರಹೊಮ್ಮುವ ಮುನ್ಸೂಚನೆ ನೀಡಿದರು.
ಸೆರೆನಾ ಸೋಲಿನ ನೋವನ್ನು ತಾಳಲಾರದೆ ಪಂದ್ಯ ಬಳಿಕ ನಡೆದ ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದರು.

‘‘ನನಗೆ ಪಂದ್ಯ ಗೆಲ್ಲುವ ಸಾಕಷ್ಟು ಅವಕಾಶಗಳಿದ್ದವು. ನಾನು ಬಹಳಷ್ಟು ತಪ್ಪುಗಳನ್ನು ಎಸಗಿದೆ. ನಾನು ಮಾಡಿದ್ದ ತಪ್ಪು ನಮ್ಮಿಬ್ಬರ ಆಟದಲ್ಲಿ ವ್ಯತ್ಯಾಸ ಉಂಟು ಮಾಡಿತು’’ಎಂದು ಕಣ್ಣೀರಿಡುತ್ತಾ ಸೆರೆನಾ ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದರು.

2019ರ ಚಾಂಪಿಯನ್ ಒಸಾಕಾ ನಾಲ್ಕನೇ ಗ್ರಾನ್‌ಸ್ಲಾಮ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದು, ಮತ್ತೊಂದು ಸೆಮಿ ಫೈನಲ್‌ನಲ್ಲಿ ಜಯ ಸಾಧಿಸಲಿರುವ ಜೆನ್ನಿಫರ್ ಬ್ರಾಡಿ ಹಾಗೂ ಕರೊಲಿನಾ ಮುಚೊವಾರನ್ನು ಎದುರಿಸಲಿದ್ದಾರೆ.

‘‘ಸೆರೆನಾ ವಿರುದ್ಧ ಆಡುವುದು ಯಾವಾಗಲೂ ಒಂದು ಗೌರವ. ನಾನು ಉತ್ತಮ ಪ್ರದರ್ಶನ ನೀಡಲು ಯತ್ನಿಸಿದ್ದೆ. ನಾನು ಚಿಕ್ಕವಳಿದ್ದಾಗಲೇ ಸೆರೆನಾರ ಆಟವನ್ನು ನೋಡುತ್ತಿದ್ದೆ. ಅವರ ವಿರುದ್ಧ ಆಡುವುದು ಕನಸಾಗಿದೆ’’ ಎಂದು ಒಸಾಕಾ ಪ್ರತಿಕ್ರಿಯಿಸಿದರು.

ಮತ್ತೊಮ್ಮೆ ದಾಖಲೆ ಅಂಚಿನಲ್ಲಿ ಎಡವಿದ ಸೆರೆನಾ

 ಸೆರೆನಾ ಮತ್ತೊಮ್ಮೆ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿ ಎಡವಿದ್ದಾರೆ. 2017ರಲ್ಲಿ ಆಸ್ಟ್ರೇಲಿಯನ್ ಓಪನ್‌ನಲ್ಲಿ ಕೊನೆಯ ಬಾರಿ ಪ್ರಮುಖ ಪ್ರಶಸ್ತಿ ಎತ್ತಿಹಿಡಿದಿದ್ದರು. ಆ ನಂತರ ನಾಲ್ಕು ಬಾರಿ ಗ್ರಾನ್‌ಸ್ಲಾಮ್ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದರೂ ಪ್ರಶಸ್ತಿ ಕೈಗೆಟುಕಿಲ್ಲ. ಸೆರೆನಾ ಹಾಗೂ ಒಸಾಕಾ 2018ರಲ್ಲಿ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದಾಗ ಹಲವು ನಾಟಕೀಯ ದೃಶ್ಯಗಳು ಕಂಡುಬಂದಿತ್ತು. ಆ ಪಂದ್ಯದಲ್ಲಿ  ತಾಳ್ಮೆ ಕಳೆದುಕೊಂಡಿದ್ದ ಸೆರೆನಾ ಚೇರ್ ಅಂಪೈರ್ ಮೇಲೆ ರೇಗಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X