Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದ ಬಾಲಭವನದ ಉನ್ನತೀಕರಣಕ್ಕೆ ಯೋಜನೆ:...

ರಾಜ್ಯದ ಬಾಲಭವನದ ಉನ್ನತೀಕರಣಕ್ಕೆ ಯೋಜನೆ: ಚಿಕ್ಕಮ್ಮ ಬಸವರಾಜ್

ವಾರ್ತಾಭಾರತಿವಾರ್ತಾಭಾರತಿ18 Feb 2021 9:14 PM IST
share
ರಾಜ್ಯದ ಬಾಲಭವನದ ಉನ್ನತೀಕರಣಕ್ಕೆ ಯೋಜನೆ: ಚಿಕ್ಕಮ್ಮ ಬಸವರಾಜ್

ಉಡುಪಿ, ಫೆ.18: ರಾಜ್ಯದ 30 ಜಿಲ್ಲೆಗಳಲ್ಲಿರುವ ಬಾಲಭವನದ ಉನ್ನತೀಕರಣಕ್ಕೆ ಯೋಜನೆಗಳನ್ನು ರೂಪಿಸಿ ಅದನ್ನು ಅನುಷ್ಠಾನಗೊಳಿಸುವ ಮೂಲಕ ಅಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುವಂತೆ ಮಾಡಲು ಆದ್ಯತೆ ನೀಡಲಾಗುವುದು ಎಂದು ರಾಜ್ಯ ಬಾಲಭವನ ಸೊಸೈಟಿಯ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್ ತಿಳಿಸಿದ್ದಾರೆ.

ಉಡುಪಿ ಬ್ರಹ್ಮಗಿರಿಯಲ್ಲಿರುವ ಬಾಲಭವನಕ್ಕೆ ಭೇಟಿ ನೀಡಿ, ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಕೋವಿಡ್ ಕಾರಣದಿಂದ ಕಳೆದೊಂದು ವರ್ಷದಿಂದ ಬಾಲಭವನದಲ್ಲಿ ಮಕ್ಕಳ ಯಾವುದೇ ಕಾರ್ಯಕ್ರಮ, ಚಟುವಟಿಕೆಗಳು ನಡೆಯುತ್ತಿಲ್ಲ. ಈಗ ಶಾಲೆಗಳು ಸೇರಿದಂತೆ ಹೆಚ್ಚಿನೆಲ್ಲಾ ಚಟುವಟಿಕೆಗಳು ಪುನರಾರಂಭಗೊಂಡಿರುವುದರಿಂದ ಬಾಲಭವನದ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಸರಕಾರವನ್ನು ಕೇಳಲಾಗಿದೆ. ಅದು ದೊರೆಯುತಿದ್ದಂತೆ ಹಿಂದಿನಂತೆ ಎಲ್ಲಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದರು.

ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡುವ ಕಲಾಶ್ರೀಯನ್ನು ಪುನರಾರಂಭಿಸಬೇಕಿದೆ. ಪ್ರತಿ ಶಾಲೆಗಳಿಗೂ ಬೇಟಿ ನೀಡಿ ತೀರಾ ಬಡ, ಹಿಂದುಳಿದ ಮಕ್ಕಳನ್ನು ಬಾಲಭವನಕ್ಕೆ ಬರುವಂತೆ ನೋಡಿಕೊಳ್ಳಿ. ಇಲ್ಲಿರುವ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸಬೇಕಾಗಿದೆ. 1.02 ಎಕರೆ ಪ್ರದೇಶದಲ್ಲಿರುವ ಬಾಲಭವನದ ಆವರಣದಲ್ಲಿ ಹೂಗಿಡಗಳನ್ನು ಬೆಳೆಸಿ, ಇನ್ನಷ್ಟು ಮಕ್ಕಳ ಆಟಿಕೆಗಳನ್ನು ಅಳವಡಿಸಬೇಕಾಗಿದೆ. ತುಕ್ಕು ಹಿಡಿದಿರುವ ಜಾರುಬಂಡಿ, ಜೋಕಾಲಿಗಳನ್ನು ಬದಲಿಸಬೇಕು ಎಂದರು.

ಇಲ್ಲಿ ಇನ್ನಷ್ಟು ಸೌಲಭ್ಯ ಒದಗಿಸಬೇಕಾದ ಬೇಕಾದ ಆರ್ಥಿಕ ನೆರವಿಗೆ ಪ್ರಸ್ತಾಪವನ್ನು ಕಳುಹಿಸಿ. ವಿವಿಧ ಕಾರ್ಯಕ್ರಮಗಳ ಆಯೋಜನೆಗೂ ಸಿದ್ಧತೆ ಮಾಡಿಕೊಳ್ಳಿ. ಕೋವಿಡ್ ಸಂದರ್ಭದಲ್ಲಿ ಕೊಟ್ಟ ಅನುದಾನ ಹಾಗೆ ಉಳಿದಿದೆ. ಅವುಗಳನ್ನು ಬಳಸಿಕೊಳ್ಳಬಹುದು ಎಂದರು.

ಕಳೆದ ವರ್ಷ ಬಜೆಟ್‌ನಲ್ಲಿ ರಾಜ್ಯ ಬಾಲಭವನಕ್ಕೆ 10 ಕೋಟಿ ರೂ.ನೀಡಲಾಗಿತ್ತು. ಈ ಬಾರಿ 17 ಕೋಟಿ ರೂ.ಗಳ ಬೇಡಿಕೆಯನ್ನು ಸಲ್ಲಿಸಿದ್ದೇವೆ. ಇದರಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದ ಚಟುವಟಿಕೆಗಳನ್ನು ಪುನರಾಂಭಿಸಲಾಗುವುದು. ಅಲ್ಲದೇ ತಾಲೂಕು ಮಟ್ಟದಲ್ಲಿ ಬಾಲಭವನ ನಿರ್ಮಾಣಕ್ಕೆ ಸ್ವಂತ ಜಾಗ ಪಡೆದರೆ ಅಲ್ಲಿ ಕಟ್ಟಡ ನಿರ್ಮಾಣಕ್ಕೆ ಆನುದಾನ ಒದಗಿಸಲಾಗುವುದು. ರಾಜ್ಯದಲ್ಲೀಗ 18 ಜಿಲ್ಲೆಗಳಲ್ಲಿ ಸ್ವಂತ ಕಟ್ಟಡದಲ್ಲಿ ಬಾಲಭವನ ನಡೆಯುತ್ತಿದೆ. ಉಳಿದ 12 ಕಡೆಗಳಲ್ಲಿ ಜಿಲ್ಲಾಡಳಿತದ ಮೂಲಕ ಸ್ವಂತ ಜಮೀನು ಹೊಂದಲು ತಿಳಿಸಿದ್ದೇವೆ ಎಂದು ಚಿಕ್ಕಮ್ಮ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಆರ್., ಜಿಲ್ಲಾ ಶಿಶು ಅಭಿವೃದ್ಧಿ ಅಧಿಕಾರಿ ವೀಣಾ, ಚಂದ್ರಿಕಾ, ರಮ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X